Homeಕರ್ನಾಟಕಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದೇ ಕರೆಸಿಕೊಳ್ಳುವ ಯೋಜನೆ ‘ಅನ್ನಭಾಗ್ಯ’ ಯೋಜನೆಗೆ ಇದೀಗ ಕತ್ತರಿ ಹಾಕಲಾಗುತ್ತದೆ ಎಂದು ಎನ್ನುವ ವಿಚಾರ ಚರ್ಚೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

”ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

”ನಮ್ಮ ಅಧಿಕಾರಿಗಳು  ಹೆಚ್ಚುವರಿ ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನಿಗಮ ಅಧಿಕಾರಿಗಳು ನಿಗಮದ ಬಳಿ ಅಕ್ಕಿ ಇದೆ. 2.8 ಲಕ್ಷ ಟನ್ ಅಕ್ಕಿ ಕೊಡಲು ಅಭ್ಯಂತರವಿಲ್ಲ ಎಂದು ಹೇಳಿದ್ದರು. ಪ್ರತಿ ಕ್ವಿಂಟಲ್‌ಗೆ 73,400ರಂತೆ, ಎಲೆಕ್ಟ್ರಾನಿಕ್ ಹರಾಜಿನಲ್ಲಿ ಭಾಗವಹಿಸದೇ ಪಡೆದುಕೊಳ್ಳಬಹುದು ಎಂದೂ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದರು. ಆ ಬಳಿಕ ಇನ್ನೊಂದು ಪತ್ರ ಬರೆದು 13,189.45 ಟನ್ ಅಕ್ಕಿ ಕೊಡುವುದಾಗಿಯೂ ಹೇಳಿದ್ದರು” ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯಗಳಿಗೆ ಕೇಂದ್ರದ ಪತ್ರ..

ಜೂನ್ 13 ರಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪತ್ರವೊಂದನ್ನು ಬರೆದಿತ್ತು. ಅದರಲ್ಲಿ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳು ಹೆಚ್ಚುವರಿ ಅಕ್ಕಿ ಮತ್ತು ಗೋಧಿಯನ್ನು ‘ಮುಕ್ತ ಮಾರುಕಟ್ಟೆಯ ಮಾರಾಟ ಯೋಜನೆ’ಯಡಿ (ಒಎಂಎಸ್‌ಎಸ್‌ಡಿ) ಖರೀದಿಸಲು ಅವಕಾಶ ಇಲ್ಲ’ ಎಂದುತಿಳಿಸಿತ್ತು. ಈ ಪತ್ರವನ್ನು ಸಿದ್ದರಾಮಯ್ಯ ಪ್ರದರ್ಶಿಸಿದರು.

ಅಕ್ಕಿ ಸಿಗದಿದ್ದರೆ ಬಡವರ ಖಾತೆಗೆ ಹಣ ಹಾಕಿ: ಸಿ.ಟಿ.ರವಿ

”ಸಿದ್ದರಾಮಯ್ಯ ಅವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ನೀಡಲೇಬೇಕು. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿಯ ಮಾರುಕಟ್ಟೆ ದರದ ಮೊತ್ತವನ್ನು ಬಡವರ ಖಾತೆಗೆ ಜಮೆ ಮಾಡಿ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳು ಐದು ಕೆ.ಜಿ.ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವೈಫಲ್ಯ: ವಿಜಯೇಂದ್ರ

”ಅಕ್ಕಿ ಯೋಜನೆ ಜಾರಿಗೆ ತರುವಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿರುವ ನಿಮ್ಮ ಸರ್ಕಾರದ ವೈಫಲ್ಯ ಅನಾವರಣಗೊಳ್ಳುವ ಆತಂಕದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುವ ನಿಮ್ಮ ದಿಕ್ಕು ತಪ್ಪಿಸುವ ತಂತ್ರ ಅರ್ಥ ಮಾಡಿಕೊಳ್ಳದೇ ಇರುವಷ್ಟು ನಮ್ಮಜನ ಮುಗ್ಧರಲ್ಲ” ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

”ಉಚಿತ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅಕ್ಕಿ ಒದಗಿಸುತ್ತಿಲ್ಲ ಎಂದು ಆರೋಪಿಸಿದ್ದೀರಿ. ಈ ಹಿಂದೆಯೂ ನಿಮ್ಮ ಆಡಳಿತದ ಅವಧಿಯಲ್ಲಿ ಕೇಂದ್ರದಿಂದ ಅಕ್ಕಿ ತರಿಸಿಕೊಂಡು ಅನ್ನರಾಮಯ್ಯ ಎಂದು ಕರೆಸಿಕೊಂಡಿರಿ. ಅಪ್ಪಿತಪ್ಪಿಯೂ ಕೇಂದ್ರ ಸರ್ಕಾರದ ಕೊಡುಗೆ ಕುರಿತು ಎಲ್ಲೂ ಉಲ್ಲೇಖಿಸುವ ಔದಾರ್ಯವನ್ನು ತೋರಿಸಲೇ ಎಲ್ಲ” ಎಂದು ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...