Homeಕರ್ನಾಟಕಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

ಸೆಸ್, ಸರ್ ಚಾರ್ಜ್‌ನಲ್ಲೂ ನಮಗೆ ಪಾಲು ಕೊಡಬೇಕು: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡ ಮೇಲೆ ಚೀನಾ ಮಾದರಿ ಏಕಸ್ವಾಮ್ಯವನ್ನು ಸಹಿಸಲು, ಅಮೆರಿಕದ ಅಧ್ಯಕ್ಷೀಯ ಮಾದರಿ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಎಕ್ಸ್ (ಟ್ವಿಟರ್)ನಲ್ಲಿ ಬುಧವಾರ ಸಂಜೆ ನಡೆದ ‘ನಮ್ಮ ತೆರಿಗೆ, ನಮ್ಮ ಹಕ್ಕು’ ಕನ್ನಡಿಗರ ಅಭಿಯಾನದ ಕುರಿತ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸುತ್ತಾ ಅವರು ಮಾತನಾಡಿದರು.

ಸಂವಿಧಾನ ಬದ್ದವಾದ ಒಕ್ಕೂಟ ವ್ಯವಸ್ಥೆಯನ್ನು ಇಡೀ ದೇಶ ಒಪ್ಪಿಕೊಂಡಿದೆ. ರಾಜ್ಯ ಮತ್ತು ಕೇಂದ್ರಗಳಿಗೆ ಜನರ ತೆರಿಗೆ ಹಣ ಹಂಚಿಕೆ ಆಗುತ್ತದೆ. ಇದಕ್ಕಾಗಿ 5 ವರ್ಷಕ್ಕೊಮ್ಮೆ ಹಣಕಾಸು ಆಯೋಗ ರಚನೆಯಾಗಿದೆ. ಆಯೋಗದ ಶಿಫಾರಸ್ಸುಗಳನ್ನು ಕೇಂದ್ರ ಸರ್ಕಾರ ಜಾರಿ ಮಾಡುತ್ತದೆ. 15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಬಹಳ ದೊಡ್ಡ ಪ್ರಮಾಣದಲ್ಲಿ ಅನ್ಯಾಯ ಆಗಿದೆ. 14ನೇ ಆಯೋಗದಲ್ಲಿ ರಾಜ್ಯದ ತೆರಿಗೆ ಪಾಲು ಹಂಚಿಕೆ ಶೇ. 4.71 ಇದ್ದದ್ದು 15ನೇ ಹಣಕಾಸು ಆಯೋಗದಲ್ಲಿ ಶೇ. 3.64ಕ್ಕೆ ಕಡಿತ ಮಾಡಿಬಿಟ್ಟರು. ಅಂದರೆ, ಶೇ. 1.07 ನಮಗೆ ಕಡಿತ ಆಗಿದೆ. ಇದರಿಂದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ 5 ವರ್ಷದಲ್ಲಿ ದೊಡ್ಡ ಹೊಡೆತ ಬಿದಿದ್ದು, ಬರೊಬ್ಬರಿ 1,87000 ಕೋಟಿ ರೂಪಾಯಿ ನಷ್ಟ ಆಗಿದೆ. ನಾವು ಕೊಡುವ ತೆರಿಗೆಯ 100 ರೂನಲ್ಲಿ ನಮಗೆ ವಾಪಾಸ್ ಬರೋದು ಕೇವಲ 12-13 ರೂ ಮಾತ್ರ ಎಂದು ಸಿಎಂ ತಿಳಿಸಿದರು.

ಬೆಂಗಳೂರು ಫೆರಿಫೆರಲ್ ರಸ್ತೆ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ದಿಗೆ 6,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ. ವಿಶೇಷ ಅನುದಾನ ಕೊಡಲು ಹಣಕಾಸು ಆಯೋಗ ಶಿಫಾರಸ್ಸು ಮಾಡಿತ್ತು. ಇದನ್ನು ಕೊಡಬಾರದು ಎಂದು ತೀರ್ಮಾನ ಮಾಡಿ ತಡೆದವರು ನಿರ್ಮಲಾ ಸೀತಾರಾಮನ್. ಕರ್ನಾಟಕದಿಂದ ಆಯ್ಕೆಯಾದ ಅವರು ರಾಜ್ಯಕ್ಕೆ ಇಷ್ಟು ದೊಡ್ಡ ಅನ್ಯಾಯ ಮಾಡಿಬಿಟ್ಟರು ಎಂದು ಹೇಳಿದರು.

