Homeಕರ್ನಾಟಕಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸಿದ್ದರಾಮಯ್ಯ ಅವರ ಕನಸಿನ ಯೋಜನೆ ಎಂದೇ ಕರೆಸಿಕೊಳ್ಳುವ ಯೋಜನೆ ‘ಅನ್ನಭಾಗ್ಯ’ ಯೋಜನೆಗೆ ಇದೀಗ ಕತ್ತರಿ ಹಾಕಲಾಗುತ್ತದೆ ಎಂದು ಎನ್ನುವ ವಿಚಾರ ಚರ್ಚೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಹೆಚ್ಚುವರಿ ತಲಾ 5 ಕೆ.ಜಿ ಅಕ್ಕಿ ವಿತರಣೆಗಾಗಿ ತಿಂಗಳಿಗೆ 2.28 ಲಕ್ಷ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಇದಕ್ಕೆ ಬಿಜೆಪಿಯ ಬಡವರ ವಿರೋಧಿ ಧೋರಣೆಯೇ ಕಾರಣ. ಈ ಸಂಬಂಧ ಕೇಂದ್ರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.

”ಭಾರತೀಯ ಆಹಾರ ನಿಗಮವು 7 ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್‌ಗೆ ಒಳ್ಳೆಯ ಹೆಸರು ಬರುತ್ತದೆ. ಬಡವರ ಕಲ್ಯಾಣ ಆಗುತ್ತದೆ. ಅದನ್ನು ತಪ್ಪಿಸಬೇಕು ಎಂದೇ ಕೇಂದ್ರ ಸರ್ಕಾರ ರಾಜಕಾರಣ ಮಾಡುತ್ತಿದೆ” ಎಂದು ಹೇಳಿದರು.

”ನಿಗಮವು ನಮಗೆ ಅಕ್ಕಿ ಕೊಡುವುದಾಗಿ ತಿಳಿಸಿದ್ದರಿಂದಲೇ ನಾವು ಜುಲೈ 1 ರಿಂದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿಗೆ ತಲಾ 10 ಕೆ.ಜಿ ಅಕ್ಕಿ ಕೊಡುವುದಾಗಿ ಹೇಳಿದ್ದೆವು. ಈಗ ಕೊಡುವುದಿಲ್ಲ ಎನ್ನುತ್ತಿದೆ. ಬೇರೆ ರಾಜ್ಯಗಳಿಂದ ಖರೀದಿಸಬೇಕಾಗಿದೆ. ತಮ್ಮ ಬಳಿ ಅಕ್ಕಿ ಇಲ್ಲ ಎಂದು ಪಂಜಾಬ್ ಹೇಳಿದೆ. ಛತ್ತೀಸ್‌ಗಢ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ನೋಡೋಣ ಎಂದಿದ್ದಾರೆ. ಆ ರಾಜ್ಯಗಳ ಜತೆ ಮಾತುಕತೆಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಅಲ್ಲಿಗೆ ತೆರಳಲಿದ್ದಾರೆ” ಎಂದು ತಿಳಿಸಿದರು.

ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ ಪ್ರಕರಣ; ರಾಹುಲ್, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ಗೆ ಕೋರ್ಟ್ ಸಮನ್ಸ್

”ನಮ್ಮ ಅಧಿಕಾರಿಗಳು  ಹೆಚ್ಚುವರಿ ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ನಿಗಮ ಅಧಿಕಾರಿಗಳು ನಿಗಮದ ಬಳಿ ಅಕ್ಕಿ ಇದೆ. 2.8 ಲಕ್ಷ ಟನ್ ಅಕ್ಕಿ ಕೊಡಲು ಅಭ್ಯಂತರವಿಲ್ಲ ಎಂದು ಹೇಳಿದ್ದರು. ಪ್ರತಿ ಕ್ವಿಂಟಲ್‌ಗೆ 73,400ರಂತೆ, ಎಲೆಕ್ಟ್ರಾನಿಕ್ ಹರಾಜಿನಲ್ಲಿ ಭಾಗವಹಿಸದೇ ಪಡೆದುಕೊಳ್ಳಬಹುದು ಎಂದೂ ನಿಗಮದ ಪ್ರಾದೇಶಿಕ ವ್ಯವಸ್ಥಾಪಕರು ತಿಳಿಸಿದ್ದರು. ಆ ಬಳಿಕ ಇನ್ನೊಂದು ಪತ್ರ ಬರೆದು 13,189.45 ಟನ್ ಅಕ್ಕಿ ಕೊಡುವುದಾಗಿಯೂ ಹೇಳಿದ್ದರು” ಎಂದು ಸಿದ್ದರಾಮಯ್ಯ ವಿವರಿಸಿದರು.

