Homeಮುಖಪುಟಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

- Advertisement -
- Advertisement -

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ್ನು ಖಾಸಗೀಕರಣಗೊಳಿಸುವ ಕ್ರಮಕ್ಕೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಂಪನಿಗೆ ಮಾರಾಟ ಮಾಡುವುದನ್ನು ವಿರೋಧಿಸಿ, ನೌಕರರು ದೇಶವ್ಯಾಪಿ ಮುಷ್ಕರ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

2020 ರ ಮಾರ್ಚ್ ವೇಳೆಗೆ ಬಿಪಿಸಿಎಲ್ ಅನ್ನು ಖಾಸಗಿ ಸಂಸ್ಥೆಗೆ ಮಾರಾಟ ಮಾಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಕೋಪಗೊಂಡಿರುವ ನೌಕರರು ದೇಶಾದ್ಯಂತ ನವೆಂಬರ್‌ 28 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ವಿಡಿಯೋ ನೋಡಿ:

ನವೆಂಬರ್ 25 ರಂದು ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ಬಿಪಿಸಿಎಲ್ ಅನ್ನು ಪೆಟ್ಟಾದಿಂದ ಕೊಚ್ಚಿಯ ಅಂಬಾಲಮುಗಲ್‌ಗೆ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಮೆರವಣಿಗೆ ನಡೆಸಲಿದ್ದಾರೆ. ಸಿಪಿಐ (ಎಂ) ನವೆಂಬರ್ 22 ರಂದು ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ಕೊಚ್ಚಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದೆ.

ಮುಂಬೈ, ಕೊಚ್ಚಿ, ಮಧ್ಯಪ್ರದೇಶದ ಬಿನಾ ಮತ್ತು ಅಸ್ಸಾಂನ ನುಮಾಲಿಗರ್‌ಲ್ಲಿ ಬಿಪಿಸಿಎಲ್‌ಗೆ ಸೇರಿದ 4 ಸಂಸ್ಕರಣಾಗಾರಗಳಿವೆ. ಇತರ ಸಂಬಂಧಿತ ಪೆಟ್ರೋಲ್-ಡೀಸೆಲ್ ಚಿಲ್ಲರೆ ಮಾರಾಟ ಮಳಿಗೆಗಳು, ಎಲ್‌ಪಿಜಿ ವಿತರಣಾ ಕೇಂದ್ರಗಳು ಮತ್ತು ಎಲ್‌ಪಿಜಿ ಬಾಟ್ಲಿಂಗ್ ಸ್ಥಾವರ ಹೊಂದಿರುವ ಬಿಪಿಸಿಎಲ್ ಒಟ್ಟು 12,000 ಖಾಯಂ ಉದ್ಯೋಗಿಗಳು ಮತ್ತು ಸಾವಿರಾರು ಗುತ್ತಿಗೆ ಸಿಬ್ಬಂದಿಗಳನ್ನು ಹೊಂದಿದೆ.

ಕೇರಳದಲ್ಲಿ ಮಾತ್ರ, ಕೊಚ್ಚಿಯ ಬಿಪಿಸಿಎಲ್ ಸಂಸ್ಕರಣಾಗಾರದಲ್ಲಿ, ಸುಮಾರು 2,500 ಖಾಯಂ ಸಿಬ್ಬಂದಿ ಮತ್ತು ಸುಮಾರು 6,000 ಗುತ್ತಿಗೆ ನೌಕರರಿದ್ದಾರೆ. ಜತೆಗೆ ಸಂಸ್ಕರಣಾಗಾರದ ವಿವಿಧ ಯೋಜನೆಗಳಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಏರ್ ಇಂಡಿಯಾದೊಂದಿಗೆ ಬಿಪಿಸಿಎಲ್ ಅನ್ನು ಮಾರಾಟ ಮಾಡುವುದರಿಂದ ಸರ್ಕಾರಕ್ಕೆ ಒಂದು ಲಕ್ಷ ಕೋಟಿ ರೂ. ನಷ್ಟ ಉಂಟಾಗುವ ಸಾಧ್ಯತೆಯಿದೆ. ಹೆಚ್ಚು ಲಾಭದಲ್ಲಿರುವ ಬಿಪಿಸಿಎಲ್ ಅನ್ನು ಖಾಸಗೀಕರಣಗೊಳಿಸುತ್ತಿರುವುದು ಆತಂಕವನ್ನುಂಟು ಮಾಡಿದೆ.

