Homeಮುಖಪುಟನಿಮಿಷಾ ಪ್ರಿಯಾ ಪ್ರಕರಣ ಎಲ್ಲಿಗೆ ಬಂತು..ಸುಪ್ರೀಂ ಕೋರ್ಟ್‌ಗೆ ಸರ್ಕಾರ ಹೇಳಿದ್ದೇನು?

ನಿಮಿಷಾ ಪ್ರಿಯಾ ಪ್ರಕರಣ ಎಲ್ಲಿಗೆ ಬಂತು..ಸುಪ್ರೀಂ ಕೋರ್ಟ್‌ಗೆ ಸರ್ಕಾರ ಹೇಳಿದ್ದೇನು?

- Advertisement -
- Advertisement -

ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆ ಕುರಿತು ಕೇಂದ್ರ ಸರ್ಕಾರ ಗುರುವಾರ (ಅ.16) ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದು, ಪ್ರಕರಣದ ಪ್ರಸ್ತುತ ಸ್ಥಿತಿಯ ಬಗ್ಗೆ ವಿವರಿಸಿದೆ.

ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಪ್ರಸ್ತುತ ತಡೆ ಹಿಡಿಯಲಾಗಿದೆ. ಯಾವುದೇ ಪ್ರತಿಕೂಲ ಬೆಳವಣಿಗೆಗಳು ನಡೆಯುತ್ತಿಲ್ಲ ಎಂದು ಕೇಂದ್ರ ಸರ್ಕಾರದ ಪರ ಭಾರತದ ಅಟಾರ್ನಿ (ಎಜೆ) ಜನರಲ್ ಆರ್. ವೆಂಕಟರಮಣಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

ಪ್ರಕರಣದಲ್ಲಿ ಹೊಸ ಮಧ್ಯಸ್ಥಿಕೆದಾರರು ಆಗಮಿಸಿದ್ದಾರೆ ಎಂದು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠಕ್ಕೆ ಎಜೆ ಮಾಹಿತಿ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, “ಮರಣದಂಡನೆ ಏನಾಯಿತು?” ಎಂದು ಕೇಳಿದೆ.

ನಿಮಿಷಾ ಪ್ರಿಯಾ ಅವರಿಗೆ ಕಾನೂನು ಬೆಂಬಲ ನೀಡುತ್ತಿರುವ ‘ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್’ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ವಕೀಲರು ಕೂಡ, “ಮರಣದಂಡನೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ” ಎಂದು ಖಚಿತಪಡಿಸಿದ್ದಾರೆ. ಹಾಗಾಗಿ, ವಿಚಾರಣೆಯನ್ನು ಮುಂದೂಡಬಹುದು ಎಂದಿದ್ದಾರೆ.

ಈ ವೇಳೆ ಪೀಠವು, ಜನವರಿ 2026ಕ್ಕೆ ಪ್ರಕರಣವನ್ನು ಮುಂದಿನ ವಿಚಾರಣೆಗೆ ಪಟ್ಟಿ ಮಾಡಿ ಎಂದು ಸೂಚಿಸಿದೆ. ಅಲ್ಲದೆ, ಪರಿಸ್ಥಿತಿಗೆ ಅನುಗುಣುವಾಗಿ ಅಗತ್ಯವಿದ್ದರೆ ಪಕ್ಷಕಾರರು ವಿಚಾರಣೆಗೆ ಅರ್ಜಿ ಸಲ್ಲಿಸಲು ಮುಕ್ತರಾಗಿರುತ್ತಾರೆ ಎಂದಿದೆ.

2017ರಲ್ಲಿ ತನ್ನ ಯೆಮೆನ್ ವ್ಯವಹಾರ ಪಾಲುದಾರನನ್ನು ಕೊಲೆ ಮಾಡಿದ ಆರೋಪದಲ್ಲಿ ಮರಣದಂಡನೆ ಘೋಷಣೆಯಾಗಿರುವ 38 ವರ್ಷದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ರಕ್ಷಿಸಲು ರಾಜತಾಂತ್ರಿಕ ಮಾರ್ಗಗಳನ್ನು ಬಳಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಕಳೆದ ಆಗಸ್ಟ್ 14ರಂದು, ಸೇವ್ ನಿಮಿಷಾ ಪ್ರಿಯಾ ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್ ವಕೀಲರು ಪ್ರಿಯಾಗೆ “ತಕ್ಷಣಕ್ಕೆ ಯಾವುದೇ ಅಪಾಯ ಇಲ್ಲ” ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಜುಲೈ 16ರಂದು ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ತಡೆಹಿಡಿಯಲಾಗಿದೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಲಾಗಿತ್ತು. ಜುಲೈ 18 ರಂದು ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತ್ತು, ಪ್ರಿಯಾ ಅವರನ್ನು ಸುರಕ್ಷಿತವಾಗಿ ಜೈಲಿನಿಂದ ಹೊರ ತರಲು ಪ್ರಯತ್ನಗಳು ನಡೆಯುತ್ತಿವೆ. ಸರ್ಕಾರವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದೆ ಎಂದು ಹೇಳಿತ್ತು.

ಪ್ರಿಯಾ ಅವರ ತಾಯಿ ಸಂತ್ರಸ್ತನ ಕುಟುಂಬದೊಂದಿಗೆ ಮಾತುಕತೆ ನಡೆಸಲು ಯೆಮೆನ್‌ಗೆ ತೆರಳಿದ್ದಾರೆ. ಅವರಿಗೆ ಅಲ್ಲಿಗೆ ಪ್ರಯಾಣಿಸಲು ಅನುಮತಿ ನೀಡುವಂತೆ ದೆಹಲಿ ಹೈಕೋರ್ಟ್ ಸೂಚಿಸಿದ್ದರಿಂದ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಂಘಟನೆಯವರು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದರು.

ಜುಲೈ 16ರಂದು ನಿಗದಿಯಾಗಿದ್ದ ನಿಮಿಷಾ ಪ್ರಿಯಾ ಅವರ ಮರಣದಂಡನೆ ಭಾರತದ ಗ್ರ್ಯಾಂಡ್‌ ಮುಫ್ತಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮಧ್ಯಪ್ರವೇಶದಿಂದ ಮುಂದೂಡಿಕೆಯಾಗಿದೆ. ಆ ಬಳಿಕವಷ್ಟೇ ಕೇಂದ್ರ ಸರ್ಕಾರ ಈ ಪ್ರಕರಣದಲ್ಲಿ ಹೇಳಿಕೆ ನೀಡಲು ಪ್ರಾರಂಭಿಸಿದೆ. ಇದಕ್ಕೂ ಮುನ್ನ ಜುಲೈ 14ರಂದು “ನಮ್ಮಿಂದ ಏನೂ ಮಾಡಲು ಸಾಧ್ಯವಿಲ್ಲ” ಎಂದು ಕೇಂದ್ರ ಸರ್ಕಾರ ಕೈ ತೊಳೆದುಕೊಂಡಿತ್ತು.

ಸಿಜೆಐ ಮೇಲೆ ದಾಳಿ: ವಕೀಲ ರಾಕೇಶ್ ಕಿಶೋರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಎಜಿ ಒಪ್ಪಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...