Homeಕರ್ನಾಟಕಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

ಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದ್ದಾರೆ.

ಇಂದು (ಜೂನ್ 23) ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿಸದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದರು.

ಕೇಂದ್ರ ಆಹಾರ ಸಚಿವರನ್ನು ಭೇಟಿಯಾಗಲು ಕೆ.ಎಚ್‌.ಮುನಿಯಪ್ಪ ಅವರು ಮೂರು ದಿನಗಳಿಂದ ಪ್ರಯತ್ನ ನಡೆಸಿದರೂ ಯಶಸ್ಸು ಸಿಕ್ಕಿರಲಿಲ್ಲ. ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಲು ಮೂರು ದಿನಗಳಿಂದ ಪ್ರಯತ್ನ ನಡೆದಿದೆ. ಅವರು ಭೇಟಿಗೆ ಕಾಲಾವಕಾಶ ಕೊಟ್ಟಿಲ್ಲ ಎಂದು ಮುನಿಯಪ್ಪ ಬೇಸರ ವ್ಯಕ್ತಪಡಿಸಿದ್ದರು.

”ಆಹಾರ ಖಾತೆಯ ರಾಜ್ಯ ಸಚಿವರನ್ನು ಗುರುವಾರ ಬೆಳಿಗ್ಗೆ 10 ಗಂಟೆಗೆ ಭೇಟಿ ಮಾಡಲು ಕಾಲಾವಕಾಶ ಕೇಳಿದ್ದೆ. ಅವರು ಒಪ್ಪಿದ್ದರು. ಬಳಿಕ ನಿಲುವು ಬದಲಿಸಿದರು. ಅನ್ನ ಭಾಗ್ಯದ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿರುವುದು ಸ್ಪಷ್ಟಗೊಂಡಿದೆ” ಎಂದು ಮುನಿಯಪ್ಪ ಬೇಸರ ಹೊರಹಾಕಿದರು.

ಪಿಯೂಷ್​​ ಗೋಯಲ್ ಅವರು ರಾಜ್ಯಕ್ಕೆ ಅಕ್ಕಿ ಪೂರೈಸಲು​ ನಿರಾಕರಿಸಿದ ಬಳಿಕ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ”ಕೇಂದ್ರ ಸರ್ಕಾರದ ಧೋರಣೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತಿದೆ. ಮುಂದೆ ಏನು ಮಾಡಬೇಕೆಂದು ಸಿಎಂ, ಆಹಾರ ಸಚಿವರು ನಿರ್ಧರಿಸುತ್ತಾರೆ. ಇನ್ನು ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ಧರಣಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಪ್ರತಿಭಟನೆ ಮಾಡಿದರೆ ಒಳ್ಳೆಯದು” ಎಂದು ಟಾಂಗ್ ನೀಡಿದರು.

ಅನ್ನ ಭಾಗ್ಯ ಯೋಜನೆಗೆ ಭಾರತ ಆಹಾರ ನಿಗಮದ ಮುಕ್ತ ಮಾರುಕಟ್ಟೆ ವ್ಯಾಪಾರ ಯೋಜನೆಯಡಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿತ್ತು. ಆದರೆ, ಈಶಾನ್ಯ ರಾಜ್ಯಗಳು ಹಾಗೂ ನೈಸರ್ಗಿಕ ವಿಕೋಪ ಎದುರಿಸುತ್ತಿರುವ ರಾಜ್ಯಗಳಿಗೆ ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಅಕ್ಕಿ ಹಾಗೂ ಗೋಧಿ ಮಾರಾಟವನ್ನು ಜೂನ್ 13ರಂದು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತು.

ರಾಷ್ಟಪತಿ ಭೇಟಿ, ಕೇಂದ್ರ ಸಚಿವರ ಭೇಟಿ ಸೇರಿದಂತೆ ವಿವಿಧ ಕಾರಣಕ್ಕೆ ದೆಹಲಿಗೆ ಹಾರಿದ್ದ ಸಿಎಂ ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಿ ಅಕ್ಕಿ ಸಂಬಂಧ ಚರ್ಚಿಸಿದ್ದರು. ಅಮಿತ್‌ ಶಾ ಕೂಡಾ ಸಂಬಂಧ ಪಟ್ಟವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದ್ದರಂತೆ, ಆದರೆ, ಇದೀಗ ಸ್ವತಃ ಕೇಂದ್ರ ಆಹಾರ ಸಚಿವ ಪಿಯೂಷ್​​ ಗೋಯಲ್, ಕರ್ನಾಟಕಕ್ಕೆ ಅಕ್ಕಿ ಕೊಡಲು​ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...