Homeಮುಖಪುಟದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

ದೆಹಲಿ ಮೇಲೆ ಕೇಂದ್ರದ ನಿಯಂತ್ರಣ ಸರಿಯೇ?: ಸುಪ್ರೀಂ ಪ್ರಶ್ನೆ

- Advertisement -
- Advertisement -

ಕೇಂದ್ರ ಸರ್ಕಾರವು ದೆಹಲಿಯ ಪೌರಕಾರ್ಮಿಕರ ಹುದ್ದೆಗಳ ಮೇಲೆ ನಿಯಂತ್ರಣ ಸಾಧಿಸುತ್ತಿದ್ದು ಇದರಿಂದ ದೆಹಲಿಯ ಚುನಾಯಿತ ಸರ್ಕಾರ ಕಾರ್ಯ ನಿರ್ವಹಿಸಲು ತೊಂದರೆಯಾಗುವುದಿಲ್ಲವೇ ಎಂದು ಸುಪ್ರೀಂ ಕೋರ್ಟ್ ಗುರುವಾರ ಪ್ರಶ್ನಿಸಿದೆ. ಈ ಬಗ್ಗೆ ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸರ್ಕಾರದ ಕಾರ್ಯಕಾರಿ ಅಧಿಕಾರದ ವ್ಯಾಪ್ತಿ ಮತ್ತು ಆಡಳಿತಾತ್ಮಕ ಸೇವೆಗಳ ಮೇಲಿನ ನಿಯಂತ್ರಣದ ಕುರಿತು ಕೇಂದ್ರ ಮತ್ತು ದೆಹಲಿ ಸರ್ಕಾರಗಳ ನಡುವಿನ ವಿವಾದದ ಬಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು ವಿಚಾರಣೆ ನಡೆಸುತ್ತಿದೆ.

ದೆಹಲಿಯು ಕೇಂದ್ರಾಡಳಿತ ಪ್ರದೇಶವಾಗಿದೆ ಮತ್ತು ಅದು ಒಕ್ಕೂಟದ ವಿಸ್ತರಣೆಯಾಗಿದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯಕ್ಕೆ ತಿಳಿಸಿದರು. “ಕೇಂದ್ರಾಡಳಿತ ಪ್ರದೇಶವನ್ನು ರಚಿಸುವ ಉದ್ದೇಶವೇ ಆ ಪ್ರದೇಶವನ್ನು ಕೇಂದ್ರ ನಿರ್ವಹಿಸುವುದಕ್ಕಾಗಿ” ಎಂದು ಅವರು ವಾದಿಸಿದರು. ಇದಕ್ಕೆ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು, “ಎಲ್ಲವೂ ಕೇಂದ್ರ ಸರ್ಕಾರ ಬಯಸುವಂತೆ ನಡೆಯಬೇಕು ಎಂದಾದರೆ ಈ ಚುನಾಯಿತ ಸರ್ಕಾರ ಇರುವುದು ಯಾಕೆ?” ಎಂದು ಪ್ರಶ್ನಿಸಿದರು.

ಅದಕ್ಕೆ ಉತ್ತರಿಸಿದ ಮೆಹ್ತಾ, ಚುನಾಯಿತ ಸರ್ಕಾರವು ಅಧಿಕಾರಿಗಳ ಮೇಲೆ ಕ್ರಿಯಾತ್ಮಕ ನಿಯಂತ್ರಣವನ್ನು ಹೊಂದಿರುತ್ತದೆ ಎಂದು ಹೇಳಿದರು. ಅಲ್ಲಿ ಅಧಿಕಾರಿಗಳು ತಮ್ಮ ಕಾರ್ಯಗಳನ್ನು ಸರಿಯಾಗಿ ನಿರ್ವಹಿಸದಿದ್ದರೆ ದೆಹಲಿ ಸರ್ಕಾರ ವರ್ಗಾಯಿಸಲು ಸಾಧ್ಯವಿಲ್ಲವೇ? ಎಂದು ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಕೇಳಿದರು.

“ಶಿಕ್ಷಣ, ಪರಿಸರ ಮುಂತಾದ ಕ್ಷೇತ್ರದಲ್ಲಿನ ಪೋಸ್ಟಿಂಗ್‌ ವಿಚಾರಗಳಲ್ಲಿ ದೆಹಲಿ ಸರ್ಕಾರದ ಯಾವುದೇ ಅಧಿಕಾರ ವ್ಯಾಪ್ತಿ ಇಲ್ಲ ಎಂದು ನೀವು ಹೇಳುತ್ತೀರಾ? ಹಾಗಿದ್ದರೆ ಅಲ್ಲಿ ಚುನಾಯಿತ ಸರ್ಕಾರ ಇದ್ದು ಏನು ಉಪಯೋಗ?” ಎಂದು ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಸಂವಿಧಾನದ ಅಡಿಯಲ್ಲಿ ಕೇಂದ್ರ ಮತ್ತು ರಾಜ್ಯ ಸೇವೆಗಳಿವೆ. ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾರ್ವಜನಿಕ ಸೇವಾ ಆಯೋಗಗಳಿಲ್ಲ. ದೆಹಲಿಯು ಕಾಸ್ಮೋಪಾಲಿಟನ್ ನಗರವಾಗಿದೆ. ಇದು ರಾಷ್ಟ್ರರಾಜಧಾನಿಯಾಗಿದೆ ಇಲ್ಲಿಯ ಆಡಳಿತಾತ್ಮಕ ಸೇವೆಗಳ ಮೇಲೆ ಕೇಂದ್ರದ ನಿಯಂತ್ರಣ ಇರಬೇಕು ಎಂದು ಸಾಲಿಸಿಟರ್ ಜನರಲ್ ಮೆಹ್ತಾ ವಾದಿಸಿದರು.

ದೆಹಲಿ ಸರ್ಕಾರ ಗುರುವಾರ, ಇಲ್ಲಿ ನಾವು ಹುದ್ದೆಗಳನ್ನು ಸೃಷ್ಟಿಸುವ, ಅಧಿಕಾರಿಗಳನ್ನು ನೇಮಿಸುವ ಮತ್ತು ಅಗತ್ಯಕ್ಕೆ ತಕ್ಕಂತೆ ಅವರನ್ನು ವರ್ಗಾವಣೆ ಮಾಡುವ ಅಧಿಕಾರವನ್ನು ನೀಡದಿದ್ದರೆ, ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಸಂವಿಧಾನ ಪೀಠದ ಮುಂದೆ ವಾದಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...