Homeಮುಖಪುಟ`ಡಿಜಿಟಲ್ ಕಂಟೆಂಟ್' ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

`ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

- Advertisement -
- Advertisement -

ಡಿಜಿಟಲ್ ವಿಷಯ ಮತ್ತು ಸ್ಟ್ರೀಮಿಂಗ್ (ನಿರಂತರ ದತ್ತಾಂಶ ಪ್ರಸರಣ) ಪ್ಲಾಟ್‌ಫಾರ್ಮ್‌ಗಳನ್ನು ನಿಯಂತ್ರಿಸುವ ಸರ್ಕಾರದ ಹೊಸ ನಿಯಮಗಳು ಹಲವಾರು ಸಚಿವಾಲಯಗಳನ್ನು ಒಳಗೊಂಡ ಕಟ್ಟುನಿಟ್ಟಾದ ಮೇಲ್ವಿಚಾರಣಾ ಕಾರ್ಯವಿಧಾನವನ್ನು ಒಳಗೊಂಡಿವೆ. ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುವಂತಹ ವಿಷಯವನ್ನು ನಿಷೇಧಿಸುವ ನೀತಿ ಸಂಹಿತೆಯನ್ನು ಈ ನಿಯಮಗಳು ಒಳಗೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಕರಡು ನಿಯಮಗಳನ್ನು ನೋಡಿದರೆ ಇವು ಭಯಾನಕವಾಗಿವೆ ಎಂದು ಕೆಲವು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ (ಮಧ್ಯ ಭಾಗಿದಾರರು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ಮಾರ್ಗದರ್ಶಿ) ನಿಯಮಗಳು, 2021- ಮೊದಲ ಬಾರಿಗೆ ಡಿಜಿಟಲ್ ಸುದ್ದಿ ಸಂಸ್ಥೆಗಳು, ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ಒಟಿಟಿ ಸ್ಟ್ರೀಮಿಂಗ್ ಸೇವೆಗಳನ್ನು ಸರ್ಕಾರ ಹೇಗೆ ನಿಯಂತ್ರಿಸುತ್ತದೆ ಎಂದು ವಿವರಿಸುತ್ತದೆ.

ಇದನ್ನೂ ಓದಿ: ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು – ಸಿದ್ದರಾಮಯ್ಯ

ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಮತ್ತು ಮಾಹಿತಿ ಹಾಗೂ ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಬಿಡುಗಡೆ ಮಾಡಲಿರುವ ಕರಡು ನಿಯಮಗಳ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕರಡು ಪ್ರಕಾರ, ಮೇಲ್ವಿಚಾರಣಾ ಕಾರ್ಯವಿಧಾನವು ರಕ್ಷಣಾ, ವಿದೇಶಾಂಗ ವ್ಯವಹಾರಗಳು, ಗೃಹ, ಮಾಹಿತಿ ಮತ್ತು ಪ್ರಸಾರ, ಕಾನೂನು, ಐಟಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯಗಳ ಪ್ರತಿನಿಧಿಗಳ ಸಮಿತಿಯನ್ನು ಒಳಗೊಂಡಿರುತ್ತದೆ.

ಈ ಸಮಿತಿಯು ಬಯಸಿದಲ್ಲಿ ನೀತಿ ಸಂಹಿತೆಯ ಉಲ್ಲಂಘನೆಯ ದೂರುಗಳ ಮೇಲೆ ವಿಚಾರಣೆ ಮಾಡಲು ಸು-ಮೋಟು ಅಧಿಕಾರಗಳನ್ನು ಹೊಂದಿರುತ್ತದೆ. ಸಮಿತಿಯು ನೀತಿಸಂಹಿತೆ ಉಲ್ಲಂಘಿಸುವವರಿಗೆ ಎಚ್ಚರಿಕೆ ನೀಡಬಹುದು, ಖಂಡಿಸಬಹುದು ಇತ್ಯಾದಿ ಕ್ರಮಗಳಲ್ಲದೆ ಕ್ಷಮೆಯಾಚಿಸಲು ಸೂಚಿಸಬಹುದು.

