ಭಯೋತ್ಪಾದನೆ ವಿಚಾರದಲ್ಲಿ ಭಾರತ ಶೂನ್ಯ ಸಹಿಷ್ಣುತೆ ಹೊಂದಿದೆ ಎಂಬ ದೃಢವಾದ ನಿಲುವನ್ನು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರ ರಚಿಸಿದೆ.
ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿದೆ.
“ಸರ್ವಪಕ್ಷ ಸಂದರ ನಿಯೋಗ ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸುವ ದೇಶದ ದೃಢ ನಿರ್ಧಾರವನ್ನು ವಿಶ್ವಕ್ಕೆ ತಿಳಿಸಲಿದೆ. ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಎಂಬ ದೇಶದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲಿದೆ” ಎಂದು ಸಚಿವಾಲಯ ಹೇಳಿದೆ.
ವಿವಿಧ ಪಕ್ಷಗಳ ಸಂಸತ್ ಸದಸ್ಯರು, ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಗಣ್ಯ ರಾಜತಾಂತ್ರಿಕರು ನಿಯೋಗದ ಭಾಗವಾಗಿರುತ್ತಾರೆ ಎಂದು ತಿಳಿಸಿದೆ.
ಸರ್ವಪಕ್ಷ ನಿಯೋಗದ ಸದಸ್ಯರ ಹೆಸರು ಹೀಗಿದೆ..
- ಶಶಿ ತರೂರ್, ಕಾಂಗ್ರೆಸ್
2) ರವಿಶಂಕರ್ ಪ್ರಸಾದ್, ಬಿಜೆಪಿ
3) ಸಂಜಯ್ ಕುಮಾರ್ ಝಾ, ಜೆಡಿಯು
4) ಬೈಜಯಂತ್ ಪಾಂಡೆ, ಬಿಜೆಪಿ
5) ಕನಿಮೋಳಿ ಕರುಣಾನಿಧಿ, ಡಿಎಂಕೆ
6) ಸುಪ್ರಿಯಾ ಸುಳೆ, ಎನ್ಸಿಪಿ
7) ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ
ಕಾಂಗ್ರೆಸ್ ಪಟ್ಟಿಯಲ್ಲಿ ಶಶಿ ತರೂರ್ ಹೆಸರಿಲ್ಲ
ಸರ್ಕಾರ ಬಿಡುಗಡೆ ಮಾಡಿರುವ ಸರ್ವಪಕ್ಷ ನಿಯೋಗದ ಸದಸ್ಯರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರಂಭದಲ್ಲೇ ಇದೆ. ಆದರೆ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಹಾಕಿರುವ ಪೋಸ್ಟ್ನಲ್ಲಿದೆ ಶಶಿ ತರೂರ್ ಹೆಸರೇ ಇಲ್ಲ.
“ನಿನ್ನೆ ಬೆಳಿಗ್ಗೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದರು. ಪಾಕಿಸ್ತಾನದ ಮೂಲದ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಕಳುಹಿಸಬೇಕಾದ ನಿಯೋಗಗಳಿಗೆ 4 ಸಂಸದರ ಹೆಸರುಗಳನ್ನು ಸಲ್ಲಿಸಲು ಕೇಳಿದ್ದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
“ನಿನ್ನೆ ಮೇ 16 ರಂದು ಮಧ್ಯಾಹ್ನದ ಹೊತ್ತಿಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದು ಕಾಂಗ್ರೆಸ್ ಪರವಾಗಿ ಈ ಕೆಳಗಿನ ಹೆಸರುಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.
1. ಆನಂದ್ ಶರ್ಮಾ, ಮಾಜಿ ಕೇಂದ್ರ ಸಚಿವ
2. ಗೌರವ್ ಗೊಗೊಯ್, ಲೋಕಸಭೆಯ ವಿರೋಧ ಪಕ್ಷದ ಉಪನಾಯಕ
3. ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯಸಭೆ ಸಂಸದ
4. ರಾಜಾ ಬ್ರಾರ್ ರಾಜ್ಯಸಭೆ ಸಂಸದ
Yesterday morning, the Minister of Parliamentary Affairs Kiren Rijiju spoke with the Congress President and the Leader of the Opposition in the Lok Sabha. The INC was asked to submit names of 4 MPs for the delegations to be sent abroad to explain India's stance on terrorism from…
— Jairam Ramesh (@Jairam_Ramesh) May 17, 2025
ಜೈರಾಮ್ ರಮೇಶ್ ಅವರ ಪೋಸ್ಟ್ನಿಂದ ಕಾಂಗ್ರೆಸ್ ಶಶಿತರೂರ್ ಹೆಸರು ಕಳಿಸದಿದ್ದರೂ ಕೇಂದ್ರ ಸರ್ಕಾರ ನಿಯೋದಲ್ಲಿ ಅವರ ಹೆಸರನ್ನು ಸೇರಿಸಿದೆ. ಕಾಂಗ್ರೆಸ್ ಕಳಿಸಿದ ಒಂದು ಹೆಸರನ್ನೂ ಸ್ವೀಕಾರ ಮಾಡಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಕೇಂದ್ರದ ಮೋದಿ ಸರ್ಕಾರವನ್ನು ಶಶಿ ತರೂರ್ ಹೊಗಳಿರುವುದು ಮತ್ತು ಅದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿರುವುದು ಇಲ್ಲಿ ಗಮನಾರ್ಹ.
ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ


