Homeಕರ್ನಾಟಕಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಕ್ಸ್ (ಟ್ವಿಟರ್)ನಲ್ಲಿ ಬುಧವಾರ ಸಂಜೆ ನಡೆದ ‘ನಮ್ಮ ತೆರಿಗೆ, ನಮ್ಮ ಹಕ್ಕು’ ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡಿದರು.

ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡೀ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿದೆ. ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಶೇ. 4.71 ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ ಶೇ. 3.64ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ, ಶೇ. 1.07 ನಮಗೆ ಕಡಿತ ಆಗಿದೆ. ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದಿದ್ದು, ಬರೊಬ್ಬರಿ 1,87000 ಕೋಟಿ ರೂಪಾಯಿ ನಷ್ಟ ಆಗಿದೆ. ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ಸಿಎಂ ತಿಳಿಸಿದರು.

ಬೆಂಗಳೂರು ಫೆರಿಫೆರಲ್ ರಸ್ತೆ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ದಿಗೆ 6,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ. ವಿಶೇಷ ಅನುದಾನ ಕೊಡಲು ಹಣಕಾಸು ಆಯೋಗ ಶಿಫಾರಸ್ಸು ಮಾಡಿತ್ತು. ಇದನ್ನು ಕೊಡಬಾರದು ಎಂದು ತೀರ್ಮಾನ ಮಾಡಿ ತಡೆದವರು ನಿರ್ಮಲಾ ಸೀತಾರಾಮನ್. ಕರ್ನಾಟಕದಿಂದ ಆಯ್ಕೆಯಾದ ಅವರು ರಾಜ್ಯಕ್ಕೆ ಇಷ್ಟು ದೊಡ್ಡ ಅನ್ಯಾಯ ಮಾಡಿಬಿಟ್ಟರು ಎಂದು ಹೇಳಿದರು.

ಸೆಸ್ ಮತ್ತು ಸರ್ ಚಾರ್ಜ್‌ನಿಂದ ಸಂಗ್ರಹ ಆಗುವ ತೆರಿಗೆಗಳಲ್ಲಿ ಒಂದು ರೂಪಾಯಿಯನ್ನೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡುವುದಿಲ್ಲ. ಆದ್ದರಿಂದ, ಇದರಲ್ಲೂ ನಾವು (ರಾಜ್ಯ) ಪಾಲು ಕೇಳಬೇಕು ಎಂದು ತೀರ್ಮಾನ ಮಾಡಿದ್ದೇವೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ನಾನು ಒತ್ತಾಯಿಸುತ್ತೇನೆ. ಇದಕ್ಕೇ ನಾನು ‘ನನ್ನ ತೆರಿಗೆ ನನ್ನ ಹಕ್ಕು’ ಎನ್ನೋದು ಎಂದರು.

ರಾಜ್ಯಗಳ ಅಭಿವೃದ್ಧಿಗೆ ಸೆಸ್, ಸರ್ ಚಾರ್ಜ್ ನಲ್ಲಿ ಪಾಲು ಕೊಡಲೇಬೇಕು. ರಾಜ್ಯಗಳ ಅಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ರಾಜ್ಯಗಳು ದುರ್ಬಲ ಆದರೆ ದೇಶ ದುರ್ಬಲ ಆಗುತ್ತದೆ. ರಾಜ್ಯಗಳು ಸುಭದ್ರ ಆಗಿದ್ದರೆ ದೇಶವೂ ಸುಭದ್ರ ಆಗುತ್ತದೆ. ದೇಶ ಅಂದರೆ ರಾಜ್ಯಗಳ ಒಕ್ಕೂಟ. ತೆರಿಗೆ ವಸೂಲಾಗುವುದೇ ರಾಜ್ಯಗಳಿಂದ. ಹೀಗಿದ್ದಾಗ ರಾಜ್ಯಗಳಿಗೆ ನ್ಯಾಯಯುತವಾದ ತೆರಿಗೆ ಕೊಡಿ ಎನ್ನುವುದು ನಮ್ಮ ಒತ್ತಾಯ. ಅಭಿವೃದ್ಧಿಯನ್ನೇ ಮಾಡದ ಉತ್ತರ ಪ್ರದೇಶಕ್ಕೆ 2,18,000 ಸಾವಿರ ಕೋಟಿಗೂ ರೂಪಾಯಿಗೂ ಅಧಿಕ ಹಣ ಹೋಗುತ್ತದೆ. ನಮಗೆ 52,000 ಸಾವಿರ ಕೋಟಿ ರೂ. ಮಾತ್ರ ಕೊಡುತ್ತಿದ್ದಾರೆ. ಇದನ್ನು ಸಹಿಸಬೇಕಾ? ಉತ್ತರ ಪ್ರದೇಶದ ಜನಸಂಖ್ಯೆ ಹೆಚ್ಚಾಗಿದ್ದರೂ, ಅವರಿಂದ ಬರುವ ತೆರಿಗೆ ಕಡಿಮೆ. ಉತ್ತರ ಪ್ರದೇಶಕ್ಕೆ ಕೊಡಬೇಡಿ ಎನ್ನುವುದು ನಮ್ಮ ವಾದವಲ್ಲ. ನಮಗೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ ಎಂದು ಸಿಎಂ ಹೇಳಿದರು.