ಜಂಟಿ ಕಾರ್ಯದರ್ಶಿ ಅಥವಾ ಅದಕ್ಕಿಂತ ಹೆಚ್ಚಿನ ಶ್ರೇಣಿಯ ಅಧಿಕಾರಿಯನ್ನು ಸರ್ಕಾರವು “ಅಧಿಕೃತ ಅಧಿಕಾರಿ” ಎಂದು ನೇಮಿಸುತ್ತದೆ, ಅವರು ವಿಷಯವನ್ನು ( ಕಂಟೆಂಟ್ ಅನ್ನು) ನೇರವಾಗಿ ನಿಬಂಧಿಸಬಹುದು.

ಇದನ್ನೂ ಓದಿ: ದಿಶಾ ರವಿಯ ಜಾಮೀನು ಆದೇಶ: ದೇಶದ್ರೋಹದ ಬಗ್ಗೆ ನ್ಯಾಯಾಧೀಶರು ಹೇಳಿದ್ದೇನು?

ಕರಡು ನಿಯಮಗಳು ಪ್ರಮುಖ ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿ ಸಂದೇಶಗಳ ಉಗಮಸ್ಥಾನವನ್ನು ಪತ್ತೆಹಚ್ಚುವಿಕೆಯನ್ನು ಕಡ್ಡಾಯಗೊಳಿಸುತ್ತವೆ. ಇದು ವಾಟ್ಸಾಪ್ ಮತ್ತು ಸಿಗ್ನಲ್‌ನಂತಹ ಮೆಸೇಜಿಂಗ್ ಪ್ಲಾಟ್‌ಫಾರ್ಮ್‌ಗಳ ಎಂಡ್ ಟು ಎಂಡ್ ಎನ್‌ಕ್ರಿಪ್ಸನ್ ಪರೀಶೀಲನೆಯನ್ನೂ ಒಳಗೊಂಡಿದೆ.

ಸ್ಟ್ರೀಮಿಂಗ್ ದೂರುಗಳನ್ನು ಆಲಿಸಲು ಸ್ವತಂತ್ರ ಮೇಲ್ಮನವಿ ಸಂಸ್ಥೆಯನ್ನು ಸ್ಥಾಪಿಸಲು ಕರಡು ಅನುವು ಮಾಡುತ್ತದೆ. ಆಕ್ಷೇಪಿಸಲ್ಪಟ್ಟ ನೆಟ್‌ಫ್ಲಿಕ್ಸ್ ಮತ್ತು ಪ್ರೈಮ್ ವಿಡಿಯೋದಂತಹ ಸ್ಟ್ರೀಮಿಂಗ್ ಸೇವೆಗಳ ವಿಚಾರಣೆಯನ್ನು ನಿವೃತ್ತ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಮೇಲ್ಮನವಿ ಸಂಸ್ಥೆಯ ಅಧಿಕಾರಕ್ಕೆ ಸಲ್ಲಿಸುವಂತೆ ಕರಡು ನಿರ್ದೇಶಿಸುತ್ತದೆ.

ವಿಷಯವು ಕಾನೂನನ್ನು ಉಲ್ಲಂಘಿಸುತ್ತದೆ ಎಂದು ಈ ಸಮಿತಿ ನಂಬಿದರೆ, ವಿಷಯ ಕಂಟೆಂಟ್ ಅನ್ನು ನಿಬಂಧಿಸಲು ಸರ್ಕಾರಿ ನಿಯಂತ್ರಿತ ಸಮಿತಿಗೆ ಕಳುಹಿಸಲು ಅಧಿಕಾರ ನೀಡಲಾಗುತ್ತದೆ.

