Homeಕರ್ನಾಟಕಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದೇ ಕರೆಸಿಕೊಳ್ಳುವ ಯೋಜನೆ ‘ಅನ್ನಭಾಗ್ಯ’ ಯೋಜನೆಗೆ ಇದೀಗ ಕತ್ತರಿ ಹಾಕಲಾಗುತ್ತದೆ ಎಂದು ಎನ್ನುವ ವಿಚಾರ ಚರ್ಚೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

”ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

”ನಮ್ಮ ಅಧಿಕಾರಿಗಳು  ಹೆಚ್ಚುವರಿ ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನಿಗಮ ಅಧಿಕಾರಿಗಳು ನಿಗಮದ ಬಳಿ ಅಕ್ಕಿ ಇದೆ. 2.8 ಲಕ್ಷ ಟನ್ ಅಕ್ಕಿ ಕೊಡಲು ಅಭ್ಯಂತರವಿಲ್ಲ ಎಂದು ಹೇಳಿದ್ದರು. ಪ್ರತಿ ಕ್ವಿಂಟಲ್‌ಗೆ 73,400ರಂತೆ, ಎಲೆಕ್ಟ್ರಾನಿಕ್ ಹರಾಜಿನಲ್ಲಿ ಭಾಗವಹಿಸದೇ ಪಡೆದುಕೊಳ್ಳಬಹುದು ಎಂದೂ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದರು. ಆ ಬಳಿಕ ಇನ್ನೊಂದು ಪತ್ರ ಬರೆದು 13,189.45 ಟನ್ ಅಕ್ಕಿ ಕೊಡುವುದಾಗಿಯೂ ಹೇಳಿದ್ದರು” ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯಗಳಿಗೆ ಕೇಂದ್ರದ ಪತ್ರ..

ಜೂನ್ 13 ರಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪತ್ರವೊಂದನ್ನು ಬರೆದಿತ್ತು. ಅದರಲ್ಲಿ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳು ಹೆಚ್ಚುವರಿ ಅಕ್ಕಿ ಮತ್ತು ಗೋಧಿಯನ್ನು ‘ಮುಕ್ತ ಮಾರುಕಟ್ಟೆಯ ಮಾರಾಟ ಯೋಜನೆ’ಯಡಿ (ಒಎಂಎಸ್‌ಎಸ್‌ಡಿ) ಖರೀದಿಸಲು ಅವಕಾಶ ಇಲ್ಲ’ ಎಂದುತಿಳಿಸಿತ್ತು. ಈ ಪತ್ರವನ್ನು ಸಿದ್ದರಾಮಯ್ಯ ಪ್ರದರ್ಶಿಸಿದರು.

ಅಕ್ಕಿ ಸಿಗದಿದ್ದರೆ ಬಡವರ ಖಾತೆಗೆ ಹಣ ಹಾಕಿ: ಸಿ.ಟಿ.ರವಿ

”ಸಿದ್ದರಾಮಯ್ಯ ಅವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ನೀಡಲೇಬೇಕು. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿಯ ಮಾರುಕಟ್ಟೆ ದರದ ಮೊತ್ತವನ್ನು ಬಡವರ ಖಾತೆಗೆ ಜಮೆ ಮಾಡಿ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳು ಐದು ಕೆ.ಜಿ.ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವೈಫಲ್ಯ: ವಿಜಯೇಂದ್ರ

”ಅಕ್ಕಿ ಯೋಜನೆ ಜಾರಿಗೆ ತರುವಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿರುವ ನಿಮ್ಮ ಸರ್ಕಾರದ ವೈಫಲ್ಯ ಅನಾವರಣಗೊಳ್ಳುವ ಆತಂಕದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುವ ನಿಮ್ಮ ದಿಕ್ಕು ತಪ್ಪಿಸುವ ತಂತ್ರ ಅರ್ಥ ಮಾಡಿಕೊಳ್ಳದೇ ಇರುವಷ್ಟು ನಮ್ಮಜನ ಮುಗ್ಧರಲ್ಲ” ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

”ಉಚಿತ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅಕ್ಕಿ ಒದಗಿಸುತ್ತಿಲ್ಲ ಎಂದು ಆರೋಪಿಸಿದ್ದೀರಿ. ಈ ಹಿಂದೆಯೂ ನಿಮ್ಮ ಆಡಳಿತದ ಅವಧಿಯಲ್ಲಿ ಕೇಂದ್ರದಿಂದ ಅಕ್ಕಿ ತರಿಸಿಕೊಂಡು ಅನ್ನರಾಮಯ್ಯ ಎಂದು ಕರೆಸಿಕೊಂಡಿರಿ. ಅಪ್ಪಿತಪ್ಪಿಯೂ ಕೇಂದ್ರ ಸರ್ಕಾರದ ಕೊಡುಗೆ ಕುರಿತು ಎಲ್ಲೂ ಉಲ್ಲೇಖಿಸುವ ಔದಾರ್ಯವನ್ನು ತೋರಿಸಲೇ ಎಲ್ಲ” ಎಂದು ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...