Homeಮುಖಪುಟಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಕಾಂಗ್ರೆಸ್ ಹೆಸರು ಕೊಡದಿದ್ದರೂ ಶಶಿ ತರೂರ್‌ಗೆ ಸ್ಥಾನ

- Advertisement -
- Advertisement -

ಭಯೋತ್ಪಾದನೆ ವಿಚಾರದಲ್ಲಿ ಭಾರತ ಶೂನ್ಯ ಸಹಿಷ್ಣುತೆ ಹೊಂದಿದೆ ಎಂಬ ದೃಢವಾದ ನಿಲುವನ್ನು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರ ರಚಿಸಿದೆ.

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿದೆ.

“ಸರ್ವಪಕ್ಷ ಸಂದರ ನಿಯೋಗ ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸುವ ದೇಶದ ದೃಢ ನಿರ್ಧಾರವನ್ನು ವಿಶ್ವಕ್ಕೆ ತಿಳಿಸಲಿದೆ. ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಎಂಬ ದೇಶದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲಿದೆ” ಎಂದು ಸಚಿವಾಲಯ ಹೇಳಿದೆ.

ವಿವಿಧ ಪಕ್ಷಗಳ ಸಂಸತ್ ಸದಸ್ಯರು, ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಗಣ್ಯ ರಾಜತಾಂತ್ರಿಕರು ನಿಯೋಗದ ಭಾಗವಾಗಿರುತ್ತಾರೆ ಎಂದು ತಿಳಿಸಿದೆ.

ಸರ್ವಪಕ್ಷ ನಿಯೋಗದ ಸದಸ್ಯರ ಹೆಸರು ಹೀಗಿದೆ..

  1. ಶಶಿ ತರೂರ್, ಕಾಂಗ್ರೆಸ್

2) ರವಿಶಂಕರ್ ಪ್ರಸಾದ್, ಬಿಜೆಪಿ

3) ಸಂಜಯ್ ಕುಮಾರ್ ಝಾ, ಜೆಡಿಯು

4) ಬೈಜಯಂತ್ ಪಾಂಡೆ, ಬಿಜೆಪಿ

5) ಕನಿಮೋಳಿ ಕರುಣಾನಿಧಿ, ಡಿಎಂಕೆ

6) ಸುಪ್ರಿಯಾ ಸುಳೆ, ಎನ್‌ಸಿಪಿ

7) ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ

ಕಾಂಗ್ರೆಸ್ ಪಟ್ಟಿಯಲ್ಲಿ ಶಶಿ ತರೂರ್ ಹೆಸರಿಲ್ಲ

ಸರ್ಕಾರ ಬಿಡುಗಡೆ ಮಾಡಿರುವ ಸರ್ವಪಕ್ಷ ನಿಯೋಗದ ಸದಸ್ಯರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರಂಭದಲ್ಲೇ ಇದೆ. ಆದರೆ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿದೆ ಶಶಿ ತರೂರ್ ಹೆಸರೇ ಇಲ್ಲ.

“ನಿನ್ನೆ ಬೆಳಿಗ್ಗೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದರು. ಪಾಕಿಸ್ತಾನದ ಮೂಲದ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಕಳುಹಿಸಬೇಕಾದ ನಿಯೋಗಗಳಿಗೆ 4 ಸಂಸದರ ಹೆಸರುಗಳನ್ನು ಸಲ್ಲಿಸಲು ಕೇಳಿದ್ದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

“ನಿನ್ನೆ ಮೇ 16 ರಂದು ಮಧ್ಯಾಹ್ನದ ಹೊತ್ತಿಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದು ಕಾಂಗ್ರೆಸ್ ಪರವಾಗಿ ಈ ಕೆಳಗಿನ ಹೆಸರುಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

1. ಆನಂದ್ ಶರ್ಮಾ, ಮಾಜಿ ಕೇಂದ್ರ ಸಚಿವ
2.  ಗೌರವ್ ಗೊಗೊಯ್, ಲೋಕಸಭೆಯ ವಿರೋಧ ಪಕ್ಷದ ಉಪನಾಯಕ
3. ⁠ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯಸಭೆ ಸಂಸದ
4. ⁠ ರಾಜಾ ಬ್ರಾರ್ ರಾಜ್ಯಸಭೆ ಸಂಸದ

ಜೈರಾಮ್ ರಮೇಶ್ ಅವರ ಪೋಸ್ಟ್‌ನಿಂದ ಕಾಂಗ್ರೆಸ್ ಶಶಿತರೂರ್ ಹೆಸರು ಕಳಿಸದಿದ್ದರೂ ಕೇಂದ್ರ ಸರ್ಕಾರ ನಿಯೋದಲ್ಲಿ ಅವರ ಹೆಸರನ್ನು ಸೇರಿಸಿದೆ. ಕಾಂಗ್ರೆಸ್ ಕಳಿಸಿದ ಒಂದು ಹೆಸರನ್ನೂ ಸ್ವೀಕಾರ ಮಾಡಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಕೇಂದ್ರದ ಮೋದಿ ಸರ್ಕಾರವನ್ನು ಶಶಿ ತರೂರ್ ಹೊಗಳಿರುವುದು ಮತ್ತು ಅದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿರುವುದು ಇಲ್ಲಿ ಗಮನಾರ್ಹ.

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...