Homeಮುಖಪುಟಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

- Advertisement -
- Advertisement -

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ್ನು ಖಾಸಗೀಕರಣಗೊಳಿಸುವ ಕ್ರಮಕ್ಕೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಂಪನಿಗೆ ಮಾರಾಟ ಮಾಡುವುದನ್ನು ವಿರೋಧಿಸಿ, ನೌಕರರು ದೇಶವ್ಯಾಪಿ ಮುಷ್ಕರ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

2020 ರ ಮಾರ್ಚ್ ವೇಳೆಗೆ ಬಿಪಿಸಿಎಲ್ ಅನ್ನು ಖಾಸಗಿ ಸಂಸ್ಥೆಗೆ ಮಾರಾಟ ಮಾಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಕೋಪಗೊಂಡಿರುವ ನೌಕರರು ದೇಶಾದ್ಯಂತ ನವೆಂಬರ್‌ 28 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ವಿಡಿಯೋ ನೋಡಿ:

ನವೆಂಬರ್ 25 ರಂದು ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ಬಿಪಿಸಿಎಲ್ ಅನ್ನು ಪೆಟ್ಟಾದಿಂದ ಕೊಚ್ಚಿಯ ಅಂಬಾಲಮುಗಲ್‌ಗೆ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಮೆರವಣಿಗೆ ನಡೆಸಲಿದ್ದಾರೆ. ಸಿಪಿಐ (ಎಂ) ನವೆಂಬರ್ 22 ರಂದು ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ಕೊಚ್ಚಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದೆ.

ಮುಂಬೈ, ಕೊಚ್ಚಿ, ಮಧ್ಯಪ್ರದೇಶದ ಬಿನಾ ಮತ್ತು ಅಸ್ಸಾಂನ ನುಮಾಲಿಗರ್‌ಲ್ಲಿ ಬಿಪಿಸಿಎಲ್‌ಗೆ ಸೇರಿದ 4 ಸಂಸ್ಕರಣಾಗಾರಗಳಿವೆ. ಇತರ ಸಂಬಂಧಿತ ಪೆಟ್ರೋಲ್-ಡೀಸೆಲ್ ಚಿಲ್ಲರೆ ಮಾರಾಟ ಮಳಿಗೆಗಳು, ಎಲ್‌ಪಿಜಿ ವಿತರಣಾ ಕೇಂದ್ರಗಳು ಮತ್ತು ಎಲ್‌ಪಿಜಿ ಬಾಟ್ಲಿಂಗ್ ಸ್ಥಾವರ ಹೊಂದಿರುವ ಬಿಪಿಸಿಎಲ್ ಒಟ್ಟು 12,000 ಖಾಯಂ ಉದ್ಯೋಗಿಗಳು ಮತ್ತು ಸಾವಿರಾರು ಗುತ್ತಿಗೆ ಸಿಬ್ಬಂದಿಗಳನ್ನು ಹೊಂದಿದೆ.

ಕೇರಳದಲ್ಲಿ ಮಾತ್ರ, ಕೊಚ್ಚಿಯ ಬಿಪಿಸಿಎಲ್ ಸಂಸ್ಕರಣಾಗಾರದಲ್ಲಿ, ಸುಮಾರು 2,500 ಖಾಯಂ ಸಿಬ್ಬಂದಿ ಮತ್ತು ಸುಮಾರು 6,000 ಗುತ್ತಿಗೆ ನೌಕರರಿದ್ದಾರೆ. ಜತೆಗೆ ಸಂಸ್ಕರಣಾಗಾರದ ವಿವಿಧ ಯೋಜನೆಗಳಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಏರ್ ಇಂಡಿಯಾದೊಂದಿಗೆ ಬಿಪಿಸಿಎಲ್ ಅನ್ನು ಮಾರಾಟ ಮಾಡುವುದರಿಂದ ಸರ್ಕಾರಕ್ಕೆ ಒಂದು ಲಕ್ಷ ಕೋಟಿ ರೂ. ನಷ್ಟ ಉಂಟಾಗುವ ಸಾಧ್ಯತೆಯಿದೆ. ಹೆಚ್ಚು ಲಾಭದಲ್ಲಿರುವ ಬಿಪಿಸಿಎಲ್ ಅನ್ನು ಖಾಸಗೀಕರಣಗೊಳಿಸುತ್ತಿರುವುದು ಆತಂಕವನ್ನುಂಟು ಮಾಡಿದೆ.

