Homeಮುಖಪುಟಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ - ತೇಜಸ್ವಿ ಸೂರ್ಯ ಆಕ್ಷೇಪ

ಕೇಂದ್ರದ ಸರ್ವಾಧಿಕಾರಿ ಧೋರಣೆ ಹೇಳಿಕೆ: ಮಾಧುಸ್ವಾಮಿ ಅಭಿನಂದಿಸಿದ ಕಾಂಗ್ರೆಸ್ – ತೇಜಸ್ವಿ ಸೂರ್ಯ ಆಕ್ಷೇಪ

- Advertisement -
- Advertisement -

‘ರಾಷ್ಟ್ರೀಯ ಐಕ್ಯತೆ ಮತ್ತು ಪ್ರಾದೇಶಿಕ ಸ್ವಾತಂತ್ಯ್ರ’ ಎಂಬ ವಿಷಯದ ಬಗ್ಗೆ ನಡೆದ ವಿಚಾರದ ಸಂಕಿರಣದಲ್ಲಿ ಮಾತನಾಡುತ್ತಾ ಸಚಿವ ಜೆ.ಸಿ. ಮಾಧುಸ್ವಾಮಿ ಅವರು, ‘ಕೇಂದ್ರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’ ಎಂದು ಕೇಂದ್ರದ ಬಿಜೆಪಿ ಸರ್ಕಾರ ವಿರುದ್ದ ಹರಿಹಾಯ್ದಿದ್ದಕ್ಕೆ ಕಾಂಗ್ರೆಸ್ ಪಕ್ಷ ಅವರನ್ನು ಅಭಿನಂದಿಸಿದೆ.

“ಕೇಂದ್ರ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ಬಹಿರಂಗವಾಗಿ ಒಪ್ಪಿ, ಖಂಡಿಸಿದ್ದಕ್ಕೆ ಮಾಧುಸ್ವಾಮಿಯವರಿಗೆ ಅಭಿನಂದನೆಗಳು! ರಾಜ್ಯಗಳ ಅಭಿಪ್ರಾಯಕ್ಕೆ ಮನ್ನಣೆ ನೀಡದೆ ರಾಜ್ಯಗಳ ವಿಷಯವಾದ ಕೃಷಿಗೆ ಸಂಬಂಧಿತ ಕಾಯ್ದೆಗಳನ್ನು ಹೇರಿ ರೈತರಿಗೆ ಮರಣ ಶಾಸನ ಬರೆಯುತ್ತಿದೆ ಕೇಂದ್ರ ಸರ್ಕಾರ. ‘ಹಿಂದಿ’ತ್ವ ಹೇರಿಕೆ & GST ತೆರಿಗೆ ಕಬಳಿಕೆಗಳು ರಾಜ್ಯಕ್ಕೆ ಮಾರಕ” ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ.

ಆದರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಚಿವ ಮಾಧುಸ್ವಾಮಿಯವರ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಕರ್ನಾಟಕದ ನೆಲೆಯಲ್ಲಿ ಯೋಚಿಸಿದಾಗ ಹಳೆ ಮೈಸೂರು ಪ್ರಾಂತ್ಯ ಅಭಿವೃದ್ದಿಯಾಗಿದೆ. ಅದರೆ ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಹಿಂದುಳಿದಿವೆ. ಹಾಗಾಗಿ ನಾವು ಅವುಗಳಿಗೆ ಒತ್ತು ನೀಡಿದಂತೆ ಕೇಂದ್ರ ಸರ್ಕಾರವು ಸಹ ಹಿಂದುಳಿದ ಉತ್ತರ ಪ್ರದೇಶ, ಬಿಹಾರದಂತಹ ರಾಜ್ಯಗಳಿಗೆ ಒತ್ತು ನೀಡುವುದು ಸರಿಯಿದೆ” ಎಂದು ಸಮರ್ಥಿಸಿಕೊಂಡಿದ್ದಾರೆ.

ಮುಂದುವರಿದು, ದೇಶದ ಇತರ ರಾಜ್ಯಗಳಲ್ಲಿಯೂ ಸಹ ಹೋಗಿ ಕರ್ನಾಟಕದ ವಿದ್ಯಾರ್ಥಿಗಳು ಓದಬಹುದು ಎಂದು ನೀಟ್ ವ್ಯವಸ್ಥೆಯನ್ನು ಸಮರ್ಥಿಸಿಕೊಂಡು ಮಾಧುಸ್ವಾಮಿ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಕೇಂದ್ರ ಸರ್ಕಾರದಲ್ಲಿ ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದ್ದು, ಒಕ್ಕೂಟಕ್ಕೆ ಬಹಳ ದೊಡ್ಡ ಆತಂಕ ಎದುರಾಗಿದೆ. ಬೆಳೆದಂತೆ ಉದಾರವಾದಿಗಳಾಗಬೇಕಾಗಿದ್ದ ನಾವು ಪ್ರಸ್ತುತ ಕೇಂದ್ರೀಕರಣ ಆಗುತ್ತಿದ್ದೇವೆ. ನೀಟ್ ಪರೀಕ್ಷಗೂ, ಕರ್ನಾಟಕಕ್ಕೂ ಏನ್‌ ಸಂಬಂಧವಿದೆ?” ಎಂದು ಮಾಧುಸ್ವಾಮಿ ನಿನ್ನೆ ಹೇಳಿದ್ದರು. ಅಲ್ಲದೇ ಪಕ್ಕದಲ್ಲೇ ಕೂತಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ನೀವಿದನ್ನು ಸಂಸತ್ತಿನಲ್ಲಿ ಕೇಳಬೇಕು ಎಂದು ಎಚ್ಚರಿಸಿದ್ದರು.

“ಕರ್ನಾಟಕದಲ್ಲಿ ಇರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಅವಕಾಶ ಇಲ್ಲ. ತುಮಕೂರಿನಲ್ಲಿ ಪ್ರಧಾನಿ ಉದ್ಘಾಟನೆ ಮಾಡಿದ ಫುಡ್ ಪಾರ್ಕ್, ಬೆಂಗಳೂರಿನಲ್ಲಿರುವ ಕಂಪನಿಗಳು.. ಹೀಗೆ ಎಲ್ಲಿಯೂ ಕನ್ನಡಿಗರಿಗೆ ಆದ್ಯತೆ ಇಲ್ಲ. ಜಾಗ, ಸೌಲಭ್ಯ ಎಲ್ಲವೂ ನಮ್ಮದಾದರೂ ಉದ್ಯೋಗ ಮಾತ್ರ ಬೇರೆಯವರಿಗೆ ಸೇರಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.


ಇದನ್ನೂ ಓದಿ: ‘ಸರ್ವಾಧಿಕಾರಿ ಧೋರಣೆ ಪ್ರಾರಂಭವಾಗಿದೆ’- ಕೇಂದ್ರದ ವಿರುದ್ದವೆ ಹರಿಹಾಯ್ದ ಸಚಿವ ಮಾಧುಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...