Homeಮುಖಪುಟಹಳ್ಳಿ ಜನರ ಪ್ರತಿಭಟನೆಗೆ ಬೆದರಿದ ಕೇಂದ್ರ : ಮಹತ್ವದ ಖನಿಜ ಗಣಿ ಹರಾಜು ರದ್ದು

ಹಳ್ಳಿ ಜನರ ಪ್ರತಿಭಟನೆಗೆ ಬೆದರಿದ ಕೇಂದ್ರ : ಮಹತ್ವದ ಖನಿಜ ಗಣಿ ಹರಾಜು ರದ್ದು

- Advertisement -
- Advertisement -

ಗ್ರಾಮಸ್ಥರ ತೀವ್ರ ಪ್ರತಿಭಟನೆಗೆ ಮಣಿದ ಕೇಂದ್ರ ಸರ್ಕಾರ ತಮಿಳುನಾಡಿನ ನಾಯಕರಪಟ್ಟಿಯ ಟಂಗ್‌ಸ್ಟನ್ ಖನಿಜ ಗಣಿ ಹರಾಜು ರದ್ದುಗೊಳಿಸಲು ನಿರ್ಧರಿಸಿದೆ.

ಮಧುರೈ ಬಳಿಯ ನಾಯಕರಪಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ಟಂಗ್‌ಸ್ಟನ್ ಖನಿಜ ಗಣಿಗಾರಿಕೆ ನಡೆಸುವ ಹಕ್ಕನ್ನು ಕೇಂದ್ರ ಸರ್ಕಾರವು ನವೆಂಬರ್ 2024 ರಲ್ಲಿ ಹಿಂದೂಸ್ತಾನ್ ಝಿಂಕ್ ಲಿಮಿಟೆಡ್‌ಗೆ ನೀಡಿತ್ತು.

ಆದರೆ, ಗಣಿಗಾರಿಕೆಗೆ ಗುರುತಿಸಿದ್ದ ಪ್ರದೇಶವನ್ನು 2022ರಲ್ಲಿ ಜೀವವೈವಿಧ್ಯ ಪರಂಪರೆಯ ತಾಣವೆಂದು ಘೋಷಿಸಲಾಗಿದೆ. ಅಲ್ಲದೆ, ಈ ಪ್ರದೇಶ ಹಲವಾರು ಅಪರೂಪದ ಸಸ್ಯ ಮತ್ತು ಪ್ರಾಣಿಗಳು, ಗುಹಾ ದೇವಾಲಯಗಳು, ಜೈನ ದೇವಾಲಯಗಳು, ತಮಿಳು-ಬ್ರಾಹ್ಮಿ ಶಾಸನಗಳು ಮತ್ತು ಪಂಚಪಾಂಡವರ ಕಲ್ಲಿನ ಹಾಸಿಗೆಗಳನ್ನು ಒಳಗೊಂಡಿದೆ.

ಜನವರಿ 23, 2025ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ, “ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ ಕಿಶನ್ ರೆಡ್ಡಿ ಅವರು ಜನವರಿ 22ರಂದು ಬುಧವಾರ ನವದೆಹಲಿಯಲ್ಲಿ ಮಧುರೈನ ಅಂಬಲಕರರನ್ನು (ಸಾಂಪ್ರದಾಯಿಕ ಸಮುದಾಯದ ಮುಖಂಡರು) ಭೇಟಿಯಾಗಿದ್ದಾರೆ. ಈ ವೇಳೆ, ಖನಿಜ ಗಣಿಗಾರಿಕೆಗಾಗಿ ಗುರುತಿಸಲಾದ ಪ್ರದೇಶದಲ್ಲಿ ಅರಿಟ್ಟಪಟ್ಟಿ ಜೀವವೈವಿಧ್ಯ ಪರಂಪರೆಯ ತಾಣ ಮತ್ತು ಹಲವಾರು ಸಾಂಸ್ಕೃತಿಕ ಪರಂಪರೆಯ ತಾಣಗಳು ಸೇರಿರುವುದರಿಂದ ಹರಾಜನ್ನು ರದ್ದುಗೊಳಿಸಬೇಕೆಂದು ಸಮುದಾಯದ ಸದಸ್ಯರು ಒತ್ತಾಯಿಸಿದ್ದಾರೆ ಎಂದು ಹೇಳಿದೆ.

ಮುಂದುವರಿದು, “ವಿವರವಾದ ಚರ್ಚೆಗಳ ನಂತರ, ಈ ಪ್ರದೇಶದ ಜೀವವೈವಿಧ್ಯ ಪರಂಪರೆಯ ತಾಣದ ಪ್ರಾಮುಖ್ಯತೆ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತ ಸರ್ಕಾರದ ಸಾಂಪ್ರದಾಯಿಕ ಹಕ್ಕುಗಳನ್ನು ರಕ್ಷಿಸುವ ಬದ್ಧತೆಯನ್ನು ಪರಿಗಣಿಸಿ, ನಾಯಕರಪಟ್ಟಿ ಟಂಗ್‌ಸ್ಟನ್ ಖನಿಜ ಗಣಿ ಹರಾಜನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಪೊಲೀಸರು ಪ್ರತಿಭಟನೆಗೆ ಅನುಮತಿ ನಿರಾಕರಿಸಿದ್ದರೂ ಕೂಡ, ಜನವರಿ 7ರಂದು ಚೆನ್ನೈ ಮತ್ತು ಮಧುರೈ ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲೂರಿನಿಂದ ತಲ್ಲಕುಳಂವರೆಗೆ ಸಾವಿರಾರು ಗ್ರಾಮಸ್ಥರು ಮತ್ತು ರೈತರು ರ್‍ಯಾಲಿ ನಡೆಸಿ ಗಣಿಗಾರಿಕೆಯನ್ನು ವಿರೋಧಿಸಿದ್ದರು.

ಕೇಂದ್ರ ಸರ್ಕಾರ ಗಣಿಗಾರಿಕೆಗೆ ನೀಡಿರುವ ಅನುಮತಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ 2024ರ ಡಿಸೆಂಬರ್ 9ರಂದು ತಮಿಳುನಾಡು ವಿಧಾನಸಭೆಯು ನಿರ್ಣಯ ಅಂಗೀಕರಿಸಿತ್ತು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೂಡ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಗ್ರಾಮಸ್ಥರ ಕಳವಳವನ್ನು ವಿವರಿಸಿದ್ದರು.

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...