Homeಚಳವಳಿಸಾರ್ವಜನಿಕ ಸುರಕ್ಷತೆ ಕಾರಣ- ದೆಹಲಿಯ ಗಡಿಗಳಲ್ಲಿ ಇಂಟರ್ನೆಟ್ ಬಂದ್ ಮುಂದುವರಿಕೆ

ಸಾರ್ವಜನಿಕ ಸುರಕ್ಷತೆ ಕಾರಣ- ದೆಹಲಿಯ ಗಡಿಗಳಲ್ಲಿ ಇಂಟರ್ನೆಟ್ ಬಂದ್ ಮುಂದುವರಿಕೆ

- Advertisement -
- Advertisement -

ಕಳೆದ ನವೆಂಬರ್‌ನಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ನಡೆಸುತ್ತಿರುವ ರೈತರು, ಶನಿವಾರ(ಇಂದು) ಕೇಂದ್ರ ಸರ್ಕಾರದ ದಬ್ಬಾಳಿಕೆ ವಿರುದ್ದ ಪ್ರತಿಭಟಿಸಲು ಮೂರು ಗಂಟೆಗಳ ಚಕ್ಕಾ ಜಾಮ್‌ಗೆ ಕರೆ ನೀಡಿದ್ದರು. ಆದರೆ ಕೇಂದ್ರ ಸರ್ಕಾರವು ತನ್ನ ದಬ್ಬಾಳಿಕೆಯನ್ನು ಮತ್ತೇ ಮುಂದುವರೆಸಿದೆ.

ಗೃಹ ವ್ಯವಹಾರಗಳ ಸಚಿವಾಲಯವು ಪ್ರತಿಭಟನೆ ನಡೆಸುತ್ತಿರುವ ಗಡಿಗಳಲ್ಲಿ ಇಂಟರ್ನೆಟ್‌ ಸ್ಥಗಿತವನ್ನು ಮುಂದುವರೆಸಿದ್ದು, ಅದು ಈ ದಿನದ ಅಂತ್ಯದವರೆಗೆ ಇರುತ್ತದೆ ಎಂದು ಆದೇಶವನ್ನು ಹೊರಡಿಸಿದೆ. ಈ ಆದೇಶವನ್ನು ಚಕ್ಕಾ ಜಾಮ್‌ಗಿಂತ ಒಂದು ದಿನ ಮುಂಚಿತವಾಗಿಯೆ ಹೊರಡಿಸಲಾಗಿತ್ತು.

ಇದನ್ನೂ ಓದಿ: ‘ನನಗಿಂತಲೂ ನೊಂದವರಿದ್ದಾರೆ, ಜೈಲೊಳಗಿನ ರೈತರ ಕುರಿತು ವರದಿ ಮಾಡುವೆ’: ಮಂದೀಪ್ ಪುನಿಯಾ

“ಸಾರ್ವಜನಿಕ ಸುರಕ್ಷತೆಯನ್ನು ಕಾಪಾಡಿಕೊಳ್ಳುವುದು ಮತ್ತು ತುರ್ತು ಪರಿಸ್ಥಿತಿಯನ್ನು ತಪ್ಪಿಸುವ  ಹಿತದೃಷ್ಟಿಯಿಂದ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಲಾಗಿದೆ” ಎಂದು ಫೆಬ್ರವರಿ 5 ರಂದು ಹೊರಡಿಸಲಾದ ಆದೇಶದಲ್ಲಿ ತಿಳಿಸಲಾಗಿದೆ. ಸಿಂಘು, ಗಾಜಿಪುರ, ಟಿಕ್ರಿ ಗಡಿಗಳು ಸುತ್ತಮುತ್ತಲಿನ ಪ್ರದೇಶಗಳು ಈ ಅಮಾನತು ಆದೇಶದ ವ್ಯಾಪ್ತಿಗೆ ಬರುತ್ತವೆ.

ಇದನ್ನೂ ಓದಿ: ಆಂತರಿಕ ವ್ಯವಹಾರಗಳಿಗೆ ತಲೆ ಹಾಕಬೇಡಿ: ಭಾರತಕ್ಕೆ ಮೀನಾ ಹ್ಯಾರಿಸ್ ನೀಡಿದ ಪ್ರತ್ಯುತ್ತರ ಏನು ಗೊತ್ತಾ?

ಜನವರಿ 26 ರಂದು ರೈತರ ಟ್ರಾಕ್ಟರ್ ರ್‍ಯಾಲಿಯಲ್ಲಿ ನಡೆದ ಅಹಿತಕರ ಘಟನೆಯ ಗೃಹ ಸಚಿವಾಲಯವು ಮೊದಲ ಬಾರಿಗೆ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲು ಆದೇಶಿಸಿತ್ತು. ಅಂದಿನಿಂದ, ಈ ಗಡಿ ಪ್ರದೇಶಗಳಲ್ಲಿ ನಿಯಮಿತವಾಗಿ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲಾಗುತ್ತಿದೆ.

ದೆಹಲಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡವನ್ನು ಹೊರತುಪಡಿಸಿ ದೇಶಾದ್ಯಂತ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಮಧ್ಯಾಹ್ನ 12 ರಿಂದ ಮಧ್ಯಾಹ್ನ 3 ರವರೆಗೆ ತಡೆಹಿಡಿಯುವಂತೆ ಪ್ರತಿಭಟನಾ ನಿರತ ರೈತರು ಕರೆ ನೀಡಿತ್ತು.

ಇದನ್ನೂ ಓದಿ: ‘ಕಾಣೆಯಾದವರ’ ಪರ ಹೋದವರನ್ನೂ ಸಿಲುಕಿಸುತ್ತಿರುವ ದೆಹಲಿ ಪೊಲೀಸರು: ವಕೀಲರಿಂದ ಫೆ. 8ಕ್ಕೆ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...