ರಾಜ್ಯಗಳಿಗೆ ಕೇಂದ್ರದ ಪತ್ರ..

ಜೂನ್ 13 ರಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಪತ್ರವೊಂದನ್ನು ಬರೆದಿತ್ತು. ಅದರಲ್ಲಿ ಈಶಾನ್ಯ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳು ಹೆಚ್ಚುವರಿ ಅಕ್ಕಿ ಮತ್ತು ಗೋಧಿಯನ್ನು ‘ಮುಕ್ತ ಮಾರುಕಟ್ಟೆಯ ಮಾರಾಟ ಯೋಜನೆ’ಯಡಿ (ಒಎಂಎಸ್‌ಎಸ್‌ಡಿ) ಖರೀದಿಸಲು ಅವಕಾಶ ಇಲ್ಲ’ ಎಂದುತಿಳಿಸಿತ್ತು. ಈ ಪತ್ರವನ್ನು ಸಿದ್ದರಾಮಯ್ಯ ಪ್ರದರ್ಶಿಸಿದರು.

ಅಕ್ಕಿ ಸಿಗದಿದ್ದರೆ ಬಡವರ ಖಾತೆಗೆ ಹಣ ಹಾಕಿ: ಸಿ.ಟಿ.ರವಿ

”ಸಿದ್ದರಾಮಯ್ಯ ಅವರೇ ನಿಮ್ಮ ಪ್ರಣಾಳಿಕೆ ಪ್ರಕಾರ ನೀವು ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ ನೀಡಲೇಬೇಕು. ಅಕ್ಕಿ ಹೊಂದಿಸಲು ಸಾಧ್ಯವಾಗದಿದ್ದರೆ ಅಲ್ಲಿಯವರೆಗೆ ಪ್ರತಿಯೊಬ್ಬರಿಗೂ 10 ಕೆ.ಜಿ ಅಕ್ಕಿಯ ಮಾರುಕಟ್ಟೆ ದರದ ಮೊತ್ತವನ್ನು ಬಡವರ ಖಾತೆಗೆ ಜಮೆ ಮಾಡಿ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ”ರಾಜ್ಯದ ಪ್ರತಿಯೊಬ್ಬ ಬಡವರಿಗೂ ಪ್ರತಿ ತಿಂಗಳು ಐದು ಕೆ.ಜಿ.ಅಕ್ಕಿ ಕೊಡುತ್ತಿರುವುದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ” ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರದ ವೈಫಲ್ಯ: ವಿಜಯೇಂದ್ರ

”ಅಕ್ಕಿ ಯೋಜನೆ ಜಾರಿಗೆ ತರುವಲ್ಲಿ ಅಸಹಾಯಕ ಪರಿಸ್ಥಿತಿಯಲ್ಲಿರುವ ನಿಮ್ಮ ಸರ್ಕಾರದ ವೈಫಲ್ಯ ಅನಾವರಣಗೊಳ್ಳುವ ಆತಂಕದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುವ ನಿಮ್ಮ ದಿಕ್ಕು ತಪ್ಪಿಸುವ ತಂತ್ರ ಅರ್ಥ ಮಾಡಿಕೊಳ್ಳದೇ ಇರುವಷ್ಟು ನಮ್ಮಜನ ಮುಗ್ಧರಲ್ಲ” ಎಂದು ಬಿಜೆಪಿ ಉಪಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

”ಉಚಿತ ಅಕ್ಕಿ ವಿತರಿಸಲು ಕೇಂದ್ರ ಸರ್ಕಾರ ಅಕ್ಕಿ ಒದಗಿಸುತ್ತಿಲ್ಲ ಎಂದು ಆರೋಪಿಸಿದ್ದೀರಿ. ಈ ಹಿಂದೆಯೂ ನಿಮ್ಮ ಆಡಳಿತದ ಅವಧಿಯಲ್ಲಿ ಕೇಂದ್ರದಿಂದ ಅಕ್ಕಿ ತರಿಸಿಕೊಂಡು ಅನ್ನರಾಮಯ್ಯ ಎಂದು ಕರೆಸಿಕೊಂಡಿರಿ. ಅಪ್ಪಿತಪ್ಪಿಯೂ ಕೇಂದ್ರ ಸರ್ಕಾರದ ಕೊಡುಗೆ ಕುರಿತು ಎಲ್ಲೂ ಉಲ್ಲೇಖಿಸುವ ಔದಾರ್ಯವನ್ನು ತೋರಿಸಲೇ ಎಲ್ಲ” ಎಂದು ಅವರು ಕುಟುಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...