Homeಕರ್ನಾಟಕಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಕ್ಸ್ (ಟ್ವಿಟರ್)ನಲ್ಲಿ ಬುಧವಾರ ಸಂಜೆ ನಡೆದ ‘ನಮ್ಮ ತೆರಿಗೆ, ನಮ್ಮ ಹಕ್ಕು’ ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡಿದರು.

ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡೀ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿದೆ. ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಶೇ. 4.71 ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ ಶೇ. 3.64ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ, ಶೇ. 1.07 ನಮಗೆ ಕಡಿತ ಆಗಿದೆ. ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದಿದ್ದು, ಬರೊಬ್ಬರಿ 1,87000 ಕೋಟಿ ರೂಪಾಯಿ ನಷ್ಟ ಆಗಿದೆ. ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ಸಿಎಂ ತಿಳಿಸಿದರು.

ಬೆಂಗಳೂರು ಫೆರಿಫೆರಲ್ ರಸ್ತೆ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ದಿಗೆ 6,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ. ವಿಶೇಷ ಅನುದಾನ ಕೊಡಲು ಹಣಕಾಸು ಆಯೋಗ ಶಿಫಾರಸ್ಸು ಮಾಡಿತ್ತು. ಇದನ್ನು ಕೊಡಬಾರದು ಎಂದು ತೀರ್ಮಾನ ಮಾಡಿ ತಡೆದವರು ನಿರ್ಮಲಾ ಸೀತಾರಾಮನ್. ಕರ್ನಾಟಕದಿಂದ ಆಯ್ಕೆಯಾದ ಅವರು ರಾಜ್ಯಕ್ಕೆ ಇಷ್ಟು ದೊಡ್ಡ ಅನ್ಯಾಯ ಮಾಡಿಬಿಟ್ಟರು ಎಂದು ಹೇಳಿದರು.

ಸೆಸ್ ಮತ್ತು ಸರ್ ಚಾರ್ಜ್‌ನಿಂದ ಸಂಗ್ರಹ ಆಗುವ ತೆರಿಗೆಗಳಲ್ಲಿ ಒಂದು ರೂಪಾಯಿಯನ್ನೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡುವುದಿಲ್ಲ. ಆದ್ದರಿಂದ, ಇದರಲ್ಲೂ ನಾವು (ರಾಜ್ಯ) ಪಾಲು ಕೇಳಬೇಕು ಎಂದು ತೀರ್ಮಾನ ಮಾಡಿದ್ದೇವೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ನಾನು ಒತ್ತಾಯಿಸುತ್ತೇನೆ. ಇದಕ್ಕೇ ನಾನು ‘ನನ್ನ ತೆರಿಗೆ ನನ್ನ ಹಕ್ಕು’ ಎನ್ನೋದು ಎಂದರು.

ರಾಜ್ಯಗಳ ಅಭಿವೃದ್ಧಿಗೆ ಸೆಸ್, ಸರ್ ಚಾರ್ಜ್ ನಲ್ಲಿ ಪಾಲು ಕೊಡಲೇಬೇಕು. ರಾಜ್ಯಗಳ ಅಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ರಾಜ್ಯಗಳು ದುರ್ಬಲ ಆದರೆ ದೇಶ ದುರ್ಬಲ ಆಗುತ್ತದೆ. ರಾಜ್ಯಗಳು ಸುಭದ್ರ ಆಗಿದ್ದರೆ ದೇಶವೂ ಸುಭದ್ರ ಆಗುತ್ತದೆ. ದೇಶ ಅಂದರೆ ರಾಜ್ಯಗಳ ಒಕ್ಕೂಟ. ತೆರಿಗೆ ವಸೂಲಾಗುವುದೇ ರಾಜ್ಯಗಳಿಂದ. ಹೀಗಿದ್ದಾಗ ರಾಜ್ಯಗಳಿಗೆ ನ್ಯಾಯಯುತವಾದ ತೆರಿಗೆ ಕೊಡಿ ಎನ್ನುವುದು ನಮ್ಮ ಒತ್ತಾಯ. ಅಭಿವೃದ್ಧಿಯನ್ನೇ ಮಾಡದ ಉತ್ತರ ಪ್ರದೇಶಕ್ಕೆ 2,18,000 ಸಾವಿರ ಕೋಟಿಗೂ ರೂಪಾಯಿಗೂ ಅಧಿಕ ಹಣ ಹೋಗುತ್ತದೆ. ನಮಗೆ 52,000 ಸಾವಿರ ಕೋಟಿ ರೂ. ಮಾತ್ರ ಕೊಡುತ್ತಿದ್ದಾರೆ. ಇದನ್ನು ಸಹಿಸಬೇಕಾ? ಉತ್ತರ ಪ್ರದೇಶದ ಜನಸಂಖ್ಯೆ ಹೆಚ್ಚಾಗಿದ್ದರೂ, ಅವರಿಂದ ಬರುವ ತೆರಿಗೆ ಕಡಿಮೆ. ಉತ್ತರ ಪ್ರದೇಶಕ್ಕೆ ಕೊಡಬೇಡಿ ಎನ್ನುವುದು ನಮ್ಮ ವಾದವಲ್ಲ. ನಮಗೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ ಎಂದು ಸಿಎಂ ಹೇಳಿದರು.

