Homeಮುಖಪುಟಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

- Advertisement -
- Advertisement -

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ್ನು ಖಾಸಗೀಕರಣಗೊಳಿಸುವ ಕ್ರಮಕ್ಕೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಂಪನಿಗೆ ಮಾರಾಟ ಮಾಡುವುದನ್ನು ವಿರೋಧಿಸಿ, ನೌಕರರು ದೇಶವ್ಯಾಪಿ ಮುಷ್ಕರ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

2020 ರ ಮಾರ್ಚ್ ವೇಳೆಗೆ ಬಿಪಿಸಿಎಲ್ ಅನ್ನು ಖಾಸಗಿ ಸಂಸ್ಥೆಗೆ ಮಾರಾಟ ಮಾಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಕೋಪಗೊಂಡಿರುವ ನೌಕರರು ದೇಶಾದ್ಯಂತ ನವೆಂಬರ್‌ 28 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ವಿಡಿಯೋ ನೋಡಿ:

ನವೆಂಬರ್ 25 ರಂದು ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ಬಿಪಿಸಿಎಲ್ ಅನ್ನು ಪೆಟ್ಟಾದಿಂದ ಕೊಚ್ಚಿಯ ಅಂಬಾಲಮುಗಲ್‌ಗೆ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಮೆರವಣಿಗೆ ನಡೆಸಲಿದ್ದಾರೆ. ಸಿಪಿಐ (ಎಂ) ನವೆಂಬರ್ 22 ರಂದು ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ಕೊಚ್ಚಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದೆ.

ಮುಂಬೈ, ಕೊಚ್ಚಿ, ಮಧ್ಯಪ್ರದೇಶದ ಬಿನಾ ಮತ್ತು ಅಸ್ಸಾಂನ ನುಮಾಲಿಗರ್‌ಲ್ಲಿ ಬಿಪಿಸಿಎಲ್‌ಗೆ ಸೇರಿದ 4 ಸಂಸ್ಕರಣಾಗಾರಗಳಿವೆ. ಇತರ ಸಂಬಂಧಿತ ಪೆಟ್ರೋಲ್-ಡೀಸೆಲ್ ಚಿಲ್ಲರೆ ಮಾರಾಟ ಮಳಿಗೆಗಳು, ಎಲ್‌ಪಿಜಿ ವಿತರಣಾ ಕೇಂದ್ರಗಳು ಮತ್ತು ಎಲ್‌ಪಿಜಿ ಬಾಟ್ಲಿಂಗ್ ಸ್ಥಾವರ ಹೊಂದಿರುವ ಬಿಪಿಸಿಎಲ್ ಒಟ್ಟು 12,000 ಖಾಯಂ ಉದ್ಯೋಗಿಗಳು ಮತ್ತು ಸಾವಿರಾರು ಗುತ್ತಿಗೆ ಸಿಬ್ಬಂದಿಗಳನ್ನು ಹೊಂದಿದೆ.

ಕೇರಳದಲ್ಲಿ ಮಾತ್ರ, ಕೊಚ್ಚಿಯ ಬಿಪಿಸಿಎಲ್ ಸಂಸ್ಕರಣಾಗಾರದಲ್ಲಿ, ಸುಮಾರು 2,500 ಖಾಯಂ ಸಿಬ್ಬಂದಿ ಮತ್ತು ಸುಮಾರು 6,000 ಗುತ್ತಿಗೆ ನೌಕರರಿದ್ದಾರೆ. ಜತೆಗೆ ಸಂಸ್ಕರಣಾಗಾರದ ವಿವಿಧ ಯೋಜನೆಗಳಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಏರ್ ಇಂಡಿಯಾದೊಂದಿಗೆ ಬಿಪಿಸಿಎಲ್ ಅನ್ನು ಮಾರಾಟ ಮಾಡುವುದರಿಂದ ಸರ್ಕಾರಕ್ಕೆ ಒಂದು ಲಕ್ಷ ಕೋಟಿ ರೂ. ನಷ್ಟ ಉಂಟಾಗುವ ಸಾಧ್ಯತೆಯಿದೆ. ಹೆಚ್ಚು ಲಾಭದಲ್ಲಿರುವ ಬಿಪಿಸಿಎಲ್ ಅನ್ನು ಖಾಸಗೀಕರಣಗೊಳಿಸುತ್ತಿರುವುದು ಆತಂಕವನ್ನುಂಟು ಮಾಡಿದೆ.

