Homeಮುಖಪುಟಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ

- Advertisement -
- Advertisement -

ಒಟಿಟಿ ಪ್ಲಾಟ್‌ಫಾರ್ಮ್‌ ಮತ್ತು ಆನ್ಲೈನ್ ಸುದ್ದಿ ಮಾಧ್ಯಮಗಳನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಸರ್ಕಾರ ಆದೇಶ ಜಾರಿಗೊಳಿಸಿದ್ದು, ಆನ್ಲೈನ್ ಮೂಲಕ ಮಾಹಿತಿ, ಮನರಂಜನೆ ನೀಡುತ್ತಿರುವ ವೇದಿಕೆಗಳನ್ನು ಮಾಹಿತಿ ಮತ್ತು ಪ್ರಸರಣ ಸಚಿವಾಲಯವು ತನ್ನ ನಿಯಂತ್ರದಡಿಯಲ್ಲಿ ತೆಗೆದುಕೊಂಡಿದೆ.

ಆನ್ಲೈನ್ ಸುದ್ದಿ ಮಾಧ್ಯಮಗಳು ಸೇರಿದಂತೆ ಒಟಿಟಿ ಪ್ಲಾಟ್‌ಫಾರ್ಮ್‌ಗಳಾದ ಅಮೇಜಾನ್ ಪ್ರೈಮ್, ನೆಟ್‌ಫ್ಲಿಕ್ಸ್‌ ಹಾಟ್‌ಸ್ಟಾರ್‌ ಮತ್ತು ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ಟ್ವಿಟ್ಟರ್‌, ಇನ್‌ಸ್ಟಾಗ್ರಾಮ್ ಸೇರಿದಂತೆ ಅನ್ಲೈನ್‌ನಲ್ಲಿ ಪ್ರಸಾರವಾಗುವ ಸಿನೆಮಾ, ಆಡಿಯೋ-ವೀಡಿಯೋಗಳೆಲ್ಲವೂ ಇನ್ನುಮುಂದೆ ಸರ್ಕಾರದ ನಿಯಂತ್ರಣದಲ್ಲಿ ಬರುತ್ತವೆ ಎಂದು ಆದೇಶವು ತಿಳಿಸಿದೆ.

ಇದನ್ನೂ ಓದಿ: UPSC ಪಾಸಾದ ಜಾಮಿಯಾದ ಮುಸ್ಲಿಂ ವಿದ್ಯಾರ್ಥಿಗಳ ಅವಹೇಳನ: ಸುದರ್ಶನ್ ಚಾನೆಲ್ ನಿರೂಪಕನ ಮೇಲೆ ದೂರು ದಾಖಲು

ದೇಶದ ಸುಮಾರು 15 ವೀಡಿಯೋ ಸ್ಟ್ರೀಮಿಂಗ್ ಪ್ಲಾಟ್‍ಫಾರ್ಮ್‍ಗಳು ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಎಂಬ ಸಂಘಟನೆಯಡಿ ಒಂದಾಗಿ, ತಮ್ಮದೇ ನಿಯಂತ್ರಣದ ನಿಯಮಗಳನ್ನು ರಚಿಸಿಕೊಳ್ಳುವ ನಿಟ್ಟಿನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಸಹಿ ಮಾಡಿದ್ದವು. ಆದರೆ ಇದಕ್ಕೆ ಸಚಿವಾಲಯ ಒಪ್ಪಿಗೆ ಸೂಚಿಸಿರಲಿಲ್ಲ.

ಒಟಿಟಿ ಪ್ಲಾಟ್‍ಫಾರ್ಮ್‍ಗಳನ್ನು ಸ್ವಾಯತ್ತ ಸಂಸ್ಥೆಯ ನಿಯಂತ್ರಣಕ್ಕೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ಕಳೆದ ತಿಂಗಳು ವಿಚಾರಣೆಗೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್ ಇದರ ಕುರಿತು, ಇಂಟರ್ನೆಟ್ ಆ್ಯಂಡ್ ಮೊಬೈಲ್ ಅಸೋಸಿಯೇಶನ್ ಆಫ್ ಇಂಡಿಯಾ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವಾಲಯಕ್ಕೆ ನೋಟಿಸ್ ಜಾರಿಗೊಳಿಸಿ ತನ್ನ ಹೇಳಿಕೆ ನೀಡುವಂತೆ ಕೋರಿತ್ತು.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ವಿದ್ಯುನ್ಮಾನ ಮಾಧ್ಯಮಗಳಿಗೆ ಮಾನದಂಡಗಳನ್ನು ನಿಗದಿಪಡಿಸುವ ಮೊದಲು, ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಬೇಕು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. ಏಕೆಂದರೆ ಡಿಜಿಟಲ್ ಮಾಧ್ಯಮವು ಹೆಚ್ಚು ಪರಿಣಾಮ ಬಿರುತ್ತಿದೆ ಎಂದು ಕೇಂದ್ರ ಸರ್ಕಾರ ಅಫಿಡವಿಟ್‌ ಸಲ್ಲಿಸಿತ್ತು.