ಬಿಪಿಸಿಎಲ್ ಅನ್ನು ಖಾಸಗಿ ಕಂಪನಿಗೆ ಮಾರಿದರೆ ಉದ್ಯೋಗ ನಷ್ಟವಾಗುವ ಭೀತಿ ಹೆಚ್ಚಿದೆ. ವಿದೇಶಿ ಅಥವಾ ಬಹುರಾಷ್ಟ್ರೀಯ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ, ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಕೊಚ್ಚಿಯಲ್ಲಿರುವ ಬಿಪಿಸಿಎಲ್‌ನ ಸಂಸ್ಕರಣಾಗಾರಗಳು ಬಹು ಘಟಕಗಳಿಂದ ಕೂಡಿದೆ. ಬಹುರಾಷ್ಟ್ರೀಯ ತೈಲ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ ತಮ್ಮ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿಲ್ಲ. ಏಕೆಂದರೆ ಅವುಗಳು ಅಗತ್ಯಕ್ಕಿಂತ ಹೆಚ್ಚಿನ ಸ್ಟಾಕ್ ಹೊಂದಿವೆ. ಈಗ ನಿಜವಾಗಿ ಗುರಿ ಇಟ್ಟುಕೊಂಡಿರುವುದು ಭಾರತದ ಮಾರುಕಟ್ಟೆ ತೆರೆಯುವಿಕೆಯಲ್ಲಿ. ಹೀಗಾಗಿ ಸಂಸ್ಕರಣಾಗಾರಗಳ ಅನೇಕ ಘಟಕಗಳನ್ನು ಕೇವಲ ಒಂದೇ ಘಟಕಗಳಿಗೆ ಮುಚ್ಚುವ ಹೆಚ್ಚಿನ ಅವಕಾಶಗಳಿವೆ. ಆದ್ದರಿಂದ ಇದು ದೇಶಾದ್ಯಂತ ಸಾವಿರಾರು ಜನರಿಗೆ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸ್ಕರಣಾಗಾರ ನೌಕರರ ಒಕ್ಕೂಟವನ್ನು ಪ್ರತಿನಿಧಿಸುವ ನಸೀಮುದ್ದೀನ್ ಎಸ್.ಕೆ ಹೇಳಿದರು.

ಬಿಪಿಸಿಎಲ್‌ ಖಾಸಗೀಕರಣವಾದರೆ ಮುಂದೆ ಹೊಸ ನೇಮಕಾತಿಗಳಿಗೆ ಅವಕಾಶಗಳಿರುವುದಿಲ್ಲ. ಕೇರಳದ ಕೊಚ್ಚಿ ಸಂಸ್ಕರಣಾಗಾರವು ಸಾರ್ವಜನಿಕ ವಲಯದ ಏಕೈಕ ಸಂಸ್ಥೆಯಾಗಿದೆ. ಅಲ್ಲಿ ಈಗಲೂ ಜನರನ್ನು ಸಕ್ರಿಯವಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಸಗೊಬ್ಬರ, ರಾಸಾಯನಿಕಗಳು ತಿರುವಾಂಕೂರು ಲಿಮಿಟೆಡ್ (ಫ್ಯಾಕ್ಟ್) ಮತ್ತು ಎಚ್‌ಎಂಟಿ ಲಿಮಿಟೆಡ್ ಸೇರಿದಂತೆ ಕೇರಳದ ಎಲ್ಲಾ ಸಾರ್ವಜನಿಕ ವಲಯದ ಕಂಪನಿಗಳು ನೇಮಕಾತಿಗಳಲ್ಲಿ ಸುಪ್ತ ಹಂತದ ಮೂಲಕ ಸಾಗುತ್ತಿವೆ ಎಂದು ಕೊಚ್ಚಿನ್ ರಿಫೈನರೀಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಪಿ ಹೇಳಿದರು.

