Homeಮುಖಪುಟಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಕಾಂಗ್ರೆಸ್ ಹೆಸರು ಕೊಡದಿದ್ದರೂ ಶಶಿ ತರೂರ್‌ಗೆ ಸ್ಥಾನ

- Advertisement -
- Advertisement -

ಭಯೋತ್ಪಾದನೆ ವಿಚಾರದಲ್ಲಿ ಭಾರತ ಶೂನ್ಯ ಸಹಿಷ್ಣುತೆ ಹೊಂದಿದೆ ಎಂಬ ದೃಢವಾದ ನಿಲುವನ್ನು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರ ರಚಿಸಿದೆ.

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿದೆ.

“ಸರ್ವಪಕ್ಷ ಸಂದರ ನಿಯೋಗ ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸುವ ದೇಶದ ದೃಢ ನಿರ್ಧಾರವನ್ನು ವಿಶ್ವಕ್ಕೆ ತಿಳಿಸಲಿದೆ. ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಎಂಬ ದೇಶದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲಿದೆ” ಎಂದು ಸಚಿವಾಲಯ ಹೇಳಿದೆ.

ವಿವಿಧ ಪಕ್ಷಗಳ ಸಂಸತ್ ಸದಸ್ಯರು, ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಗಣ್ಯ ರಾಜತಾಂತ್ರಿಕರು ನಿಯೋಗದ ಭಾಗವಾಗಿರುತ್ತಾರೆ ಎಂದು ತಿಳಿಸಿದೆ.

ಸರ್ವಪಕ್ಷ ನಿಯೋಗದ ಸದಸ್ಯರ ಹೆಸರು ಹೀಗಿದೆ..

  1. ಶಶಿ ತರೂರ್, ಕಾಂಗ್ರೆಸ್

2) ರವಿಶಂಕರ್ ಪ್ರಸಾದ್, ಬಿಜೆಪಿ

3) ಸಂಜಯ್ ಕುಮಾರ್ ಝಾ, ಜೆಡಿಯು

4) ಬೈಜಯಂತ್ ಪಾಂಡೆ, ಬಿಜೆಪಿ

5) ಕನಿಮೋಳಿ ಕರುಣಾನಿಧಿ, ಡಿಎಂಕೆ

6) ಸುಪ್ರಿಯಾ ಸುಳೆ, ಎನ್‌ಸಿಪಿ

7) ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ

ಕಾಂಗ್ರೆಸ್ ಪಟ್ಟಿಯಲ್ಲಿ ಶಶಿ ತರೂರ್ ಹೆಸರಿಲ್ಲ

ಸರ್ಕಾರ ಬಿಡುಗಡೆ ಮಾಡಿರುವ ಸರ್ವಪಕ್ಷ ನಿಯೋಗದ ಸದಸ್ಯರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರಂಭದಲ್ಲೇ ಇದೆ. ಆದರೆ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿದೆ ಶಶಿ ತರೂರ್ ಹೆಸರೇ ಇಲ್ಲ.

“ನಿನ್ನೆ ಬೆಳಿಗ್ಗೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದರು. ಪಾಕಿಸ್ತಾನದ ಮೂಲದ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಕಳುಹಿಸಬೇಕಾದ ನಿಯೋಗಗಳಿಗೆ 4 ಸಂಸದರ ಹೆಸರುಗಳನ್ನು ಸಲ್ಲಿಸಲು ಕೇಳಿದ್ದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

“ನಿನ್ನೆ ಮೇ 16 ರಂದು ಮಧ್ಯಾಹ್ನದ ಹೊತ್ತಿಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದು ಕಾಂಗ್ರೆಸ್ ಪರವಾಗಿ ಈ ಕೆಳಗಿನ ಹೆಸರುಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

1. ಆನಂದ್ ಶರ್ಮಾ, ಮಾಜಿ ಕೇಂದ್ರ ಸಚಿವ
2.  ಗೌರವ್ ಗೊಗೊಯ್, ಲೋಕಸಭೆಯ ವಿರೋಧ ಪಕ್ಷದ ಉಪನಾಯಕ
3. ⁠ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯಸಭೆ ಸಂಸದ
4. ⁠ ರಾಜಾ ಬ್ರಾರ್ ರಾಜ್ಯಸಭೆ ಸಂಸದ

ಜೈರಾಮ್ ರಮೇಶ್ ಅವರ ಪೋಸ್ಟ್‌ನಿಂದ ಕಾಂಗ್ರೆಸ್ ಶಶಿತರೂರ್ ಹೆಸರು ಕಳಿಸದಿದ್ದರೂ ಕೇಂದ್ರ ಸರ್ಕಾರ ನಿಯೋದಲ್ಲಿ ಅವರ ಹೆಸರನ್ನು ಸೇರಿಸಿದೆ. ಕಾಂಗ್ರೆಸ್ ಕಳಿಸಿದ ಒಂದು ಹೆಸರನ್ನೂ ಸ್ವೀಕಾರ ಮಾಡಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಕೇಂದ್ರದ ಮೋದಿ ಸರ್ಕಾರವನ್ನು ಶಶಿ ತರೂರ್ ಹೊಗಳಿರುವುದು ಮತ್ತು ಅದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿರುವುದು ಇಲ್ಲಿ ಗಮನಾರ್ಹ.

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...