ಮೋದಿ ಅವರು ಪ್ರಧಾನಿ ಆದ ಬಳಿಕ ಕಾರ್ಪೋರೇಟ್ ಮೇಲಿನ ತೆರಿಗೆ ಪ್ರಮಾಣವನ್ನು ಶೇ.30 ರಿಂದ ಶೇ.22.5ಕ್ಕೆ ಇಳಿಸಿದ್ದಾರೆ. ಕಾರ್ಪೋರೇಟ್‌ಗಳಿಗೆ ಕಡಿಮೆ ಮಾಡಿ ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ಹೇರಿದ್ದಾರೆ. ಅಂದರೆ ಬಡವರು, ಮಧ್ಯಮ ವರ್ಗದವರಿಂದ ತೆರಿಗೆ ವಸೂಲಿ ಮಾಡುವುದನ್ನು ಹೆಚ್ಚು ಮಾಡುತ್ತಲೇ ಇದ್ದಾರೆ. ನಮ್ಮ ಸಂಸದರು, ಕೇಂದ್ರದಲ್ಲಿ ಮಂತ್ರಿಗಳಾಗಿರುವವರು ಯಾರೂ ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ ಜಿಎಸ್‌ಟಿ ತೆರಿಗೆ ಪ್ರಮಾಣ ಕಡಿಮೆ ಆಗಿ, ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ ಜೆಎಸ್‌ಟಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಆದಾಯಕ್ಕೂ ತೆರಿಗೆ ಕಟ್ಟಿ, ತಾವು ಮಾಡುವ ಖರ್ಚಿಗೂ ತೆರಿಗೆ ಕಟ್ಟುವ ಜನರು ಅವರ ಹಣಕ್ಕೆ, ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಇದೇ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಶೇ.50ರಷ್ಟು ತೆರಿಗೆ ಪಾಲು ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ರಾಜ್ಯಗಳು ಭಿಕ್ಷುಕರಾ? ಎಂದು ಪ್ರಶ್ನಿಸಿದ್ದರು. ಕೇಂದ್ರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ತೀವಿ ಎಂದು ಹೇಳಿದ್ದರು. ಈಗ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಸದನದಲ್ಲಿ ಪದೇ ಪದೇ ಹೇಳಿದ್ದೆ. ಯಡಿಯೂರಪ್ಪ, ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾಗಿ ರಾಜ್ಯದ ಪಾಲನ್ನು ತರಲು ಪ್ರಯತ್ನಿಸಲೇ ಇಲ್ಲ. ಈಗ ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನೆ ಮಾಡದೆ, ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದು ಕಿಡಿಕಾರಿದರು.

ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಹೀಗಿದ್ದಾಗ ಚೀನಾ ರೀತಿಯ ಕೇಂದ್ರದ ಏಕಸ್ವಾಮ್ಯ ಮತ್ತು ಅಮೆರಿಕದ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಪರವಾಗಿ ಇರುವವರು ಎಂದು ಸಿಎಂ ಸ್ಪಷ್ಟಪಡಿಸಿದರು.

ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...