Homeಕರ್ನಾಟಕಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

ಕರ್ನಾಟಕಕ್ಕೆ ಅಕ್ಕಿ ನೀಡಲು ಸಾಧ್ಯವಿಲ್ಲ ಎಂದ ಕೇಂದ್ರ; ಇದು ರಾಜಕೀಯ ದುರುದ್ದೇಶ: ಮುನಿಯಪ್ಪ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಅಗತ್ಯವಿರುವ 5 ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದ್ದಾರೆ.

ಇಂದು (ಜೂನ್ 23) ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪಿಯೂಷ್ ಗೋಯಲ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ”ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿಸದರು.

”ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ” ಎಂದು ಹೇಳಿದರು.

ಕೇಂದ್ರ ಆಹಾರ ಸಚಿವರನ್ನು ಭೇಟಿಯಾಗಲು ಕೆ.ಎಚ್‌.ಮುನಿಯಪ್ಪ ಅವರು ಮೂರು ದಿನಗಳಿಂದ ಪ್ರಯತ್ನ ನಡೆಸಿದರೂ ಯಶಸ್ಸು ಸಿಕ್ಕಿರಲಿಲ್ಲ. ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ಅವರನ್ನು ಭೇಟಿ ಮಾಡಲು ಮೂರು ದಿನಗಳಿಂದ ಪ್ರಯತ್ನ ನಡೆದಿದೆ. ಅವರು ಭೇಟಿಗೆ ಕಾಲಾವಕಾಶ ಕೊಟ್ಟಿಲ್ಲ ಎಂದು ಮುನಿಯಪ್ಪ ಬೇಸರ ವ್ಯಕ್ತಪಡಿಸಿದ್ದರು.

”ಆಹಾರ ಖಾತೆಯ ರಾಜ್ಯ ಸಚಿವರನ್ನು ಗುರುವಾರ ಬೆಳಿಗ್ಗೆ 10 ಗಂಟೆಗೆ ಭೇಟಿ ಮಾಡಲು ಕಾಲಾವಕಾಶ ಕೇಳಿದ್ದೆ. ಅವರು ಒಪ್ಪಿದ್ದರು. ಬಳಿಕ ನಿಲುವು ಬದಲಿಸಿದರು. ಅನ್ನ ಭಾಗ್ಯದ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿರುವುದು ಸ್ಪಷ್ಟಗೊಂಡಿದೆ” ಎಂದು ಮುನಿಯಪ್ಪ ಬೇಸರ ಹೊರಹಾಕಿದರು.

ಪಿಯೂಷ್​​ ಗೋಯಲ್ ಅವರು ರಾಜ್ಯಕ್ಕೆ ಅಕ್ಕಿ ಪೂರೈಸಲು​ ನಿರಾಕರಿಸಿದ ಬಳಿಕ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ”ಕೇಂದ್ರ ಸರ್ಕಾರದ ಧೋರಣೆ ಏನು ಎಂದು ಎಲ್ಲರಿಗೂ ಅರ್ಥವಾಗುತ್ತಿದೆ. ಮುಂದೆ ಏನು ಮಾಡಬೇಕೆಂದು ಸಿಎಂ, ಆಹಾರ ಸಚಿವರು ನಿರ್ಧರಿಸುತ್ತಾರೆ. ಇನ್ನು ಯಡಿಯೂರಪ್ಪ ಸೇರಿ ಬಿಜೆಪಿ ನಾಯಕರು ಧರಣಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಪ್ರತಿಭಟನೆ ಮಾಡಿದರೆ ಒಳ್ಳೆಯದು” ಎಂದು ಟಾಂಗ್ ನೀಡಿದರು.

ಅನ್ನ ಭಾಗ್ಯ ಯೋಜನೆಗೆ ಭಾರತ ಆಹಾರ ನಿಗಮದ ಮುಕ್ತ ಮಾರುಕಟ್ಟೆ ವ್ಯಾಪಾರ ಯೋಜನೆಯಡಿ ಅಕ್ಕಿ ಖರೀದಿಸಲು ಕರ್ನಾಟಕ ಸರ್ಕಾರ ತೀರ್ಮಾನಿಸಿತ್ತು. ಆದರೆ, ಈಶಾನ್ಯ ರಾಜ್ಯಗಳು ಹಾಗೂ ನೈಸರ್ಗಿಕ ವಿಕೋಪ ಎದುರಿಸುತ್ತಿರುವ ರಾಜ್ಯಗಳಿಗೆ ಹೊರತುಪಡಿಸಿ ಉಳಿದ ರಾಜ್ಯಗಳಿಗೆ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಅಕ್ಕಿ ಹಾಗೂ ಗೋಧಿ ಮಾರಾಟವನ್ನು ಜೂನ್ 13ರಂದು ಕೇಂದ್ರ ಸರ್ಕಾರ ಸ್ಥಗಿತಗೊಳಿಸಿತು.

ರಾಷ್ಟಪತಿ ಭೇಟಿ, ಕೇಂದ್ರ ಸಚಿವರ ಭೇಟಿ ಸೇರಿದಂತೆ ವಿವಿಧ ಕಾರಣಕ್ಕೆ ದೆಹಲಿಗೆ ಹಾರಿದ್ದ ಸಿಎಂ ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಿ ಅಕ್ಕಿ ಸಂಬಂಧ ಚರ್ಚಿಸಿದ್ದರು. ಅಮಿತ್‌ ಶಾ ಕೂಡಾ ಸಂಬಂಧ ಪಟ್ಟವರ ಜತೆ ಚರ್ಚಿಸುತ್ತೇನೆ ಎಂದು ಹೇಳಿದ್ದರಂತೆ, ಆದರೆ, ಇದೀಗ ಸ್ವತಃ ಕೇಂದ್ರ ಆಹಾರ ಸಚಿವ ಪಿಯೂಷ್​​ ಗೋಯಲ್, ಕರ್ನಾಟಕಕ್ಕೆ ಅಕ್ಕಿ ಕೊಡಲು​ ನಿರಾಕರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅನ್ನಭಾಗ್ಯ: ಕೇಂದ್ರೀಯ ಸಂಸ್ಥೆಗಳಿಂದಲೇ ಅಗತ್ಯವಿರುವ ಅಕ್ಕಿ ಖರೀದಿಗೆ ಪ್ರಯತ್ನ; ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...