Homeಮುಖಪುಟಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ

- Advertisement -
- Advertisement -

ಒಟಿಟಿ ಪ್ಲಾಟ್‌ಫಾರ್ಮ್‌ ಮತ್ತು ಆನ್ಲೈನ್ ಸುದ್ದಿ ಮಾಧ್ಯಮಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಆದೇಶ ಜಾರಿಗೊಳಿಸಿದ್ದು, ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ.

ಆನ್ಲೈನ್ ಸುದ್ದಿ ಮಾಧ್ಯಮಗಳು ಸೇರಿದಂತೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ಅಮೇಜಾನ್ ಪ್ರೈಮ್, ನೆಟ್‌ಫ್ಲಿಕ್ಸ್‌ ಹಾಟ್‌ಸ್ಟಾರ್‌ ಮತ್ತು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟ್ಟರ್‌, ಇನ್‌ಸ್ಟಾಗ್ರಾಮ್ ಸೇರಿದಂತೆ ಅನ್ಲೈನ್‌ನಲ್ಲಿ ಪ್ರಸಾರವಾಗುವ ಸಿನೆಮಾ, ಆಡಿಯೋ-ವೀಡಿಯೋಗಳೆಲ್ಲವೂ ಇನ್ನುಮುಂದೆ ಸರ್ಕಾರದ ನಿಯಂತ್ರಣದಲ್ಲಿ ಬರುತ್ತವೆ ಎಂದು ಆದೇಶವು ತಿಳಿಸಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ದೇಶದ ಸುಮಾರು 15 ವೀಡಿಯೋ ಸ್ಟ್ರೀಮಿಂಗ್ ಪ್ಲಾಟ್‍ಫಾರ್ಮ್‍ಗಳು ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಎಂಬ ಸಂಘಟನೆಯಡಿ ಒಂದಾಗಿ, ತಮ್ಮದೇ ನಿಯಂತ್ರಣದ ನಿಯಮಗಳನ್ನು ರಚಿಸಿಕೊಳ್ಳುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಸಹಿ ಮಾಡಿದ್ದವು. ಆದರೆ ಇದಕ್ಕೆ ಸಚಿವಾಲಯ ಒಪ್ಪಿಗೆ ಸೂಚಿಸಿರಲಿಲ್ಲ.

ಒಟಿಟಿ ಪ್ಲಾಟ್‍ಫಾರ್ಮ್‍ಗಳನ್ನು ಸ್ವಾಯತ್ತ ಸಂಸ್ಥೆಯ ನಿಯಂತ್ರಣಕ್ಕೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಕಳೆದ ತಿಂಗಳು ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಇದರ ಕುರಿತು, ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ತನ್ನ ಹೇಳಿಕೆ ನೀಡುವಂತೆ ಕೋರಿತ್ತು.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸುವ ಮೊದಲು, ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. ಏಕೆಂದರೆ ಡಿಜಿಟಲ್ ಮಾಧ್ಯಮವು ಹೆಚ್ಚು ಪರಿಣಾಮ ಬಿರುತ್ತಿದೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್‌ ಸಲ್ಲಿಸಿತ್ತು.

“ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ” ಎಂದು ಕೇಂದ್ರ ಹೇಳಿತ್ತು.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಇಂದು ಪ್ರತಿದಿನ ಟಿವಿಯಲ್ಲಿ ನೋಡುತ್ತಿರುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದರು.

ಯಾವುದೇ ಚಾನೆಲ್ ನಿಯಮವನ್ನು ಉಲ್ಲಂಘಿಸಿ, ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಅದಕ್ಕೆ ₹ 1 ಲಕ್ಷ ದಂಡ ವಿಧಿಸಬೇಕು ಎಂದು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.


ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...