Homeಮುಖಪುಟಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

- Advertisement -
- Advertisement -

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ್ನು ಖಾಸಗೀಕರಣಗೊಳಿಸುವ ಕ್ರಮಕ್ಕೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಂಪನಿಗೆ ಮಾರಾಟ ಮಾಡುವುದನ್ನು ವಿರೋಧಿಸಿ, ನೌಕರರು ದೇಶವ್ಯಾಪಿ ಮುಷ್ಕರ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

2020 ರ ಮಾರ್ಚ್ ವೇಳೆಗೆ ಬಿಪಿಸಿಎಲ್ ಅನ್ನು ಖಾಸಗಿ ಸಂಸ್ಥೆಗೆ ಮಾರಾಟ ಮಾಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಕೋಪಗೊಂಡಿರುವ ನೌಕರರು ದೇಶಾದ್ಯಂತ ನವೆಂಬರ್‌ 28 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ವಿಡಿಯೋ ನೋಡಿ:

ನವೆಂಬರ್ 25 ರಂದು ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ಬಿಪಿಸಿಎಲ್ ಅನ್ನು ಪೆಟ್ಟಾದಿಂದ ಕೊಚ್ಚಿಯ ಅಂಬಾಲಮುಗಲ್‌ಗೆ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಮೆರವಣಿಗೆ ನಡೆಸಲಿದ್ದಾರೆ. ಸಿಪಿಐ (ಎಂ) ನವೆಂಬರ್ 22 ರಂದು ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ಕೊಚ್ಚಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದೆ.

ಮುಂಬೈ, ಕೊಚ್ಚಿ, ಮಧ್ಯಪ್ರದೇಶದ ಬಿನಾ ಮತ್ತು ಅಸ್ಸಾಂನ ನುಮಾಲಿಗರ್‌ಲ್ಲಿ ಬಿಪಿಸಿಎಲ್‌ಗೆ ಸೇರಿದ 4 ಸಂಸ್ಕರಣಾಗಾರಗಳಿವೆ. ಇತರ ಸಂಬಂಧಿತ ಪೆಟ್ರೋಲ್-ಡೀಸೆಲ್ ಚಿಲ್ಲರೆ ಮಾರಾಟ ಮಳಿಗೆಗಳು, ಎಲ್‌ಪಿಜಿ ವಿತರಣಾ ಕೇಂದ್ರಗಳು ಮತ್ತು ಎಲ್‌ಪಿಜಿ ಬಾಟ್ಲಿಂಗ್ ಸ್ಥಾವರ ಹೊಂದಿರುವ ಬಿಪಿಸಿಎಲ್ ಒಟ್ಟು 12,000 ಖಾಯಂ ಉದ್ಯೋಗಿಗಳು ಮತ್ತು ಸಾವಿರಾರು ಗುತ್ತಿಗೆ ಸಿಬ್ಬಂದಿಗಳನ್ನು ಹೊಂದಿದೆ.

ಕೇರಳದಲ್ಲಿ ಮಾತ್ರ, ಕೊಚ್ಚಿಯ ಬಿಪಿಸಿಎಲ್ ಸಂಸ್ಕರಣಾಗಾರದಲ್ಲಿ, ಸುಮಾರು 2,500 ಖಾಯಂ ಸಿಬ್ಬಂದಿ ಮತ್ತು ಸುಮಾರು 6,000 ಗುತ್ತಿಗೆ ನೌಕರರಿದ್ದಾರೆ. ಜತೆಗೆ ಸಂಸ್ಕರಣಾಗಾರದ ವಿವಿಧ ಯೋಜನೆಗಳಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಏರ್ ಇಂಡಿಯಾದೊಂದಿಗೆ ಬಿಪಿಸಿಎಲ್ ಅನ್ನು ಮಾರಾಟ ಮಾಡುವುದರಿಂದ ಸರ್ಕಾರಕ್ಕೆ ಒಂದು ಲಕ್ಷ ಕೋಟಿ ರೂ. ನಷ್ಟ ಉಂಟಾಗುವ ಸಾಧ್ಯತೆಯಿದೆ. ಹೆಚ್ಚು ಲಾಭದಲ್ಲಿರುವ ಬಿಪಿಸಿಎಲ್ ಅನ್ನು ಖಾಸಗೀಕರಣಗೊಳಿಸುತ್ತಿರುವುದು ಆತಂಕವನ್ನುಂಟು ಮಾಡಿದೆ.

