Homeಮುಖಪುಟಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಕಾಂಗ್ರೆಸ್ ಹೆಸರು ಕೊಡದಿದ್ದರೂ ಶಶಿ ತರೂರ್‌ಗೆ ಸ್ಥಾನ

- Advertisement -
- Advertisement -

ಭಯೋತ್ಪಾದನೆ ವಿಚಾರದಲ್ಲಿ ಭಾರತ ಶೂನ್ಯ ಸಹಿಷ್ಣುತೆ ಹೊಂದಿದೆ ಎಂಬ ದೃಢವಾದ ನಿಲುವನ್ನು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರ ರಚಿಸಿದೆ.

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿದೆ.

“ಸರ್ವಪಕ್ಷ ಸಂದರ ನಿಯೋಗ ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸುವ ದೇಶದ ದೃಢ ನಿರ್ಧಾರವನ್ನು ವಿಶ್ವಕ್ಕೆ ತಿಳಿಸಲಿದೆ. ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಎಂಬ ದೇಶದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲಿದೆ” ಎಂದು ಸಚಿವಾಲಯ ಹೇಳಿದೆ.

ವಿವಿಧ ಪಕ್ಷಗಳ ಸಂಸತ್ ಸದಸ್ಯರು, ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಗಣ್ಯ ರಾಜತಾಂತ್ರಿಕರು ನಿಯೋಗದ ಭಾಗವಾಗಿರುತ್ತಾರೆ ಎಂದು ತಿಳಿಸಿದೆ.

ಸರ್ವಪಕ್ಷ ನಿಯೋಗದ ಸದಸ್ಯರ ಹೆಸರು ಹೀಗಿದೆ..

  1. ಶಶಿ ತರೂರ್, ಕಾಂಗ್ರೆಸ್

2) ರವಿಶಂಕರ್ ಪ್ರಸಾದ್, ಬಿಜೆಪಿ

3) ಸಂಜಯ್ ಕುಮಾರ್ ಝಾ, ಜೆಡಿಯು

4) ಬೈಜಯಂತ್ ಪಾಂಡೆ, ಬಿಜೆಪಿ

5) ಕನಿಮೋಳಿ ಕರುಣಾನಿಧಿ, ಡಿಎಂಕೆ

6) ಸುಪ್ರಿಯಾ ಸುಳೆ, ಎನ್‌ಸಿಪಿ

7) ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ

ಕಾಂಗ್ರೆಸ್ ಪಟ್ಟಿಯಲ್ಲಿ ಶಶಿ ತರೂರ್ ಹೆಸರಿಲ್ಲ

ಸರ್ಕಾರ ಬಿಡುಗಡೆ ಮಾಡಿರುವ ಸರ್ವಪಕ್ಷ ನಿಯೋಗದ ಸದಸ್ಯರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರಂಭದಲ್ಲೇ ಇದೆ. ಆದರೆ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿದೆ ಶಶಿ ತರೂರ್ ಹೆಸರೇ ಇಲ್ಲ.

“ನಿನ್ನೆ ಬೆಳಿಗ್ಗೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದರು. ಪಾಕಿಸ್ತಾನದ ಮೂಲದ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಕಳುಹಿಸಬೇಕಾದ ನಿಯೋಗಗಳಿಗೆ 4 ಸಂಸದರ ಹೆಸರುಗಳನ್ನು ಸಲ್ಲಿಸಲು ಕೇಳಿದ್ದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

“ನಿನ್ನೆ ಮೇ 16 ರಂದು ಮಧ್ಯಾಹ್ನದ ಹೊತ್ತಿಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದು ಕಾಂಗ್ರೆಸ್ ಪರವಾಗಿ ಈ ಕೆಳಗಿನ ಹೆಸರುಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

1. ಆನಂದ್ ಶರ್ಮಾ, ಮಾಜಿ ಕೇಂದ್ರ ಸಚಿವ
2.  ಗೌರವ್ ಗೊಗೊಯ್, ಲೋಕಸಭೆಯ ವಿರೋಧ ಪಕ್ಷದ ಉಪನಾಯಕ
3. ⁠ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯಸಭೆ ಸಂಸದ
4. ⁠ ರಾಜಾ ಬ್ರಾರ್ ರಾಜ್ಯಸಭೆ ಸಂಸದ

ಜೈರಾಮ್ ರಮೇಶ್ ಅವರ ಪೋಸ್ಟ್‌ನಿಂದ ಕಾಂಗ್ರೆಸ್ ಶಶಿತರೂರ್ ಹೆಸರು ಕಳಿಸದಿದ್ದರೂ ಕೇಂದ್ರ ಸರ್ಕಾರ ನಿಯೋದಲ್ಲಿ ಅವರ ಹೆಸರನ್ನು ಸೇರಿಸಿದೆ. ಕಾಂಗ್ರೆಸ್ ಕಳಿಸಿದ ಒಂದು ಹೆಸರನ್ನೂ ಸ್ವೀಕಾರ ಮಾಡಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಕೇಂದ್ರದ ಮೋದಿ ಸರ್ಕಾರವನ್ನು ಶಶಿ ತರೂರ್ ಹೊಗಳಿರುವುದು ಮತ್ತು ಅದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿರುವುದು ಇಲ್ಲಿ ಗಮನಾರ್ಹ.

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...