ಬಿಪಿಸಿಎಲ್ ಅನ್ನು ಖಾಸಗಿ ಕಂಪನಿಗೆ ಮಾರಿದರೆ ಉದ್ಯೋಗ ನಷ್ಟವಾಗುವ ಭೀತಿ ಹೆಚ್ಚಿದೆ. ವಿದೇಶಿ ಅಥವಾ ಬಹುರಾಷ್ಟ್ರೀಯ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ, ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಕೊಚ್ಚಿಯಲ್ಲಿರುವ ಬಿಪಿಸಿಎಲ್‌ನ ಸಂಸ್ಕರಣಾಗಾರಗಳು ಬಹು ಘಟಕಗಳಿಂದ ಕೂಡಿದೆ. ಬಹುರಾಷ್ಟ್ರೀಯ ತೈಲ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ ತಮ್ಮ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿಲ್ಲ. ಏಕೆಂದರೆ ಅವುಗಳು ಅಗತ್ಯಕ್ಕಿಂತ ಹೆಚ್ಚಿನ ಸ್ಟಾಕ್ ಹೊಂದಿವೆ. ಈಗ ನಿಜವಾಗಿ ಗುರಿ ಇಟ್ಟುಕೊಂಡಿರುವುದು ಭಾರತದ ಮಾರುಕಟ್ಟೆ ತೆರೆಯುವಿಕೆಯಲ್ಲಿ. ಹೀಗಾಗಿ ಸಂಸ್ಕರಣಾಗಾರಗಳ ಅನೇಕ ಘಟಕಗಳನ್ನು ಕೇವಲ ಒಂದೇ ಘಟಕಗಳಿಗೆ ಮುಚ್ಚುವ ಹೆಚ್ಚಿನ ಅವಕಾಶಗಳಿವೆ. ಆದ್ದರಿಂದ ಇದು ದೇಶಾದ್ಯಂತ ಸಾವಿರಾರು ಜನರಿಗೆ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸ್ಕರಣಾಗಾರ ನೌಕರರ ಒಕ್ಕೂಟವನ್ನು ಪ್ರತಿನಿಧಿಸುವ ನಸೀಮುದ್ದೀನ್ ಎಸ್.ಕೆ ಹೇಳಿದರು.

ಬಿಪಿಸಿಎಲ್‌ ಖಾಸಗೀಕರಣವಾದರೆ ಮುಂದೆ ಹೊಸ ನೇಮಕಾತಿಗಳಿಗೆ ಅವಕಾಶಗಳಿರುವುದಿಲ್ಲ. ಕೇರಳದ ಕೊಚ್ಚಿ ಸಂಸ್ಕರಣಾಗಾರವು ಸಾರ್ವಜನಿಕ ವಲಯದ ಏಕೈಕ ಸಂಸ್ಥೆಯಾಗಿದೆ. ಅಲ್ಲಿ ಈಗಲೂ ಜನರನ್ನು ಸಕ್ರಿಯವಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಸಗೊಬ್ಬರ, ರಾಸಾಯನಿಕಗಳು ತಿರುವಾಂಕೂರು ಲಿಮಿಟೆಡ್ (ಫ್ಯಾಕ್ಟ್) ಮತ್ತು ಎಚ್‌ಎಂಟಿ ಲಿಮಿಟೆಡ್ ಸೇರಿದಂತೆ ಕೇರಳದ ಎಲ್ಲಾ ಸಾರ್ವಜನಿಕ ವಲಯದ ಕಂಪನಿಗಳು ನೇಮಕಾತಿಗಳಲ್ಲಿ ಸುಪ್ತ ಹಂತದ ಮೂಲಕ ಸಾಗುತ್ತಿವೆ ಎಂದು ಕೊಚ್ಚಿನ್ ರಿಫೈನರೀಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಪಿ ಹೇಳಿದರು.