ಮೋದಿ ಅವರು ಪ್ರಧಾನಿ ಆದ ಬಳಿಕ ಕಾರ್ಪೋರೇಟ್ ಮೇಲಿನ ತೆರಿಗೆ ಪ್ರಮಾಣವನ್ನು ಶೇ.30 ರಿಂದ ಶೇ.22.5ಕ್ಕೆ ಇಳಿಸಿದ್ದಾರೆ. ಕಾರ್ಪೋರೇಟ್‌ಗಳಿಗೆ ಕಡಿಮೆ ಮಾಡಿ ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ಹೇರಿದ್ದಾರೆ. ಅಂದರೆ ಬಡವರು, ಮಧ್ಯಮ ವರ್ಗದವರಿಂದ ತೆರಿಗೆ ವಸೂಲಿ ಮಾಡುವುದನ್ನು ಹೆಚ್ಚು ಮಾಡುತ್ತಲೇ ಇದ್ದಾರೆ. ನಮ್ಮ ಸಂಸದರು, ಕೇಂದ್ರದಲ್ಲಿ ಮಂತ್ರಿಗಳಾಗಿರುವವರು ಯಾರೂ ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ ಜಿಎಸ್‌ಟಿ ತೆರಿಗೆ ಪ್ರಮಾಣ ಕಡಿಮೆ ಆಗಿ, ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ ಜೆಎಸ್‌ಟಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಆದಾಯಕ್ಕೂ ತೆರಿಗೆ ಕಟ್ಟಿ, ತಾವು ಮಾಡುವ ಖರ್ಚಿಗೂ ತೆರಿಗೆ ಕಟ್ಟುವ ಜನರು ಅವರ ಹಣಕ್ಕೆ, ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಇದೇ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಶೇ.50ರಷ್ಟು ತೆರಿಗೆ ಪಾಲು ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ರಾಜ್ಯಗಳು ಭಿಕ್ಷುಕರಾ? ಎಂದು ಪ್ರಶ್ನಿಸಿದ್ದರು. ಕೇಂದ್ರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ತೀವಿ ಎಂದು ಹೇಳಿದ್ದರು. ಈಗ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಸದನದಲ್ಲಿ ಪದೇ ಪದೇ ಹೇಳಿದ್ದೆ. ಯಡಿಯೂರಪ್ಪ, ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾಗಿ ರಾಜ್ಯದ ಪಾಲನ್ನು ತರಲು ಪ್ರಯತ್ನಿಸಲೇ ಇಲ್ಲ. ಈಗ ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನೆ ಮಾಡದೆ, ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದು ಕಿಡಿಕಾರಿದರು.

ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಹೀಗಿದ್ದಾಗ ಚೀನಾ ರೀತಿಯ ಕೇಂದ್ರದ ಏಕಸ್ವಾಮ್ಯ ಮತ್ತು ಅಮೆರಿಕದ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಪರವಾಗಿ ಇರುವವರು ಎಂದು ಸಿಎಂ ಸ್ಪಷ್ಟಪಡಿಸಿದರು.

ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...