ಬಿಪಿಸಿಎಲ್ ಅನ್ನು ಖಾಸಗಿ ಕಂಪನಿಗೆ ಮಾರಿದರೆ ಉದ್ಯೋಗ ನಷ್ಟವಾಗುವ ಭೀತಿ ಹೆಚ್ಚಿದೆ. ವಿದೇಶಿ ಅಥವಾ ಬಹುರಾಷ್ಟ್ರೀಯ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ, ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಕೊಚ್ಚಿಯಲ್ಲಿರುವ ಬಿಪಿಸಿಎಲ್‌ನ ಸಂಸ್ಕರಣಾಗಾರಗಳು ಬಹು ಘಟಕಗಳಿಂದ ಕೂಡಿದೆ. ಬಹುರಾಷ್ಟ್ರೀಯ ತೈಲ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ ತಮ್ಮ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿಲ್ಲ. ಏಕೆಂದರೆ ಅವುಗಳು ಅಗತ್ಯಕ್ಕಿಂತ ಹೆಚ್ಚಿನ ಸ್ಟಾಕ್ ಹೊಂದಿವೆ. ಈಗ ನಿಜವಾಗಿ ಗುರಿ ಇಟ್ಟುಕೊಂಡಿರುವುದು ಭಾರತದ ಮಾರುಕಟ್ಟೆ ತೆರೆಯುವಿಕೆಯಲ್ಲಿ. ಹೀಗಾಗಿ ಸಂಸ್ಕರಣಾಗಾರಗಳ ಅನೇಕ ಘಟಕಗಳನ್ನು ಕೇವಲ ಒಂದೇ ಘಟಕಗಳಿಗೆ ಮುಚ್ಚುವ ಹೆಚ್ಚಿನ ಅವಕಾಶಗಳಿವೆ. ಆದ್ದರಿಂದ ಇದು ದೇಶಾದ್ಯಂತ ಸಾವಿರಾರು ಜನರಿಗೆ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸ್ಕರಣಾಗಾರ ನೌಕರರ ಒಕ್ಕೂಟವನ್ನು ಪ್ರತಿನಿಧಿಸುವ ನಸೀಮುದ್ದೀನ್ ಎಸ್.ಕೆ ಹೇಳಿದರು.

ಬಿಪಿಸಿಎಲ್‌ ಖಾಸಗೀಕರಣವಾದರೆ ಮುಂದೆ ಹೊಸ ನೇಮಕಾತಿಗಳಿಗೆ ಅವಕಾಶಗಳಿರುವುದಿಲ್ಲ. ಕೇರಳದ ಕೊಚ್ಚಿ ಸಂಸ್ಕರಣಾಗಾರವು ಸಾರ್ವಜನಿಕ ವಲಯದ ಏಕೈಕ ಸಂಸ್ಥೆಯಾಗಿದೆ. ಅಲ್ಲಿ ಈಗಲೂ ಜನರನ್ನು ಸಕ್ರಿಯವಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಸಗೊಬ್ಬರ, ರಾಸಾಯನಿಕಗಳು ತಿರುವಾಂಕೂರು ಲಿಮಿಟೆಡ್ (ಫ್ಯಾಕ್ಟ್) ಮತ್ತು ಎಚ್‌ಎಂಟಿ ಲಿಮಿಟೆಡ್ ಸೇರಿದಂತೆ ಕೇರಳದ ಎಲ್ಲಾ ಸಾರ್ವಜನಿಕ ವಲಯದ ಕಂಪನಿಗಳು ನೇಮಕಾತಿಗಳಲ್ಲಿ ಸುಪ್ತ ಹಂತದ ಮೂಲಕ ಸಾಗುತ್ತಿವೆ ಎಂದು ಕೊಚ್ಚಿನ್ ರಿಫೈನರೀಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಪಿ ಹೇಳಿದರು.

