Homeಮುಖಪುಟಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಭಯೋತ್ಪಾದನೆ ವಿರುದ್ಧದ ಭಾರತದ ನಿಲುವು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ನಿಯೋಗ

ಕಾಂಗ್ರೆಸ್ ಹೆಸರು ಕೊಡದಿದ್ದರೂ ಶಶಿ ತರೂರ್‌ಗೆ ಸ್ಥಾನ

- Advertisement -
- Advertisement -

ಭಯೋತ್ಪಾದನೆ ವಿಚಾರದಲ್ಲಿ ಭಾರತ ಶೂನ್ಯ ಸಹಿಷ್ಣುತೆ ಹೊಂದಿದೆ ಎಂಬ ದೃಢವಾದ ನಿಲುವನ್ನು ವಿಶ್ವಕ್ಕೆ ತಿಳಿಸಲು ಸರ್ವಪಕ್ಷ ಸಂಸದರ ನಿಯೋಗವನ್ನು ಕೇಂದ್ರ ಸರ್ಕಾರ ರಚಿಸಿದೆ.

ಆಪರೇಷನ್ ಸಿಂಧೂರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧದ ಭಾರತದ ನಿಲುವನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯರು ಮತ್ತು ವಿವಿಧ ರಾಷ್ಟ್ರಗಳಿಗೆ ತಿಳಿಸಲು ಪ್ರಮುಖ ಪಕ್ಷಗಳ 7 ಸಂಸದರ ನಿಯೋಗ ಈ ತಿಂಗಳ ಕೊನೆಯಲ್ಲಿ ಪ್ರವಾಸ ಕೈಗೊಳ್ಳಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವಾಲಯ ಮೇ 17ರಂದು ಪ್ರಕಟಣೆಯಲ್ಲಿ ತಿಳಿಸಿದೆ.

“ಸರ್ವಪಕ್ಷ ಸಂದರ ನಿಯೋಗ ಭಾರತದ ರಾಷ್ಟ್ರೀಯ ಒಮ್ಮತ ಮತ್ತು ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯನ್ನು ಎದುರಿಸುವ ದೇಶದ ದೃಢ ನಿರ್ಧಾರವನ್ನು ವಿಶ್ವಕ್ಕೆ ತಿಳಿಸಲಿದೆ. ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆ ಎಂಬ ದೇಶದ ಬಲವಾದ ಸಂದೇಶವನ್ನು ಜಗತ್ತಿಗೆ ಸಾರಲಿದೆ” ಎಂದು ಸಚಿವಾಲಯ ಹೇಳಿದೆ.

ವಿವಿಧ ಪಕ್ಷಗಳ ಸಂಸತ್ ಸದಸ್ಯರು, ಪ್ರಮುಖ ರಾಜಕೀಯ ವ್ಯಕ್ತಿಗಳು ಮತ್ತು ಗಣ್ಯ ರಾಜತಾಂತ್ರಿಕರು ನಿಯೋಗದ ಭಾಗವಾಗಿರುತ್ತಾರೆ ಎಂದು ತಿಳಿಸಿದೆ.

ಸರ್ವಪಕ್ಷ ನಿಯೋಗದ ಸದಸ್ಯರ ಹೆಸರು ಹೀಗಿದೆ..

