Homeಮುಖಪುಟ`ಡಿಜಿಟಲ್ ಕಂಟೆಂಟ್' ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

`ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

- Advertisement -
- Advertisement -

ಡಿಜಿಟಲ್ ವಿಷಯ ಮತ್ತು ಸ್ಟ್ರೀಮಿಂಗ್ (ನಿರಂತರ ದತ್ತಾಂಶ ಪ್ರಸರಣ) ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸುವ ಸರ್ಕಾರದ ಹೊಸ ನಿಯಮಗಳು ಹಲವಾರು ಸಚಿವಾಲಯಗಳನ್ನು ಒಳಗೊಂಡ ಕಟ್ಟುನಿಟ್ಟಾದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಒಳಗೊಂಡಿವೆ. ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ವಿಷಯವನ್ನು ನಿಷೇಧಿಸುವ ನೀತಿ ಸಂಹಿತೆಯನ್ನು ಈ ನಿಯಮಗಳು ಒಳಗೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕರಡು ನಿಯಮಗಳನ್ನು ನೋಡಿದರೆ ಇವು ಭಯಾನಕವಾಗಿವೆ ಎಂದು ಕೆಲವು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ (ಮಧ್ಯ ಭಾಗಿದಾರರು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ಮಾರ್ಗದರ್ಶಿ) ನಿಯಮಗಳು, 2021- ಮೊದಲ ಬಾರಿಗೆ ಡಿಜಿಟಲ್ ಸುದ್ದಿ ಸಂಸ್ಥೆಗಳು, ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಒಟಿಟಿ ಸ್ಟ್ರೀಮಿಂಗ್ ಸೇವೆಗಳನ್ನು ಸರ್ಕಾರ ಹೇಗೆ ನಿಯಂತ್ರಿಸುತ್ತದೆ ಎಂದು ವಿವರಿಸುತ್ತದೆ.

ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತು ಮಾಹಿತಿ ಹಾಗೂ ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಬಿಡುಗಡೆ ಮಾಡಲಿರುವ ಕರಡು ನಿಯಮಗಳ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕರಡು ಪ್ರಕಾರ, ಮೇಲ್ವಿಚಾರಣಾ ಕಾರ್ಯವಿಧಾನವು ರಕ್ಷಣಾ, ವಿದೇಶಾಂಗ ವ್ಯವಹಾರಗಳು, ಗೃಹ, ಮಾಹಿತಿ ಮತ್ತು ಪ್ರಸಾರ, ಕಾನೂನು, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳ ಪ್ರತಿನಿಧಿಗಳ ಸಮಿತಿಯನ್ನು ಒಳಗೊಂಡಿರುತ್ತದೆ.

ಈ ಸಮಿತಿಯು ಬಯಸಿದಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯ ದೂರುಗಳ ಮೇಲೆ ವಿಚಾರಣೆ ಮಾಡಲು ಸು-ಮೋಟು ಅಧಿಕಾರಗಳನ್ನು ಹೊಂದಿರುತ್ತದೆ. ಸಮಿತಿಯು ನೀತಿಸಂಹಿತೆ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬಹುದು, ಖಂಡಿಸಬಹುದು ಇತ್ಯಾದಿ ಕ್ರಮಗಳಲ್ಲದೆ ಕ್ಷಮೆಯಾಚಿಸಲು ಸೂಚಿಸಬಹುದು.

ಜಂಟಿ ಕಾರ್ಯದರ್ಶಿ ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯ ಅಧಿಕಾರಿಯನ್ನು ಸರ್ಕಾರವು “ಅಧಿಕೃತ ಅಧಿಕಾರಿ” ಎಂದು ನೇಮಿಸುತ್ತದೆ, ಅವರು ವಿಷಯವನ್ನು ( ಕಂಟೆಂಟ್ ಅನ್ನು) ನೇರವಾಗಿ ನಿಬಂಧಿಸಬಹುದು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಕರಡು ನಿಯಮಗಳು ಪ್ರಮುಖ ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿ ಸಂದೇಶಗಳ ಉಗಮಸ್ಥಾನವನ್ನು ಪತ್ತೆಹಚ್ಚುವಿಕೆಯನ್ನು ಕಡ್ಡಾಯಗೊಳಿಸುತ್ತವೆ. ಇದು ವಾಟ್ಸಾಪ್ ಮತ್ತು ಸಿಗ್ನಲ್‌ನಂತಹ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳ ಎಂಡ್ ಟು ಎಂಡ್ ಎನ್‌ಕ್ರಿಪ್ಸನ್ ಪರೀಶೀಲನೆಯನ್ನೂ ಒಳಗೊಂಡಿದೆ.