ಕೊಚ್ಚಿ ಸಂಸ್ಕರಣಾಗಾರದಲ್ಲಿಅಲ್ಲಿನ ರಾಜ್ಯಸರ್ಕಾರ ಶೇ. 5 ಪಾಲನ್ನು ಹೊಂದಿದೆ. ಅದರಿಂದ ಫೀಡ್‌ಸ್ಟಾಕ್‌ಗಳನ್ನು ಪೆಟ್ರೋಕೆಮಿಕಲ್‌ ಪಾರ್ಕ್‌ ಸ್ಥಾಪಿಸಲು ಸರ್ಕಾರ ಇತ್ತೀಚೆಗೆ ಮನವಿ ಮುಂದಿಟ್ಟಿತ್ತು.   ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪೆಟ್ರೋಕೆಮಿಕಲ್ ಪಾರ್ಕ್‌ನಲ್ಲಿ 25 ಸಾವಿರ ಕೋಟಿ ರೂ.ಗಳ ಹೂಡಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಖಾಸಗೀಕರಣದಿಂದಾಗಿ ಬಿಪಿಸಿಎಲ್‌ ಹಾಗೂ ನೌಕರರನ್ನು ಇದು ಅನಿಶ್ಚಿತತೆಗೆ ದೂಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್  ಆತಂಕ ವ್ಯಕ್ತಪಡಿಸಿದ್ದಾರೆ.

2018-19ನೇ ಸಾಲಿನಲ್ಲಿ ಬಿಪಿಸಿಎಲ್ ನಿವ್ವಳ ಲಾಭ 7,802.30 ಕೋಟಿ ರೂ. ಆಗಿತ್ತು. ಅದರಲ್ಲಿ ಕಂಪನಿಯ ಒಟ್ಟು ಸಿಎಸ್ಆರ್ ಪಾಲು 177.94 ಕೋಟಿ ರೂ. ಆಗಿತ್ತು. ಕೇರಳದಲ್ಲಿ ಮಾತ್ರ ಬಿಪಿಸಿಎಲ್ ವಿವಿಧ ಸಿಎಸ್ಆರ್ ಉಪಕ್ರಮಗಳಿಗಾಗಿ ಒಟ್ಟು 24.75 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ 12.16 ಕೋಟಿ ರೂ. ನೀಡಿದೆ ಎಂದು ತಿಳಿದು ಬಂದಿದೆ.

ಈಗ ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಆಂದೋಲನವನ್ನಾಗಿ ಮಾಡಲು ನೌಕರರು ನಿರ್ಧರಿಸಿದ್ದಾರೆ. “ಇದು ಕೇವಲ ನಮ್ಮ ಉದ್ಯೋಗ ಮಾತ್ರವಲ್ಲ,  ಸಾಮಾಜಿಕ ನ್ಯಾಯದ ವಿಷಯ”ವೂ ಆಗಿದೆ. ಕಂಪನಿಯು ಖಾಸಗೀಕರಣಗೊಳಿಸಿದರೆ, ಮೀಸಲಾತಿ ಹಾಗೂ ಹುದ್ದೆಗಳ ವಿತರಣೆಯೂ ಇರುವುದಿಲ್ಲ. ಆದ್ದರಿಂದ ಜನ ರಾಜಕೀಯ ಸಂಬಂಧಗಳನ್ನು ಬಿಟ್ಟು, ಎಲ್ಲರೂ ಮುಕ್ತವಾಗಿ ಖಾಸಗೀಕರಣದ ವಿರುದ್ಧ ಒಂದಾಗುವುದು ಅತೀ ಮುಖ್ಯ ಎಂದು ಪ್ರವೀಣ್ ಕುಮಾರ್ ಹೇಳಿದರು.

ಇನ್ನು ನಷ್ಟದ ಕಾರಣಕ್ಕೆ ಮೋದಿ ಸರ್ಕಾರ ಬಿಪಿಸಿಎಲ್‌ ಮಾರಲು ಹೊರಟರೆ ಇನ್ನೊಂದು ಕಡೆ ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ಇದು ಹೇಗೆ ಸಾಧ್ಯ? ಸರ್ಕಾರಿ ಕಂಪನಿ ಮುಳುಗಿತ್ತಿದೆ, ಖಾಸಗಿ ಕಂಪನಿ ಬೆಳೆಯುತ್ತಿದೆ? ಇದರಲ್ಲಿ ಮೋದಿಯದು ಪಾತ್ರವಿಲ್ಲವೇ? ಎಂದು ಬಹಳಷ್ಟು ಜನ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...