HomeUncategorizedಸ್ವಾಮಿನಾಥನ್‌ 'ಎಂಎಸ್‌ಪಿ' ಸೂತ್ರದ ಬಗ್ಗೆ ಕೇಂದ್ರ ಸರ್ಕಾರ ಮೌನವಾಗಿದೆ: ಜೈರಾಮ್ ರಮೇಶ್

ಸ್ವಾಮಿನಾಥನ್‌ ‘ಎಂಎಸ್‌ಪಿ’ ಸೂತ್ರದ ಬಗ್ಗೆ ಕೇಂದ್ರ ಸರ್ಕಾರ ಮೌನವಾಗಿದೆ: ಜೈರಾಮ್ ರಮೇಶ್

- Advertisement -
- Advertisement -

ಹಿರಿಯ ವಿಜ್ಞಾನಿಗಳಾದ ಎಂಎಸ್ ಸ್ವಾಮಿನಾಥನ್ ಅವರಿಗೆ ಮೋದಿ ಸರ್ಕಾರ ಭಾರತ ರತ್ನ ಘೋಷಿಸಿದೆ. ಆದರೆ, ರೈತರಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಸ್ವಾಮಿನಾಥನ್ ಸೂತ್ರವನ್ನು ಜಾರಿಗೆ ತರುವ ವಿಚಾರದಲ್ಲಿ ಸರ್ಕಾರ ಮೌನವಾಗಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಚೌಧರಿ ಚರಣ್ ಸಿಂಗ್, ಪಿವಿ ನರಸಿಂಹ ರಾವ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಮೂರು ಭಾರತ ರತ್ನ ಪ್ರಶಸ್ತಿಗಳನ್ನು ಘೋಷಿಸಿದ ನಂತರ ಜೈರಾಮ್ ರಮೇಶ್ ಅವರು ಪ್ರತಿಕ್ರಿಯೆ ನೀಡಿದ್ದು, ‘ಮೋದಿ ಸರ್ಕಾರದ ಹಠಮಾರಿತನದಿಂದಾಗಿ 700 ರೈತರು ತಮ್ಮ ಚಳವಳಿಯಲ್ಲಿ ಹುತಾತ್ಮರಾದರು; ಭರವಸೆ ನೀಡಿದ ಸರ್ಕಾರ ಅವರಿಗೆ ದ್ರೋಹ ಮಾಡಿದೆ. ರೈತರು ಇಂದಿಗೂ ದೆಹಲಿಗೆ ಮೆರವಣಿಗೆ ಬರಲು ಸಿದ್ಧರಾಗಿದ್ದಾರೆ. ಆದರೆ ಸರ್ಕಾರ ಅವರ ಮಾತು ಕೇಳುತ್ತಿಲ್ಲ’ ಎಂದು ಜೈರಾಮ್ ರಮೇಶ್ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ರೈತರಿಗೆ ನ್ಯಾಯ ಸಿಗುವುದೆ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ’ ಎಂದು ಹೇಳಿರುವ ಜೈರಾಮ್ ರಮೇಶ್ ಅವರು ಕಾಂಗ್ರೆಸ್‌ ನಡೆಸುತ್ತಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯ ಉದ್ದೇಶಕ್ಕೆ ಲಿಂಕ್ ಮಾಡಿದ್ದಾರೆ. ‘ರೈತರಿಗೆ ನ್ಯಾಯ ಒದಗಿಸುವುದು ಭಾರತ್ ಜೋಡೋ ನ್ಯಾಯ್ ಯಾತ್ರೆಯ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ. ಸ್ವಾಮಿನಾಥನ್ ಸೂತ್ರದ ಆಧಾರದ ಮೇಲೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ ನೀಡುವ ಕಾನೂನು ಖಾತರಿ ನೀಡಬೇಕು ಎಂಬುದು ‘ಕಿಸಾನ್ ನ್ಯಾಯ’ದ ನಮ್ಮ ಬೇಡಿಕೆಯಾಗಿದೆ. ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಜಿ ಮತ್ತು ಸ್ವಾಮಿನಾಥನ್ ಜಿ ಅವರಿಗೆ ನಿಜವಾದ ಶ್ರದ್ಧಾಂಜಲಿ’ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಎಂಎಸ್ ಸ್ವಾಮಿನಾಥನ್ ಅವರ ಪುತ್ರಿ, ವಿಶ್ವ ಆರೋಗ್ಯ ಸಂಸ್ಥೆಯ ಮಾಜಿ ಮುಖ್ಯ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್, ಎಂಎಸ್ ಸ್ವಾಮಿನಾಥನ್ ಅವರು ತಮ್ಮ ಜೀವಿತಾವಧಿಯಲ್ಲಿ ಈ ಸುದ್ದಿ ಬಂದಿದ್ದರೆ ಸಂತೋಷವಾಗಿರುತ್ತಿದ್ದರು ಎಂದು ಹೇಳಿದ್ದಾರೆ. ‘ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಕೆಲಸ ಮಾಡಲಿಲ್ಲ. ಅವರಿಗೆ ಸಾಕಷ್ಟು ಮನ್ನಣೆ ಬಂದಿತು’ ಎಂದು ಸೌಮ್ಯ ಹೇಳಿದರು. ಎಂಎಸ್ ಸ್ವಾಮಿನಾಥನ್ ಅವರು ಸೆಪ್ಟೆಂಬರ್ 28, 2023 ರಂದು ನಿಧನರಾದರು.

ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂಎಸ್ ಸ್ವಾಮಿನಾಥನ್ ಅವರಿಗೆ ಭಾರತ ರತ್ನವನ್ನು ಸ್ವಾಗತಿಸುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ.

‘ಎಂಎಸ್ ಸ್ವಾಮಿನಾಥನ್ ಮತ್ತು ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಇಬ್ಬರೂ ತಮ್ಮ ಬೇಡಿಕೆಗಳಿಗಾಗಿ ಇನ್ನೂ ಹೋರಾಟ ನಡೆಸುತ್ತಿರುವ ರೈತರಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದ್ದಾರೆ’ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಯುಪಿ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು. ‘ರೈತ ನಾಯಕ (ಚೌಧರಿ ಚರಣ್ ಸಿಂಗ್) ಭಾರತ ರತ್ನ ಪಡೆದಿದ್ದಾರೆ. ನಾನು ಎಲ್ಲ ರೈತರನ್ನು ಅಭಿನಂದಿಸಲು ಬಯಸುತ್ತೇನೆ’ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ; ಚರಣ್ ಸಿಂಗ್, ಪಿವಿ ನರಸಿಂಹರಾವ್, ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...