ಕೊಚ್ಚಿ ಸಂಸ್ಕರಣಾಗಾರದಲ್ಲಿಅಲ್ಲಿನ ರಾಜ್ಯಸರ್ಕಾರ ಶೇ. 5 ಪಾಲನ್ನು ಹೊಂದಿದೆ. ಅದರಿಂದ ಫೀಡ್‌ಸ್ಟಾಕ್‌ಗಳನ್ನು ಪೆಟ್ರೋಕೆಮಿಕಲ್‌ ಪಾರ್ಕ್‌ ಸ್ಥಾಪಿಸಲು ಸರ್ಕಾರ ಇತ್ತೀಚೆಗೆ ಮನವಿ ಮುಂದಿಟ್ಟಿತ್ತು.   ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪೆಟ್ರೋಕೆಮಿಕಲ್ ಪಾರ್ಕ್‌ನಲ್ಲಿ 25 ಸಾವಿರ ಕೋಟಿ ರೂ.ಗಳ ಹೂಡಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಖಾಸಗೀಕರಣದಿಂದಾಗಿ ಬಿಪಿಸಿಎಲ್‌ ಹಾಗೂ ನೌಕರರನ್ನು ಇದು ಅನಿಶ್ಚಿತತೆಗೆ ದೂಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್  ಆತಂಕ ವ್ಯಕ್ತಪಡಿಸಿದ್ದಾರೆ.

2018-19ನೇ ಸಾಲಿನಲ್ಲಿ ಬಿಪಿಸಿಎಲ್ ನಿವ್ವಳ ಲಾಭ 7,802.30 ಕೋಟಿ ರೂ. ಆಗಿತ್ತು. ಅದರಲ್ಲಿ ಕಂಪನಿಯ ಒಟ್ಟು ಸಿಎಸ್ಆರ್ ಪಾಲು 177.94 ಕೋಟಿ ರೂ. ಆಗಿತ್ತು. ಕೇರಳದಲ್ಲಿ ಮಾತ್ರ ಬಿಪಿಸಿಎಲ್ ವಿವಿಧ ಸಿಎಸ್ಆರ್ ಉಪಕ್ರಮಗಳಿಗಾಗಿ ಒಟ್ಟು 24.75 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ 12.16 ಕೋಟಿ ರೂ. ನೀಡಿದೆ ಎಂದು ತಿಳಿದು ಬಂದಿದೆ.

ಈಗ ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಆಂದೋಲನವನ್ನಾಗಿ ಮಾಡಲು ನೌಕರರು ನಿರ್ಧರಿಸಿದ್ದಾರೆ. “ಇದು ಕೇವಲ ನಮ್ಮ ಉದ್ಯೋಗ ಮಾತ್ರವಲ್ಲ,  ಸಾಮಾಜಿಕ ನ್ಯಾಯದ ವಿಷಯ”ವೂ ಆಗಿದೆ. ಕಂಪನಿಯು ಖಾಸಗೀಕರಣಗೊಳಿಸಿದರೆ, ಮೀಸಲಾತಿ ಹಾಗೂ ಹುದ್ದೆಗಳ ವಿತರಣೆಯೂ ಇರುವುದಿಲ್ಲ. ಆದ್ದರಿಂದ ಜನ ರಾಜಕೀಯ ಸಂಬಂಧಗಳನ್ನು ಬಿಟ್ಟು, ಎಲ್ಲರೂ ಮುಕ್ತವಾಗಿ ಖಾಸಗೀಕರಣದ ವಿರುದ್ಧ ಒಂದಾಗುವುದು ಅತೀ ಮುಖ್ಯ ಎಂದು ಪ್ರವೀಣ್ ಕುಮಾರ್ ಹೇಳಿದರು.

ಇನ್ನು ನಷ್ಟದ ಕಾರಣಕ್ಕೆ ಮೋದಿ ಸರ್ಕಾರ ಬಿಪಿಸಿಎಲ್‌ ಮಾರಲು ಹೊರಟರೆ ಇನ್ನೊಂದು ಕಡೆ ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ಇದು ಹೇಗೆ ಸಾಧ್ಯ? ಸರ್ಕಾರಿ ಕಂಪನಿ ಮುಳುಗಿತ್ತಿದೆ, ಖಾಸಗಿ ಕಂಪನಿ ಬೆಳೆಯುತ್ತಿದೆ? ಇದರಲ್ಲಿ ಮೋದಿಯದು ಪಾತ್ರವಿಲ್ಲವೇ? ಎಂದು ಬಹಳಷ್ಟು ಜನ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...