Homeಕರ್ನಾಟಕಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದೇ ಕರೆಸಿಕೊಳ್ಳುವ ಯೋಜನೆ ‘ಅನ್ನಭಾಗ್ಯ’ ಯೋಜನೆಗೆ ಇದೀಗ ಕತ್ತರಿ ಹಾಕಲಾಗುತ್ತದೆ ಎಂದು ಎನ್ನುವ ವಿಚಾರ ಚರ್ಚೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

”ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

”ನಮ್ಮ ಅಧಿಕಾರಿಗಳು  ಹೆಚ್ಚುವರಿ ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನಿಗಮ ಅಧಿಕಾರಿಗಳು ನಿಗಮದ ಬಳಿ ಅಕ್ಕಿ ಇದೆ. 2.8 ಲಕ್ಷ ಟನ್ ಅಕ್ಕಿ ಕೊಡಲು ಅಭ್ಯಂತರವಿಲ್ಲ ಎಂದು ಹೇಳಿದ್ದರು. ಪ್ರತಿ ಕ್ವಿಂಟಲ್‌ಗೆ 73,400ರಂತೆ, ಎಲೆಕ್ಟ್ರಾನಿಕ್ ಹರಾಜಿನಲ್ಲಿ ಭಾಗವಹಿಸದೇ ಪಡೆದುಕೊಳ್ಳಬಹುದು ಎಂದೂ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದರು. ಆ ಬಳಿಕ ಇನ್ನೊಂದು ಪತ್ರ ಬರೆದು 13,189.45 ಟನ್ ಅಕ್ಕಿ ಕೊಡುವುದಾಗಿಯೂ ಹೇಳಿದ್ದರು” ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯಗಳಿಗೆ ಕೇಂದ್ರದ ಪತ್ರ..

ಜೂನ್ 13 ರಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪತ್ರವೊಂದನ್ನು ಬರೆದಿತ್ತು. ಅದರಲ್ಲಿ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳು ಹೆಚ್ಚುವರಿ ಅಕ್ಕಿ ಮತ್ತು ಗೋಧಿಯನ್ನು ‘ಮುಕ್ತ ಮಾರುಕಟ್ಟೆಯ ಮಾರಾಟ ಯೋಜನೆ’ಯಡಿ (ಒಎಂಎಸ್‌ಎಸ್‌ಡಿ) ಖರೀದಿಸಲು ಅವಕಾಶ ಇಲ್ಲ’ ಎಂದುತಿಳಿಸಿತ್ತು. ಈ ಪತ್ರವನ್ನು ಸಿದ್ದರಾಮಯ್ಯ ಪ್ರದರ್ಶಿಸಿದರು.

ಅಕ್ಕಿ ಸಿಗದಿದ್ದರೆ ಬಡವರ ಖಾತೆಗೆ ಹಣ ಹಾಕಿ: ಸಿ.ಟಿ.ರವಿ

”ಸಿದ್ದರಾಮಯ್ಯ ಅವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ನೀಡಲೇಬೇಕು. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿಯ ಮಾರುಕಟ್ಟೆ ದರದ ಮೊತ್ತವನ್ನು ಬಡವರ ಖಾತೆಗೆ ಜಮೆ ಮಾಡಿ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳು ಐದು ಕೆ.ಜಿ.ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವೈಫಲ್ಯ: ವಿಜಯೇಂದ್ರ

”ಅಕ್ಕಿ ಯೋಜನೆ ಜಾರಿಗೆ ತರುವಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿರುವ ನಿಮ್ಮ ಸರ್ಕಾರದ ವೈಫಲ್ಯ ಅನಾವರಣಗೊಳ್ಳುವ ಆತಂಕದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುವ ನಿಮ್ಮ ದಿಕ್ಕು ತಪ್ಪಿಸುವ ತಂತ್ರ ಅರ್ಥ ಮಾಡಿಕೊಳ್ಳದೇ ಇರುವಷ್ಟು ನಮ್ಮಜನ ಮುಗ್ಧರಲ್ಲ” ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

”ಉಚಿತ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅಕ್ಕಿ ಒದಗಿಸುತ್ತಿಲ್ಲ ಎಂದು ಆರೋಪಿಸಿದ್ದೀರಿ. ಈ ಹಿಂದೆಯೂ ನಿಮ್ಮ ಆಡಳಿತದ ಅವಧಿಯಲ್ಲಿ ಕೇಂದ್ರದಿಂದ ಅಕ್ಕಿ ತರಿಸಿಕೊಂಡು ಅನ್ನರಾಮಯ್ಯ ಎಂದು ಕರೆಸಿಕೊಂಡಿರಿ. ಅಪ್ಪಿತಪ್ಪಿಯೂ ಕೇಂದ್ರ ಸರ್ಕಾರದ ಕೊಡುಗೆ ಕುರಿತು ಎಲ್ಲೂ ಉಲ್ಲೇಖಿಸುವ ಔದಾರ್ಯವನ್ನು ತೋರಿಸಲೇ ಎಲ್ಲ” ಎಂದು ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...