ಡ್ರಾಫ್ಟ್‌ನ ಪ್ರಮುಖ ಅಂಶಗಳು ಇಲ್ಲಿವೆ

  • ಅವಮಾನಕರ, ಅಶ್ಲೀಲ, ಮಾನಹಾನಿಕರ, ವರ್ಣಭೇದ ನೀತಿಯ, ಅಪ್ರಾಪ್ತ ವಯಸ್ಕರಿಗೆ ಹಾನಿಕಾರಕವಾದ ವಿಷಯ ಮತ್ತು ಭಾರತದ ಏಕತೆ, ಸಮಗ್ರತೆ, ರಕ್ಷಣೆ, ಭದ್ರತೆ ಅಥವಾ ಸಾರ್ವಭೌಮತ್ವ ಮತ್ತು ಇತರ ದೇಶಗಳೊಂದಿಗಿನ ಸಂಬಂಧಕ್ಕೆ ಧಕ್ಕೆ ತರುವ ಕಂಟೆಂಟ್ ನಿಷೇಧಿಸುವುದು.
  • ಅಂತಹ ಯಾವುದೇ ವಿಷಯವು ಪ್ರಸಾರವಾದರೆ, ಸೂಚನೆ ನೀಡಿದ 36 ಗಂಟೆಗಳ ಒಳಗೆ ಅಥವಾ ನ್ಯಾಯಾಲಯದ ಆದೇಶದೊಳಗೆ ಅದನ್ನು ಸಾಧ್ಯವಾದಷ್ಟು ಬೇಗ ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.
  • ಸೋಶಿಯಲ್ ಮೀಡಿಯಾ ಮೆಸೇಜಿಂಗ್ ಸೈಟ್‌ಗಳು ಮಾಹಿತಿಯನ್ನು ಮೊದಲು ಹುಟ್ಟು ಹಾಕಿದವರ ಟ್ರ್ಯಾಕಿಂಗ್ ಅನ್ನು ಸಕ್ರಿಯಗೊಳಿಸಬೇಕು.
  • ಕಾನೂನು ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು ಅಧಿಕಾರ ಹೊಂದಿರುವ ಸರ್ಕಾರಿ ಸಂಸ್ಥೆಗೆ ಮಧ್ಯವರ್ತಿ/ ಮಧ್ಯ ಭಾಗಿದಾರ ಸೈಬರ್ ಭದ್ರತಾ ಲೋಪದ ವಿವರಗಳನ್ನು 72 ಗಂಟೆಗಳ ಒಳಗೆ ಒದಗಿಸಬೇಕು.
  • ದೂರುಗಳನ್ನು ಸ್ವೀಕರಿಸಲು, ಅಂಗೀಕರಿಸಲು ಮತ್ತು ಒಂದು ತಿಂಗಳೊಳಗೆ ಪರಿಹರಿಸಲು ಕಂಪನಿಗಳು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕಾಗುತ್ತದೆ.
  • ಮಧ್ಯ ಭಾಗಿದಾರನು ದೂರಿನ 24 ಗಂಟೆಗಳ ಒಳಗೆ, ಕಾನೂನುಬಾಹಿರ ಅಥವಾ ಆಕ್ರಮಣಕಾರಿ ವಿಷಯವನ್ನು ತೆಗೆದುಹಾಕಬೇಕು ಅಥವಾ ನಿಷ್ಕ್ರಿಯಗೊಳಿಸಬೇಕು.
  • ನೀತಿ ಸಂಹಿತೆಯನ್ನು ಜಾರಿಗೊಳಿಸಲು ಮೂರು ಹಂತದ ಕಾರ್ಯವಿಧಾನ: ಸ್ವಯಂ ನಿಯಂತ್ರಣ; ಸ್ವಯಂ-ನಿಯಂತ್ರಿಸುವ ಸಂಸ್ಥೆಗಳಿಂದ ಸ್ವಯಂ ನಿಯಂತ್ರಣ; ಸರ್ಕಾರದ ಮೇಲ್ವಿಚಾರಣಾ ಕಾರ್ಯವಿಧಾನ.

ಇದನ್ನೂ ಓದಿ: ಸರ್ದಾರ್‌ ಪಟೇಲ್ ಕ್ರೀಡಾಂಗಣಕ್ಕೆ ನರೇಂದ್ರ ಮೋದಿ ಹೆಸರಿಟ್ಟ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...