ಕೊಚ್ಚಿ ಸಂಸ್ಕರಣಾಗಾರದಲ್ಲಿಅಲ್ಲಿನ ರಾಜ್ಯಸರ್ಕಾರ ಶೇ. 5 ಪಾಲನ್ನು ಹೊಂದಿದೆ. ಅದರಿಂದ ಫೀಡ್‌ಸ್ಟಾಕ್‌ಗಳನ್ನು ಪೆಟ್ರೋಕೆಮಿಕಲ್‌ ಪಾರ್ಕ್‌ ಸ್ಥಾಪಿಸಲು ಸರ್ಕಾರ ಇತ್ತೀಚೆಗೆ ಮನವಿ ಮುಂದಿಟ್ಟಿತ್ತು.   ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪೆಟ್ರೋಕೆಮಿಕಲ್ ಪಾರ್ಕ್‌ನಲ್ಲಿ 25 ಸಾವಿರ ಕೋಟಿ ರೂ.ಗಳ ಹೂಡಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಖಾಸಗೀಕರಣದಿಂದಾಗಿ ಬಿಪಿಸಿಎಲ್‌ ಹಾಗೂ ನೌಕರರನ್ನು ಇದು ಅನಿಶ್ಚಿತತೆಗೆ ದೂಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್  ಆತಂಕ ವ್ಯಕ್ತಪಡಿಸಿದ್ದಾರೆ.

2018-19ನೇ ಸಾಲಿನಲ್ಲಿ ಬಿಪಿಸಿಎಲ್ ನಿವ್ವಳ ಲಾಭ 7,802.30 ಕೋಟಿ ರೂ. ಆಗಿತ್ತು. ಅದರಲ್ಲಿ ಕಂಪನಿಯ ಒಟ್ಟು ಸಿಎಸ್ಆರ್ ಪಾಲು 177.94 ಕೋಟಿ ರೂ. ಆಗಿತ್ತು. ಕೇರಳದಲ್ಲಿ ಮಾತ್ರ ಬಿಪಿಸಿಎಲ್ ವಿವಿಧ ಸಿಎಸ್ಆರ್ ಉಪಕ್ರಮಗಳಿಗಾಗಿ ಒಟ್ಟು 24.75 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ 12.16 ಕೋಟಿ ರೂ. ನೀಡಿದೆ ಎಂದು ತಿಳಿದು ಬಂದಿದೆ.

ಈಗ ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಆಂದೋಲನವನ್ನಾಗಿ ಮಾಡಲು ನೌಕರರು ನಿರ್ಧರಿಸಿದ್ದಾರೆ. “ಇದು ಕೇವಲ ನಮ್ಮ ಉದ್ಯೋಗ ಮಾತ್ರವಲ್ಲ,  ಸಾಮಾಜಿಕ ನ್ಯಾಯದ ವಿಷಯ”ವೂ ಆಗಿದೆ. ಕಂಪನಿಯು ಖಾಸಗೀಕರಣಗೊಳಿಸಿದರೆ, ಮೀಸಲಾತಿ ಹಾಗೂ ಹುದ್ದೆಗಳ ವಿತರಣೆಯೂ ಇರುವುದಿಲ್ಲ. ಆದ್ದರಿಂದ ಜನ ರಾಜಕೀಯ ಸಂಬಂಧಗಳನ್ನು ಬಿಟ್ಟು, ಎಲ್ಲರೂ ಮುಕ್ತವಾಗಿ ಖಾಸಗೀಕರಣದ ವಿರುದ್ಧ ಒಂದಾಗುವುದು ಅತೀ ಮುಖ್ಯ ಎಂದು ಪ್ರವೀಣ್ ಕುಮಾರ್ ಹೇಳಿದರು.

ಇನ್ನು ನಷ್ಟದ ಕಾರಣಕ್ಕೆ ಮೋದಿ ಸರ್ಕಾರ ಬಿಪಿಸಿಎಲ್‌ ಮಾರಲು ಹೊರಟರೆ ಇನ್ನೊಂದು ಕಡೆ ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ಇದು ಹೇಗೆ ಸಾಧ್ಯ? ಸರ್ಕಾರಿ ಕಂಪನಿ ಮುಳುಗಿತ್ತಿದೆ, ಖಾಸಗಿ ಕಂಪನಿ ಬೆಳೆಯುತ್ತಿದೆ? ಇದರಲ್ಲಿ ಮೋದಿಯದು ಪಾತ್ರವಿಲ್ಲವೇ? ಎಂದು ಬಹಳಷ್ಟು ಜನ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...