Homeಮುಖಪುಟವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ

ವಲಸೆ ಕಾರ್ಮಿಕರ ರೈಲು ಪ್ರಯಾಣದ ಶುಲ್ಕ ಪಾವತಿಗೆ ಕೇಂದ್ರದ ಸೂಚನೆ: ವಿರೋಧ ಪಕ್ಷಗಳ ಆಕ್ಷೇಪ

- Advertisement -
- Advertisement -

ವಲಸೆ ಕಾರ್ಮಿಕರು ತಮ್ಮ ತಮ್ಮ ರಾಜ್ಯಗಳಿಗೆ ಮರಳಲು ರೈಲು ಪ್ರಯಾಣದ ಶುಲ್ಕವನ್ನು ವಿಧಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ದ ವಿರೋಧ ಪಕ್ಷಗಳು ಭಾರೀ ಟೀಕಾಪ್ರಹಾರ ಮಾಡಿವೆ.

ಕೊರೊನಾ ವೈರಸ್ ಅನ್ನು ಎದುರಿಸಲು ದೇಶಾದ್ಯಂತದ ಲಾಕ್‌ಡೌನ್ ಅನ್ನು ಇನ್ನೂ ಎರಡು ವಾರಗಳವರೆಗೆ ವಿಸ್ತರಿಸಲಾಗುತ್ತಿದ್ದಂತೆ, ಕೇಂದ್ರ ಸರ್ಕಾರವು ಶುಕ್ರವಾರದಿಂದ ವಿಶೇಷ ರೈಲುಗಳನ್ನು ಓಡಿಸಲು ಪ್ರಾರಂಭಿಸಿದೆ. ಹಲವಾರು ರಾಜ್ಯಗಳು ರೈಲು ಪ್ರಯಾಣಕ್ಕೆ ಶುಲ್ಕ ವಿಧಿಸಬಾರದು ಎಂದು ಕೇಂದ್ರದ ಬಳಿ ಬೇಡಿಕೆ ಇಟ್ಟಿದ್ದವು, ಆದರೆ ರಾಜ್ಯಗಳ ಬೇಡಿಕೆಗೆ ವಿರುದ್ಧವಾಗಿ, ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗೆ ರೈಲು ಶುಲ್ಕ ವಿಧಿಸುತ್ತಿದೆ.

ಕೇಂದ್ರವು ಟಿಕೆಟ್ ನೀಡುವ ಮತ್ತು ಶುಲ್ಕವನ್ನು ಸಂಗ್ರಹಿಸುವ ಉಸ್ತುವಾರಿಯನ್ನು ರಾಜ್ಯ ಸರ್ಕಾರಗಗಳಿಗೆ ವಹಿಸಿದೆ. ಅನೇಕ ರಾಜ್ಯಗಳು, ಅದರಲ್ಲೂ ಹೆಚ್ಚಾಗಿ ಪ್ರತಿಪಕ್ಷಗಳು ಆಳುವ ರಾಜ್ಯಗಳು ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಬೇಕೆಂದು ಒತ್ತಾಯಿಸುತ್ತಿವೆ.

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ “ಮನೆಗೆ ಹಿಂದಿರುಗುವ ವಲಸಿಗರನ್ನು ಬಿಜೆಪಿ ಸರ್ಕಾರವು ರೈಲು ಪ್ರಯಾಣಕ್ಕೆ ಹಣ ಪಾವತಿಸಲು ಕೇಳಿಕೊಳ್ಳುವುದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ. ಆಡಳಿತಗಾರ ಸರ್ಕಾರವು ಬಂಡವಾಳಶಾಹಿಗಳು ಹಾಗೂ ಉದ್ಯಮಿಗಳಿಗೆ ಸಾಲವನ್ನು ಮನ್ನಾ ಮಾಡುತ್ತದೆ ಮತ್ತು ಶ್ರೀಮಂತರನ್ನು ಬೆಂಬಲಿಸುತ್ತದೆ ಎಂಬುದಕ್ಕೆ ಇಂದು ಸ್ಪಷ್ಟವಾಗಿದೆ. ದುರಂತದ ಸಮಯದಲ್ಲಿ ಶೋಷಣೆ ಮಾಡುವುದು ಹಣದಾಸೆದಾರರ ಕೆಲಸವೇ ಹೊರತು ಸರ್ಕಾರದ್ದಲ್ಲ.”ಎಂದು ಟ್ವೀಟ್ ಮಾಡಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ “ನಾವು ರೈಲು ಪ್ರಯಾಣಕ್ಕೆ ಹಣ ಪಾವತಿಸಲು ವಲಸಿಗ ಕಾರ್ಮಿಕರನ್ನು ಕೇಳುವುದಿಲ್ಲ. ಅವರು ಈಗಾಗಲೇ ಬಹಳ ತೊಂದರೆಯಲ್ಲಿದ್ದಾರೆ. ಕೇಂದ್ರವು ಅವರ ಹಣ ಪಾವತಿಸಲು ನಿರಾಕರಿಸಿದರೆ ನಮ್ಮ ಜಾರ್ಖಂಡ್ ಸರ್ಕಾರವು ಹಣ ಒದಗಿಸಲು ಬೇರೆ ಮಾರ್ಗಗಳನ್ನು ಹುಡುಕುತ್ತದೆ ಆದರೆ ವಲಸಿಗರಿಗೆ ಹಣ ಪಾವತಿಸಲು ನಾವು ಖಂಡಿತವಾಗಿಯೂ ಕೇಳುವುದಿಲ್ಲ” ಎಂದು ಹೇಳಿದ್ದಾರೆ.

ಸರಕು ಮತ್ತು ಸೇವಾ ತೆರಿಗೆ ಸಂಗ್ರಹವು ಸಾರ್ವಕಾಲಿಕ ಕಡಿಮೆ ಇರುವ ಸಮಯದಲ್ಲಿ ಕೇಂದ್ರವು ರಾಜ್ಯಗಳಿಗೆ ಆರ್ಥಿಕ ಒತ್ತಡವನ್ನುಂಟುಮಾಡುತ್ತಿದೆ ಎಂದು ಚತ್ತೀಸ್‌ಘಡ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಹೋಗದಂತೆ ತಡೆಯುತ್ತಿರುವ ಸರ್ಕಾರದ ಕ್ರೌರ್ಯದ ಗಣಿತ: ಶಿವಸುಂದರ್‌ 


ವಿಡಿಯೊ ನೋಡಿ: ನಿಮ್ಮ ಸುತ್ತಲಿರುವ ಕಾರ್ಮಿಕರಿಗೆ ಸಹಾಯ ಮಾಡಲು ನಿಮಗೊಂದು ಅವಕಾಶ.‌ ಹೀಗೆ ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...