ಸ್ಟ್ರೀಮಿಂಗ್ ದೂರುಗಳನ್ನು ಆಲಿಸಲು ಸ್ವತಂತ್ರ ಮೇಲ್ಮನವಿ ಸಂಸ್ಥೆಯನ್ನು ಸ್ಥಾಪಿಸಲು ಕರಡು ಅನುವು ಮಾಡುತ್ತದೆ. ಆಕ್ಷೇಪಿಸಲ್ಪಟ್ಟ ನೆಟ್‌ಫ್ಲಿಕ್ಸ್ ಮತ್ತು ಪ್ರೈಮ್ ವಿಡಿಯೋದಂತಹ ಸ್ಟ್ರೀಮಿಂಗ್ ಸೇವೆಗಳ ವಿಚಾರಣೆಯನ್ನು ನಿವೃತ್ತ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಮೇಲ್ಮನವಿ ಸಂಸ್ಥೆಯ ಅಧಿಕಾರಕ್ಕೆ ಸಲ್ಲಿಸುವಂತೆ ಕರಡು ನಿರ್ದೇಶಿಸುತ್ತದೆ.

ವಿಷಯವು ಕಾನೂನನ್ನು ಉಲ್ಲಂಘಿಸುತ್ತದೆ ಎಂದು ಈ ಸಮಿತಿ ನಂಬಿದರೆ, ವಿಷಯ ಕಂಟೆಂಟ್ ಅನ್ನು ನಿಬಂಧಿಸಲು ಸರ್ಕಾರಿ ನಿಯಂತ್ರಿತ ಸಮಿತಿಗೆ ಕಳುಹಿಸಲು ಅಧಿಕಾರ ನೀಡಲಾಗುತ್ತದೆ.

ಡ್ರಾಫ್ಟ್‌ನ ಪ್ರಮುಖ ಅಂಶಗಳು ಇಲ್ಲಿವೆ

  • ಅವಮಾನಕರ, ಅಶ್ಲೀಲ, ಮಾನಹಾನಿಕರ, ವರ್ಣಭೇದ ನೀತಿಯ, ಅಪ್ರಾಪ್ತ ವಯಸ್ಕರಿಗೆ ಹಾನಿಕಾರಕವಾದ ವಿಷಯ ಮತ್ತು ಭಾರತದ ಏಕತೆ, ಸಮಗ್ರತೆ, ರಕ್ಷಣೆ, ಭದ್ರತೆ ಅಥವಾ ಸಾರ್ವಭೌಮತ್ವ ಮತ್ತು ಇತರ ದೇಶಗಳೊಂದಿಗಿನ ಸಂಬಂಧಕ್ಕೆ ಧಕ್ಕೆ ತರುವ ಕಂಟೆಂಟ್ ನಿಷೇಧಿಸುವುದು.
  • ಅಂತಹ ಯಾವುದೇ ವಿಷಯವು ಪ್ರಸಾರವಾದರೆ, ಸೂಚನೆ ನೀಡಿದ 36 ಗಂಟೆಗಳ ಒಳಗೆ ಅಥವಾ ನ್ಯಾಯಾಲಯದ ಆದೇಶದೊಳಗೆ ಅದನ್ನು ಸಾಧ್ಯವಾದಷ್ಟು ಬೇಗ ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.
  • ಸೋಶಿಯಲ್ ಮೀಡಿಯಾ ಮೆಸೇಜಿಂಗ್ ಸೈಟ್‌ಗಳು ಮಾಹಿತಿಯನ್ನು ಮೊದಲು ಹುಟ್ಟು ಹಾಕಿದವರ ಟ್ರ್ಯಾಕಿಂಗ್ ಅನ್ನು ಸಕ್ರಿಯಗೊಳಿಸಬೇಕು.
  • ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸರ್ಕಾರಿ ಸಂಸ್ಥೆಗೆ ಮಧ್ಯವರ್ತಿ/ ಮಧ್ಯ ಭಾಗಿದಾರ ಸೈಬರ್ ಭದ್ರತಾ ಲೋಪದ ವಿವರಗಳನ್ನು 72 ಗಂಟೆಗಳ ಒಳಗೆ ಒದಗಿಸಬೇಕು.
  • ದೂರುಗಳನ್ನು ಸ್ವೀಕರಿಸಲು, ಅಂಗೀಕರಿಸಲು ಮತ್ತು ಒಂದು ತಿಂಗಳೊಳಗೆ ಪರಿಹರಿಸಲು ಕಂಪನಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ.
  • ಮಧ್ಯ ಭಾಗಿದಾರನು ದೂರಿನ 24 ಗಂಟೆಗಳ ಒಳಗೆ, ಕಾನೂನುಬಾಹಿರ ಅಥವಾ ಆಕ್ರಮಣಕಾರಿ ವಿಷಯವನ್ನು ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.
  • ನೀತಿ ಸಂಹಿತೆಯನ್ನು ಜಾರಿಗೊಳಿಸಲು ಮೂರು ಹಂತದ ಕಾರ್ಯವಿಧಾನ: ಸ್ವಯಂ ನಿಯಂತ್ರಣ; ಸ್ವಯಂ-ನಿಯಂತ್ರಿಸುವ ಸಂಸ್ಥೆಗಳಿಂದ ಸ್ವಯಂ ನಿಯಂತ್ರಣ; ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನ.

ಇದನ್ನೂ ಓದಿ: ಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...