“ವಾಟ್ಸಾಪ್ ಮತ್ತು ಫೇಸ್‌ಬುಕ್‌ನಂತಹ ಅಪ್ಲಿಕೇಶನ್‌ಗಳಿಂದ ವೈರಲ್‌ ಆಗುವುದರಿಂದ, ಡಿಜಿಟಲ್ ಮಾಧ್ಯಮವು ಜನರನ್ನು ವೇಗವಾಗಿ ತಲುಪುವ  ಸಾಧ್ಯತೆಯಿದೆ. ಹಾಗಾಗಿ ಡಿಜಿಟಲ್ ಮಾಧ್ಯಮದ ವ್ಯಾಪ್ತಿ, ಗಂಭೀರ ಪರಿಣಾಮ ಬೀರುವ ದೃಷ್ಟಿಯಿಂದ, ವಿದ್ಯುನ್ಮಾನ ಮಾಧ್ಯಮಗಳಿಗಿಂತ ಮೊದಲು ಡಿಜಿಟಲ್ ಮಾಧ್ಯಮದ ಕಡೆ ಗಮನಹರಿಸಿ” ಎಂದು ಕೇಂದ್ರ ಹೇಳಿತ್ತು.

ಇದನ್ನೂ ಓದಿ: ಡಿಜಿಟಲ್ ಮಾಧ್ಯಮಗಳ ಕಡೆ ಗಮನಹರಿಸಿ: ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ಕೇಂದ್ರ ಸರ್ಕಾರ

ಮೂರು ನ್ಯಾಯಾಧೀಶರ ಪೀಠವು ಐದು ಗಣ್ಯ ನಾಗರಿಕರ ಸಮಿತಿಯು ಎಲೆಕ್ಟ್ರಾನಿಕ್ ಮಾಧ್ಯಮಕ್ಕೆ ಮಾನದಂಡಗಳನ್ನು ತರಲು ಕರೆ ನೀಡಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಈಗಾಗಲೇ ನಿಯಮಗಳು ಜಾರಿಯಲ್ಲಿವೆ ಎಂದು ಹೇಳಿತು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, “ನಿಜವಾಗಿಯೂ ಇದೆಯೆ? ಎಲ್ಲವೂ ಉತ್ಕೃಷ್ಟವಾಗಿ ನಡೆಯುತ್ತಿದ್ದರೆ ನಾವು ಇಂದು ಪ್ರತಿದಿನ ಟಿವಿಯಲ್ಲಿ ನೋಡುತ್ತಿರುವುದನ್ನು ನೋಡಬೇಕಾಗಿರಲಿಲ್ಲ” ಎಂದು ಚಾಟಿ ಬೀಸಿದ್ದರು.

ಯಾವುದೇ ಚಾನೆಲ್ ನಿಯಮವನ್ನು ಉಲ್ಲಂಘಿಸಿ, ವಿಚಾರಣೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಅದಕ್ಕೆ ₹ 1 ಲಕ್ಷ ದಂಡ ವಿಧಿಸಬೇಕು ಎಂದು ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್ ​​ತನ್ನ ಅಫಿಡವಿಟ್‌ನಲ್ಲಿ ತಿಳಿಸಿದೆ.


ಇದನ್ನೂ ಓದಿ: ಭಾರತದ ಇಂಟರ್ನೆಟ್ ಸ್ಪೀಡ್ ವಿಶ್ವದಲ್ಲಿಯೇ ಅತ್ಯಂತ ಕಳಪೆ; ಡಿಜಿಟಲ್ ಇಂಡಿಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...