ಸೆಸ್ ಮತ್ತು ಸರ್ ಚಾರ್ಜ್‌ನಿಂದ ಸಂಗ್ರಹ ಆಗುವ ತೆರಿಗೆಗಳಲ್ಲಿ ಒಂದು ರೂಪಾಯಿಯನ್ನೂ ಕೇಂದ್ರ ಸರ್ಕಾರ ರಾಜ್ಯಗಳಿಗೆ ಕೊಡುವುದಿಲ್ಲ. ಆದ್ದರಿಂದ, ಇದರಲ್ಲೂ ನಾವು (ರಾಜ್ಯ) ಪಾಲು ಕೇಳಬೇಕು ಎಂದು ತೀರ್ಮಾನ ಮಾಡಿದ್ದೇವೆ. ಇದಕ್ಕಾಗಿ ಸಂವಿಧಾನಕ್ಕೆ ತಿದ್ದುಪಡಿ ತನ್ನಿ ಎಂದು ನಾನು ಒತ್ತಾಯಿಸುತ್ತೇನೆ. ಇದಕ್ಕೇ ನಾನು ‘ನನ್ನ ತೆರಿಗೆ ನನ್ನ ಹಕ್ಕು’ ಎನ್ನೋದು ಎಂದರು.

ರಾಜ್ಯಗಳ ಅಭಿವೃದ್ಧಿಗೆ ಸೆಸ್, ಸರ್ ಚಾರ್ಜ್ ನಲ್ಲಿ ಪಾಲು ಕೊಡಲೇಬೇಕು. ರಾಜ್ಯಗಳ ಅಭಿವೃದ್ಧಿ ಆಗದೆ ದೇಶದ ಅಭಿವೃದ್ಧಿ ಹೇಗೆ ಸಾಧ್ಯ? ರಾಜ್ಯಗಳು ದುರ್ಬಲ ಆದರೆ ದೇಶ ದುರ್ಬಲ ಆಗುತ್ತದೆ. ರಾಜ್ಯಗಳು ಸುಭದ್ರ ಆಗಿದ್ದರೆ ದೇಶವೂ ಸುಭದ್ರ ಆಗುತ್ತದೆ. ದೇಶ ಅಂದರೆ ರಾಜ್ಯಗಳ ಒಕ್ಕೂಟ. ತೆರಿಗೆ ವಸೂಲಾಗುವುದೇ ರಾಜ್ಯಗಳಿಂದ. ಹೀಗಿದ್ದಾಗ ರಾಜ್ಯಗಳಿಗೆ ನ್ಯಾಯಯುತವಾದ ತೆರಿಗೆ ಕೊಡಿ ಎನ್ನುವುದು ನಮ್ಮ ಒತ್ತಾಯ. ಅಭಿವೃದ್ಧಿಯನ್ನೇ ಮಾಡದ ಉತ್ತರ ಪ್ರದೇಶಕ್ಕೆ 2,18,000 ಸಾವಿರ ಕೋಟಿಗೂ ರೂಪಾಯಿಗೂ ಅಧಿಕ ಹಣ ಹೋಗುತ್ತದೆ. ನಮಗೆ 52,000 ಸಾವಿರ ಕೋಟಿ ರೂ. ಮಾತ್ರ ಕೊಡುತ್ತಿದ್ದಾರೆ. ಇದನ್ನು ಸಹಿಸಬೇಕಾ? ಉತ್ತರ ಪ್ರದೇಶದ ಜನಸಂಖ್ಯೆ ಹೆಚ್ಚಾಗಿದ್ದರೂ, ಅವರಿಂದ ಬರುವ ತೆರಿಗೆ ಕಡಿಮೆ. ಉತ್ತರ ಪ್ರದೇಶಕ್ಕೆ ಕೊಡಬೇಡಿ ಎನ್ನುವುದು ನಮ್ಮ ವಾದವಲ್ಲ. ನಮಗೆ ಅನ್ಯಾಯ ಮಾಡಬೇಡಿ ಎನ್ನುವುದು ನಮ್ಮ ಆಗ್ರಹ ಎಂದು ಸಿಎಂ ಹೇಳಿದರು.