  1. ಶಶಿ ತರೂರ್, ಕಾಂಗ್ರೆಸ್

2) ರವಿಶಂಕರ್ ಪ್ರಸಾದ್, ಬಿಜೆಪಿ

3) ಸಂಜಯ್ ಕುಮಾರ್ ಝಾ, ಜೆಡಿಯು

4) ಬೈಜಯಂತ್ ಪಾಂಡೆ, ಬಿಜೆಪಿ

5) ಕನಿಮೋಳಿ ಕರುಣಾನಿಧಿ, ಡಿಎಂಕೆ

6) ಸುಪ್ರಿಯಾ ಸುಳೆ, ಎನ್‌ಸಿಪಿ

7) ಶ್ರೀಕಾಂತ್ ಏಕನಾಥ್ ಶಿಂಧೆ, ಶಿವಸೇನೆ

ಕಾಂಗ್ರೆಸ್ ಪಟ್ಟಿಯಲ್ಲಿ ಶಶಿ ತರೂರ್ ಹೆಸರಿಲ್ಲ

ಸರ್ಕಾರ ಬಿಡುಗಡೆ ಮಾಡಿರುವ ಸರ್ವಪಕ್ಷ ನಿಯೋಗದ ಸದಸ್ಯರ ಪಟ್ಟಿಯಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಆರಂಭದಲ್ಲೇ ಇದೆ. ಆದರೆ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಾಕಿರುವ ಪೋಸ್ಟ್‌ನಲ್ಲಿದೆ ಶಶಿ ತರೂರ್ ಹೆಸರೇ ಇಲ್ಲ.

“ನಿನ್ನೆ ಬೆಳಿಗ್ಗೆ, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಕಾಂಗ್ರೆಸ್ ಅಧ್ಯಕ್ಷರು ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಮಾತನಾಡಿದರು. ಪಾಕಿಸ್ತಾನದ ಮೂಲದ ಭಯೋತ್ಪಾದನೆಯ ಬಗ್ಗೆ ಭಾರತದ ನಿಲುವನ್ನು ವಿವರಿಸಲು ವಿದೇಶಗಳಿಗೆ ಕಳುಹಿಸಬೇಕಾದ ನಿಯೋಗಗಳಿಗೆ 4 ಸಂಸದರ ಹೆಸರುಗಳನ್ನು ಸಲ್ಲಿಸಲು ಕೇಳಿದ್ದರು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.

“ನಿನ್ನೆ ಮೇ 16 ರಂದು ಮಧ್ಯಾಹ್ನದ ಹೊತ್ತಿಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕರು ಸಂಸದೀಯ ವ್ಯವಹಾರಗಳ ಸಚಿವರಿಗೆ ಪತ್ರ ಬರೆದು ಕಾಂಗ್ರೆಸ್ ಪರವಾಗಿ ಈ ಕೆಳಗಿನ ಹೆಸರುಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

1. ಆನಂದ್ ಶರ್ಮಾ, ಮಾಜಿ ಕೇಂದ್ರ ಸಚಿವ
2.  ಗೌರವ್ ಗೊಗೊಯ್, ಲೋಕಸಭೆಯ ವಿರೋಧ ಪಕ್ಷದ ಉಪನಾಯಕ
3. ⁠ಡಾ. ಸೈಯದ್ ನಾಸೀರ್ ಹುಸೇನ್, ರಾಜ್ಯಸಭೆ ಸಂಸದ
4. ⁠ ರಾಜಾ ಬ್ರಾರ್ ರಾಜ್ಯಸಭೆ ಸಂಸದ

ಜೈರಾಮ್ ರಮೇಶ್ ಅವರ ಪೋಸ್ಟ್‌ನಿಂದ ಕಾಂಗ್ರೆಸ್ ಶಶಿತರೂರ್ ಹೆಸರು ಕಳಿಸದಿದ್ದರೂ ಕೇಂದ್ರ ಸರ್ಕಾರ ನಿಯೋದಲ್ಲಿ ಅವರ ಹೆಸರನ್ನು ಸೇರಿಸಿದೆ. ಕಾಂಗ್ರೆಸ್ ಕಳಿಸಿದ ಒಂದು ಹೆಸರನ್ನೂ ಸ್ವೀಕಾರ ಮಾಡಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ, ಆ ಬಳಿಕ ನಡೆದ ಬೆಳವಣಿಗೆಗೆ ಸಂಬಂಧಪಟ್ಟಂತೆ ಕೇಂದ್ರದ ಮೋದಿ ಸರ್ಕಾರವನ್ನು ಶಶಿ ತರೂರ್ ಹೊಗಳಿರುವುದು ಮತ್ತು ಅದಕ್ಕೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿರುವುದು ಇಲ್ಲಿ ಗಮನಾರ್ಹ.

ನ್ಯಾ. ಬೇಲಾ ತ್ರಿವೇದಿ ನಿವೃತ್ತಿ: ಬೀಳ್ಕೊಡುಗೆ ಆಯೋಜಿಸದ ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಬಗ್ಗೆ ಸಿಜೆಐ ಅಸಮಾಧಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...