ಬಿಪಿಸಿಎಲ್ ಅನ್ನು ಖಾಸಗಿ ಕಂಪನಿಗೆ ಮಾರಿದರೆ ಉದ್ಯೋಗ ನಷ್ಟವಾಗುವ ಭೀತಿ ಹೆಚ್ಚಿದೆ. ವಿದೇಶಿ ಅಥವಾ ಬಹುರಾಷ್ಟ್ರೀಯ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ, ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಕೊಚ್ಚಿಯಲ್ಲಿರುವ ಬಿಪಿಸಿಎಲ್‌ನ ಸಂಸ್ಕರಣಾಗಾರಗಳು ಬಹು ಘಟಕಗಳಿಂದ ಕೂಡಿದೆ. ಬಹುರಾಷ್ಟ್ರೀಯ ತೈಲ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ ತಮ್ಮ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿಲ್ಲ. ಏಕೆಂದರೆ ಅವುಗಳು ಅಗತ್ಯಕ್ಕಿಂತ ಹೆಚ್ಚಿನ ಸ್ಟಾಕ್ ಹೊಂದಿವೆ. ಈಗ ನಿಜವಾಗಿ ಗುರಿ ಇಟ್ಟುಕೊಂಡಿರುವುದು ಭಾರತದ ಮಾರುಕಟ್ಟೆ ತೆರೆಯುವಿಕೆಯಲ್ಲಿ. ಹೀಗಾಗಿ ಸಂಸ್ಕರಣಾಗಾರಗಳ ಅನೇಕ ಘಟಕಗಳನ್ನು ಕೇವಲ ಒಂದೇ ಘಟಕಗಳಿಗೆ ಮುಚ್ಚುವ ಹೆಚ್ಚಿನ ಅವಕಾಶಗಳಿವೆ. ಆದ್ದರಿಂದ ಇದು ದೇಶಾದ್ಯಂತ ಸಾವಿರಾರು ಜನರಿಗೆ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸ್ಕರಣಾಗಾರ ನೌಕರರ ಒಕ್ಕೂಟವನ್ನು ಪ್ರತಿನಿಧಿಸುವ ನಸೀಮುದ್ದೀನ್ ಎಸ್.ಕೆ ಹೇಳಿದರು.

ಬಿಪಿಸಿಎಲ್‌ ಖಾಸಗೀಕರಣವಾದರೆ ಮುಂದೆ ಹೊಸ ನೇಮಕಾತಿಗಳಿಗೆ ಅವಕಾಶಗಳಿರುವುದಿಲ್ಲ. ಕೇರಳದ ಕೊಚ್ಚಿ ಸಂಸ್ಕರಣಾಗಾರವು ಸಾರ್ವಜನಿಕ ವಲಯದ ಏಕೈಕ ಸಂಸ್ಥೆಯಾಗಿದೆ. ಅಲ್ಲಿ ಈಗಲೂ ಜನರನ್ನು ಸಕ್ರಿಯವಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಸಗೊಬ್ಬರ, ರಾಸಾಯನಿಕಗಳು ತಿರುವಾಂಕೂರು ಲಿಮಿಟೆಡ್ (ಫ್ಯಾಕ್ಟ್) ಮತ್ತು ಎಚ್‌ಎಂಟಿ ಲಿಮಿಟೆಡ್ ಸೇರಿದಂತೆ ಕೇರಳದ ಎಲ್ಲಾ ಸಾರ್ವಜನಿಕ ವಲಯದ ಕಂಪನಿಗಳು ನೇಮಕಾತಿಗಳಲ್ಲಿ ಸುಪ್ತ ಹಂತದ ಮೂಲಕ ಸಾಗುತ್ತಿವೆ ಎಂದು ಕೊಚ್ಚಿನ್ ರಿಫೈನರೀಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಪಿ ಹೇಳಿದರು.