ಮೋದಿ ಅವರು ಪ್ರಧಾನಿ ಆದ ಬಳಿಕ ಕಾರ್ಪೋರೇಟ್ ಮೇಲಿನ ತೆರಿಗೆ ಪ್ರಮಾಣವನ್ನು ಶೇ.30 ರಿಂದ ಶೇ.22.5ಕ್ಕೆ ಇಳಿಸಿದ್ದಾರೆ. ಕಾರ್ಪೋರೇಟ್‌ಗಳಿಗೆ ಕಡಿಮೆ ಮಾಡಿ ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ಹೇರಿದ್ದಾರೆ. ಅಂದರೆ ಬಡವರು, ಮಧ್ಯಮ ವರ್ಗದವರಿಂದ ತೆರಿಗೆ ವಸೂಲಿ ಮಾಡುವುದನ್ನು ಹೆಚ್ಚು ಮಾಡುತ್ತಲೇ ಇದ್ದಾರೆ. ನಮ್ಮ ಸಂಸದರು, ಕೇಂದ್ರದಲ್ಲಿ ಮಂತ್ರಿಗಳಾಗಿರುವವರು ಯಾರೂ ದೆಹಲಿಯಲ್ಲಿ ಈ ಅನ್ಯಾಯವನ್ನು ಪ್ರಶ್ನಿಸುವುದೇ ಇಲ್ಲ. ನಾವು ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಲೇ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುತ್ತೇವೆ. ಸಾಮಾನ್ಯ ಜನರ ಖರ್ಚಿನ ಮೇಲೆ ಹಾಕುವ ಜಿಎಸ್‌ಟಿ ತೆರಿಗೆ ಪ್ರಮಾಣ ಕಡಿಮೆ ಆಗಿ, ಶ್ರೀಮಂತರು ಬಳಸುವ ಐಷಾರಾಮಿ ವಸ್ತುಗಳ ಮೇಲೆ ಜೆಎಸ್‌ಟಿ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ತಮ್ಮ ಆದಾಯಕ್ಕೂ ತೆರಿಗೆ ಕಟ್ಟಿ, ತಾವು ಮಾಡುವ ಖರ್ಚಿಗೂ ತೆರಿಗೆ ಕಟ್ಟುವ ಜನರು ಅವರ ಹಣಕ್ಕೆ, ನಮ್ಮ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಅರ್ಥ ಮಾಡಿಕೊಳ್ಳಬೇಕು. ಇದೇ ಮೋದಿ ಅವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗ ಶೇ.50ರಷ್ಟು ತೆರಿಗೆ ಪಾಲು ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ರಾಜ್ಯಗಳು ಭಿಕ್ಷುಕರಾ? ಎಂದು ಪ್ರಶ್ನಿಸಿದ್ದರು. ಕೇಂದ್ರಕ್ಕೆ ಒಂದು ರೂಪಾಯಿ ತೆರಿಗೆಯನ್ನೂ ಕೊಡುವುದಿಲ್ಲ. ಎಲ್ಲವನ್ನೂ ರಾಜ್ಯವೇ ಇಟ್ಟುಕೊಳ್ತೀವಿ ಎಂದು ಹೇಳಿದ್ದರು. ಈಗ ಪ್ರಧಾನಿ ಆದ ಮೇಲೆ ಉಲ್ಟಾ ಮಾತಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ನಾನು ಸದನದಲ್ಲಿ ಪದೇ ಪದೇ ಹೇಳಿದ್ದೆ. ಯಡಿಯೂರಪ್ಪ, ಬೊಮ್ಮಾಯಿ ಇಬ್ಬರೂ ಮುಖ್ಯಮಂತ್ರಿಗಳಾಗಿ ರಾಜ್ಯದ ಪಾಲನ್ನು ತರಲು ಪ್ರಯತ್ನಿಸಲೇ ಇಲ್ಲ. ಈಗ ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಪ್ರಶ್ನೆ ಮಾಡದೆ, ಅನ್ಯಾಯವನ್ನು ಸಮರ್ಥಿಸುತ್ತಿದ್ದಾರೆ. ಇವರು ರಾಜ್ಯವನ್ನು ಪ್ರತಿನಿಧಿಸುತ್ತಿದ್ದಾರೆ ಎನ್ನುವುದನ್ನೇ ಮರೆತು ಮಾತಾಡಿದ್ದಾರೆ ಎಂದು ಕಿಡಿಕಾರಿದರು.

ನಾವು ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡಿದ್ದೇವೆ. ಹೀಗಿದ್ದಾಗ ಚೀನಾ ರೀತಿಯ ಕೇಂದ್ರದ ಏಕಸ್ವಾಮ್ಯ ಮತ್ತು ಅಮೆರಿಕದ ಅಧ್ಯಕ್ಷೀಯ ಮಾದರಿಯ ಆಡಳಿತವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ನಾವು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಪರವಾಗಿ ಇರುವವರು ಎಂದು ಸಿಎಂ ಸ್ಪಷ್ಟಪಡಿಸಿದರು.

ಕನ್ನಡ ಬಾವುಟ ಮತ್ತು ದ್ವಿಭಾಷಾ ನೀತಿಯ ವಿಚಾರದಲ್ಲೂ ಜನ ಎಚ್ಚೆತ್ತುಕೊಂಡು ಹೋರಾಟ ಮಾಡುವ ಅಗತ್ಯವಿದೆ. ಭಾಷೆಯಾಗಿ ಯಾವ ಭಾಷೆಯನ್ನಾದರೂ ಕಲಿಯಬಹುದು. ಆದರೆ ಕನ್ನಡದ ಮೇಲೆ ಹಿಂದಿ ಅಥವಾ ಇತರೆ ಭಾಷೆಯ ಹೇರಿಕೆ, ಸಾಂಸ್ಕೃತಿಕ ಹೇರಿಕೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್; ಕರ್ನಾಟಕದಿಂದ ಮಾಕೇನ್‌ಗೆ ಟಿಕೆಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...