Homeಕರ್ನಾಟಕಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದೇ ಕರೆಸಿಕೊಳ್ಳುವ ಯೋಜನೆ ‘ಅನ್ನಭಾಗ್ಯ’ ಯೋಜನೆಗೆ ಇದೀಗ ಕತ್ತರಿ ಹಾಕಲಾಗುತ್ತದೆ ಎಂದು ಎನ್ನುವ ವಿಚಾರ ಚರ್ಚೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

”ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

”ನಮ್ಮ ಅಧಿಕಾರಿಗಳು  ಹೆಚ್ಚುವರಿ ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನಿಗಮ ಅಧಿಕಾರಿಗಳು ನಿಗಮದ ಬಳಿ ಅಕ್ಕಿ ಇದೆ. 2.8 ಲಕ್ಷ ಟನ್ ಅಕ್ಕಿ ಕೊಡಲು ಅಭ್ಯಂತರವಿಲ್ಲ ಎಂದು ಹೇಳಿದ್ದರು. ಪ್ರತಿ ಕ್ವಿಂಟಲ್‌ಗೆ 73,400ರಂತೆ, ಎಲೆಕ್ಟ್ರಾನಿಕ್ ಹರಾಜಿನಲ್ಲಿ ಭಾಗವಹಿಸದೇ ಪಡೆದುಕೊಳ್ಳಬಹುದು ಎಂದೂ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದರು. ಆ ಬಳಿಕ ಇನ್ನೊಂದು ಪತ್ರ ಬರೆದು 13,189.45 ಟನ್ ಅಕ್ಕಿ ಕೊಡುವುದಾಗಿಯೂ ಹೇಳಿದ್ದರು” ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯಗಳಿಗೆ ಕೇಂದ್ರದ ಪತ್ರ..

ಜೂನ್ 13 ರಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪತ್ರವೊಂದನ್ನು ಬರೆದಿತ್ತು. ಅದರಲ್ಲಿ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳು ಹೆಚ್ಚುವರಿ ಅಕ್ಕಿ ಮತ್ತು ಗೋಧಿಯನ್ನು ‘ಮುಕ್ತ ಮಾರುಕಟ್ಟೆಯ ಮಾರಾಟ ಯೋಜನೆ’ಯಡಿ (ಒಎಂಎಸ್‌ಎಸ್‌ಡಿ) ಖರೀದಿಸಲು ಅವಕಾಶ ಇಲ್ಲ’ ಎಂದುತಿಳಿಸಿತ್ತು. ಈ ಪತ್ರವನ್ನು ಸಿದ್ದರಾಮಯ್ಯ ಪ್ರದರ್ಶಿಸಿದರು.

ಅಕ್ಕಿ ಸಿಗದಿದ್ದರೆ ಬಡವರ ಖಾತೆಗೆ ಹಣ ಹಾಕಿ: ಸಿ.ಟಿ.ರವಿ

”ಸಿದ್ದರಾಮಯ್ಯ ಅವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ನೀಡಲೇಬೇಕು. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿಯ ಮಾರುಕಟ್ಟೆ ದರದ ಮೊತ್ತವನ್ನು ಬಡವರ ಖಾತೆಗೆ ಜಮೆ ಮಾಡಿ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳು ಐದು ಕೆ.ಜಿ.ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವೈಫಲ್ಯ: ವಿಜಯೇಂದ್ರ

”ಅಕ್ಕಿ ಯೋಜನೆ ಜಾರಿಗೆ ತರುವಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿರುವ ನಿಮ್ಮ ಸರ್ಕಾರದ ವೈಫಲ್ಯ ಅನಾವರಣಗೊಳ್ಳುವ ಆತಂಕದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುವ ನಿಮ್ಮ ದಿಕ್ಕು ತಪ್ಪಿಸುವ ತಂತ್ರ ಅರ್ಥ ಮಾಡಿಕೊಳ್ಳದೇ ಇರುವಷ್ಟು ನಮ್ಮಜನ ಮುಗ್ಧರಲ್ಲ” ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

”ಉಚಿತ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅಕ್ಕಿ ಒದಗಿಸುತ್ತಿಲ್ಲ ಎಂದು ಆರೋಪಿಸಿದ್ದೀರಿ. ಈ ಹಿಂದೆಯೂ ನಿಮ್ಮ ಆಡಳಿತದ ಅವಧಿಯಲ್ಲಿ ಕೇಂದ್ರದಿಂದ ಅಕ್ಕಿ ತರಿಸಿಕೊಂಡು ಅನ್ನರಾಮಯ್ಯ ಎಂದು ಕರೆಸಿಕೊಂಡಿರಿ. ಅಪ್ಪಿತಪ್ಪಿಯೂ ಕೇಂದ್ರ ಸರ್ಕಾರದ ಕೊಡುಗೆ ಕುರಿತು ಎಲ್ಲೂ ಉಲ್ಲೇಖಿಸುವ ಔದಾರ್ಯವನ್ನು ತೋರಿಸಲೇ ಎಲ್ಲ” ಎಂದು ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...