ಕೊಚ್ಚಿ ಸಂಸ್ಕರಣಾಗಾರದಲ್ಲಿಅಲ್ಲಿನ ರಾಜ್ಯಸರ್ಕಾರ ಶೇ. 5 ಪಾಲನ್ನು ಹೊಂದಿದೆ. ಅದರಿಂದ ಫೀಡ್‌ಸ್ಟಾಕ್‌ಗಳನ್ನು ಪೆಟ್ರೋಕೆಮಿಕಲ್‌ ಪಾರ್ಕ್‌ ಸ್ಥಾಪಿಸಲು ಸರ್ಕಾರ ಇತ್ತೀಚೆಗೆ ಮನವಿ ಮುಂದಿಟ್ಟಿತ್ತು.   ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪೆಟ್ರೋಕೆಮಿಕಲ್ ಪಾರ್ಕ್‌ನಲ್ಲಿ 25 ಸಾವಿರ ಕೋಟಿ ರೂ.ಗಳ ಹೂಡಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಖಾಸಗೀಕರಣದಿಂದಾಗಿ ಬಿಪಿಸಿಎಲ್‌ ಹಾಗೂ ನೌಕರರನ್ನು ಇದು ಅನಿಶ್ಚಿತತೆಗೆ ದೂಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್  ಆತಂಕ ವ್ಯಕ್ತಪಡಿಸಿದ್ದಾರೆ.

2018-19ನೇ ಸಾಲಿನಲ್ಲಿ ಬಿಪಿಸಿಎಲ್ ನಿವ್ವಳ ಲಾಭ 7,802.30 ಕೋಟಿ ರೂ. ಆಗಿತ್ತು. ಅದರಲ್ಲಿ ಕಂಪನಿಯ ಒಟ್ಟು ಸಿಎಸ್ಆರ್ ಪಾಲು 177.94 ಕೋಟಿ ರೂ. ಆಗಿತ್ತು. ಕೇರಳದಲ್ಲಿ ಮಾತ್ರ ಬಿಪಿಸಿಎಲ್ ವಿವಿಧ ಸಿಎಸ್ಆರ್ ಉಪಕ್ರಮಗಳಿಗಾಗಿ ಒಟ್ಟು 24.75 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ 12.16 ಕೋಟಿ ರೂ. ನೀಡಿದೆ ಎಂದು ತಿಳಿದು ಬಂದಿದೆ.

ಈಗ ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಆಂದೋಲನವನ್ನಾಗಿ ಮಾಡಲು ನೌಕರರು ನಿರ್ಧರಿಸಿದ್ದಾರೆ. “ಇದು ಕೇವಲ ನಮ್ಮ ಉದ್ಯೋಗ ಮಾತ್ರವಲ್ಲ,  ಸಾಮಾಜಿಕ ನ್ಯಾಯದ ವಿಷಯ”ವೂ ಆಗಿದೆ. ಕಂಪನಿಯು ಖಾಸಗೀಕರಣಗೊಳಿಸಿದರೆ, ಮೀಸಲಾತಿ ಹಾಗೂ ಹುದ್ದೆಗಳ ವಿತರಣೆಯೂ ಇರುವುದಿಲ್ಲ. ಆದ್ದರಿಂದ ಜನ ರಾಜಕೀಯ ಸಂಬಂಧಗಳನ್ನು ಬಿಟ್ಟು, ಎಲ್ಲರೂ ಮುಕ್ತವಾಗಿ ಖಾಸಗೀಕರಣದ ವಿರುದ್ಧ ಒಂದಾಗುವುದು ಅತೀ ಮುಖ್ಯ ಎಂದು ಪ್ರವೀಣ್ ಕುಮಾರ್ ಹೇಳಿದರು.

ಇನ್ನು ನಷ್ಟದ ಕಾರಣಕ್ಕೆ ಮೋದಿ ಸರ್ಕಾರ ಬಿಪಿಸಿಎಲ್‌ ಮಾರಲು ಹೊರಟರೆ ಇನ್ನೊಂದು ಕಡೆ ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ಇದು ಹೇಗೆ ಸಾಧ್ಯ? ಸರ್ಕಾರಿ ಕಂಪನಿ ಮುಳುಗಿತ್ತಿದೆ, ಖಾಸಗಿ ಕಂಪನಿ ಬೆಳೆಯುತ್ತಿದೆ? ಇದರಲ್ಲಿ ಮೋದಿಯದು ಪಾತ್ರವಿಲ್ಲವೇ? ಎಂದು ಬಹಳಷ್ಟು ಜನ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...