Homeಮುಖಪುಟಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ

- Advertisement -
- Advertisement -

ಒಟಿಟಿ ಪ್ಲಾಟ್‌ಫಾರ್ಮ್‌ ಮತ್ತು ಆನ್ಲೈನ್ ಸುದ್ದಿ ಮಾಧ್ಯಮಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಆದೇಶ ಜಾರಿಗೊಳಿಸಿದ್ದು, ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ.

ಆನ್ಲೈನ್ ಸುದ್ದಿ ಮಾಧ್ಯಮಗಳು ಸೇರಿದಂತೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ಅಮೇಜಾನ್ ಪ್ರೈಮ್, ನೆಟ್‌ಫ್ಲಿಕ್ಸ್‌ ಹಾಟ್‌ಸ್ಟಾರ್‌ ಮತ್ತು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟ್ಟರ್‌, ಇನ್‌ಸ್ಟಾಗ್ರಾಮ್ ಸೇರಿದಂತೆ ಅನ್ಲೈನ್‌ನಲ್ಲಿ ಪ್ರಸಾರವಾಗುವ ಸಿನೆಮಾ, ಆಡಿಯೋ-ವೀಡಿಯೋಗಳೆಲ್ಲವೂ ಇನ್ನುಮುಂದೆ ಸರ್ಕಾರದ ನಿಯಂತ್ರಣದಲ್ಲಿ ಬರುತ್ತವೆ ಎಂದು ಆದೇಶವು ತಿಳಿಸಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ದೇಶದ ಸುಮಾರು 15 ವೀಡಿಯೋ ಸ್ಟ್ರೀಮಿಂಗ್ ಪ್ಲಾಟ್‍ಫಾರ್ಮ್‍ಗಳು ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಎಂಬ ಸಂಘಟನೆಯಡಿ ಒಂದಾಗಿ, ತಮ್ಮದೇ ನಿಯಂತ್ರಣದ ನಿಯಮಗಳನ್ನು ರಚಿಸಿಕೊಳ್ಳುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಸಹಿ ಮಾಡಿದ್ದವು. ಆದರೆ ಇದಕ್ಕೆ ಸಚಿವಾಲಯ ಒಪ್ಪಿಗೆ ಸೂಚಿಸಿರಲಿಲ್ಲ.

ಒಟಿಟಿ ಪ್ಲಾಟ್‍ಫಾರ್ಮ್‍ಗಳನ್ನು ಸ್ವಾಯತ್ತ ಸಂಸ್ಥೆಯ ನಿಯಂತ್ರಣಕ್ಕೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಕಳೆದ ತಿಂಗಳು ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಇದರ ಕುರಿತು, ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ತನ್ನ ಹೇಳಿಕೆ ನೀಡುವಂತೆ ಕೋರಿತ್ತು.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸುವ ಮೊದಲು, ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. ಏಕೆಂದರೆ ಡಿಜಿಟಲ್ ಮಾಧ್ಯಮವು ಹೆಚ್ಚು ಪರಿಣಾಮ ಬಿರುತ್ತಿದೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್‌ ಸಲ್ಲಿಸಿತ್ತು.

“ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ” ಎಂದು ಕೇಂದ್ರ ಹೇಳಿತ್ತು.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಇಂದು ಪ್ರತಿದಿನ ಟಿವಿಯಲ್ಲಿ ನೋಡುತ್ತಿರುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದರು.

ಯಾವುದೇ ಚಾನೆಲ್ ನಿಯಮವನ್ನು ಉಲ್ಲಂಘಿಸಿ, ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಅದಕ್ಕೆ ₹ 1 ಲಕ್ಷ ದಂಡ ವಿಧಿಸಬೇಕು ಎಂದು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.


ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...