Homeಮುಖಪುಟಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು CBIಗೆ ವರ್ಗಾಯಿಸಿದ ಕೇಂದ್ರ

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು CBIಗೆ ವರ್ಗಾಯಿಸಿದ ಕೇಂದ್ರ

- Advertisement -
- Advertisement -

ಮೇ 4ರಂದು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕುಕಿ ಬುಡಕಟ್ಟು ಸಮುದಾಯದ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ಸಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳ(CBI)ಕ್ಕೆ ವರ್ಗಾಯಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಈ ಪ್ರಕರಣವು ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಗೃಹ ವ್ಯವಹಾರಗಳ ಸಚಿವಾಲಯವು ಪ್ರಕರಣದ ವಿಚಾರಣೆಯನ್ನು ಮಣಿಪುರದ ಹೊರಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದೆ. ಸಿಬಿಐ ಚಾರ್ಜ್‌ಶೀಟ್ ಸಲ್ಲಿಸಿದ ಆರು ತಿಂಗಳೊಳಗೆ ವಿಚಾರಣೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡುವಂತೆಯೂ ನ್ಯಾಯಾಲಯಕ್ಕೆ ಸಚಿವಾಲಯ ಒತ್ತಾಯಿಸಿ ಅಫಿಡವಿಟ್‌ ಸಲ್ಲಿಸಿದೆ. ಸುಪ್ರೀಂ ಕೋರ್ಟ್ ಶುಕ್ರವಾರ ಈ ಮಣಿಪುರ ಪ್ರಕರಣದ ವಿಚಾರಣೆಯನ್ನು ನಡೆಸಲಿದೆ.

ಜುಲೈ 19ರಂದು, ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇಬ್ಬರು ಕುಕಿ ಮಹಿಳೆಯರನ್ನು ಗುಂಪೊಂದು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಮೇ 4ರಂದು ಕಾಂಗ್‌ಪೊಕ್ಪಿಯ ಬಿ ಫೈನೋಮ್ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಆ ವೀಡಿಯೊದಲ್ಲಿ ಕಂಡುಬರುವ ಇಬ್ಬರು ಸೇರಿದಂತೆ ಮೂವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಪೊಲೀಸ್ ದೂರಿನ ಪ್ರಕಾರ ಮಹಿಳೆಯರಲ್ಲಿ ಒಬ್ಬರನ್ನು “ಕ್ರೂರವಾಗಿ ಸಾಮೂಹಿಕ ಅತ್ಯಾಚಾರ” ಮಾಡಲಾಗಿದೆ ಎಂದು ಹೇಳಲಾಗಿದೆ.

ಮೇ 18ರಂದು ಈ ಪ್ರಕರಣದ ಎಫ್‌ಐಆರ್ ದಾಖಲಾಗಿತ್ತು. ಆದರೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವಾಯರಲ್ ಆಗುವವರೆಗೂ ಯಾರೊಬ್ಬರ ಬಂಧನವೂ ಆಗಿರಲಿಲ್ಲ. ವೀಡಿಯೊ ವೈರಲ್‌ ಆದಬಳಿಕ ಜನಾಕ್ರೋಶಕ್ಗಕೆ ಕಾರಣವಾಯಿತು. ಆ ಎಚ್ಚತ್ತ ಸರ್ಕಾರ ಮತ್ತು ಪೊಲೀಸ್ ಇಲಾಖೆಯು, ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಜನರನ್ನು ಬಂಧಿಸಲಾಗಿದೆ.

ಜುಲೈ 20ರಂದು, ಈ ಘಟನೆಯ ಕುರಿತು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಮಾತನಾಡಿತು. ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿತ್ತು ಮತ್ತು ಈ ವಿಷಯದಲ್ಲಿ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ನಾವೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿತ್ತು. ಜುಲೈ 28ರೊಳಗೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಅವರು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪಟ್ಟಿ ಮಾಡಲು ಕೇಂದ್ರ ಮತ್ತು ಮಣಿಪುರ ಸರ್ಕಾರಕ್ಕೆ ಸುಪ್ರೀಂ ಸೂಚಿಸಿತ್ತು.

ಕೇಂದ್ರವು ಗುರುವಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ ”ಆರೋಪಿಗಳನ್ನು ಬಂಧಿಸಲು ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಮತ್ತು ಪ್ರಕರಣದ ತನಿಖೆಯನ್ನು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿಗೆ ವಹಿಸಲಾಗಿದೆ” ಎಂದು ತಿಳಿಸಿದೆ.

”ಕೇಂದ್ರ ಸರ್ಕಾರವು ಈಗಿನ ಅಪರಾಧಗಳನ್ನು ತುಂಬಾ ಘೋರವೆಂದು ಪರಿಗಣಿಸುತ್ತದೆ, ಅದು ಗಂಭೀರವಾಗಿ ಪರಿಗಣಿಸಲು ಅರ್ಹವಾಗಿದೆ” ಎಂದು ತಿಳಿಸಿದೆ.

ಪರಿಹಾರ ಶಿಬಿರಗಳಲ್ಲಿ ಮಾನಸಿಕ ಆರೋಗ್ಯ ನೆರವು ನೀಡಲು ತಂಡಗಳನ್ನು ರಚಿಸಲಾಗಿದೆ ಎಂದು ಅದು ಹೇಳಿದೆ. ಅಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಲು, ಅಧಿಕಾರ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ಅಂತಹ ಎಲ್ಲಾ ಪ್ರಕರಣಗಳ ಬಗ್ಗೆ ಪೊಲೀಸ್ ಮಹಾನಿರ್ದೇಶಕರಿಗೆ ವರದಿ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಮೇ 4 ರ ಘಟನೆಯನ್ನು ರೆಕಾರ್ಡ್ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ವೀಡಿಯೊವನ್ನು ರೆಕಾರ್ಡ್ ಮಾಡಲು ಬಳಸಿದ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಣಿಪುರದ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಮೇ 3 ರಿಂದ ಜನಾಂಗೀಯ ಘರ್ಷಣೆಗಳು ನಡೆಯುತ್ತಲಿವೆ. ವ್ಯಾಪಕವಾದ ಹಿಂಸಾಚಾರ ಮತ್ತು ಬೆಂಕಿ ಹಚ್ಚುವ ಘಟನೆಗಳು ರಾಜ್ಯದಲ್ಲಿ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸುತ್ತಿವೆ. ಈ ಹಿಂಸಾಚಾರದಲ್ಲಿ ಈ ವರೆಗೂ 140ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ.

ಇದನ್ನೂ ಓದಿ: ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿರುವ INDIA ಒಕ್ಕೂಟದ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...