Homeಮುಖಪುಟಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

- Advertisement -
- Advertisement -

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ್ನು ಖಾಸಗೀಕರಣಗೊಳಿಸುವ ಕ್ರಮಕ್ಕೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಂಪನಿಗೆ ಮಾರಾಟ ಮಾಡುವುದನ್ನು ವಿರೋಧಿಸಿ, ನೌಕರರು ದೇಶವ್ಯಾಪಿ ಮುಷ್ಕರ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

2020 ರ ಮಾರ್ಚ್ ವೇಳೆಗೆ ಬಿಪಿಸಿಎಲ್ ಅನ್ನು ಖಾಸಗಿ ಸಂಸ್ಥೆಗೆ ಮಾರಾಟ ಮಾಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಕೋಪಗೊಂಡಿರುವ ನೌಕರರು ದೇಶಾದ್ಯಂತ ನವೆಂಬರ್‌ 28 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ವಿಡಿಯೋ ನೋಡಿ:

ನವೆಂಬರ್ 25 ರಂದು ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ಬಿಪಿಸಿಎಲ್ ಅನ್ನು ಪೆಟ್ಟಾದಿಂದ ಕೊಚ್ಚಿಯ ಅಂಬಾಲಮುಗಲ್‌ಗೆ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಮೆರವಣಿಗೆ ನಡೆಸಲಿದ್ದಾರೆ. ಸಿಪಿಐ (ಎಂ) ನವೆಂಬರ್ 22 ರಂದು ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ಕೊಚ್ಚಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದೆ.

ಮುಂಬೈ, ಕೊಚ್ಚಿ, ಮಧ್ಯಪ್ರದೇಶದ ಬಿನಾ ಮತ್ತು ಅಸ್ಸಾಂನ ನುಮಾಲಿಗರ್‌ಲ್ಲಿ ಬಿಪಿಸಿಎಲ್‌ಗೆ ಸೇರಿದ 4 ಸಂಸ್ಕರಣಾಗಾರಗಳಿವೆ. ಇತರ ಸಂಬಂಧಿತ ಪೆಟ್ರೋಲ್-ಡೀಸೆಲ್ ಚಿಲ್ಲರೆ ಮಾರಾಟ ಮಳಿಗೆಗಳು, ಎಲ್‌ಪಿಜಿ ವಿತರಣಾ ಕೇಂದ್ರಗಳು ಮತ್ತು ಎಲ್‌ಪಿಜಿ ಬಾಟ್ಲಿಂಗ್ ಸ್ಥಾವರ ಹೊಂದಿರುವ ಬಿಪಿಸಿಎಲ್ ಒಟ್ಟು 12,000 ಖಾಯಂ ಉದ್ಯೋಗಿಗಳು ಮತ್ತು ಸಾವಿರಾರು ಗುತ್ತಿಗೆ ಸಿಬ್ಬಂದಿಗಳನ್ನು ಹೊಂದಿದೆ.

ಕೇರಳದಲ್ಲಿ ಮಾತ್ರ, ಕೊಚ್ಚಿಯ ಬಿಪಿಸಿಎಲ್ ಸಂಸ್ಕರಣಾಗಾರದಲ್ಲಿ, ಸುಮಾರು 2,500 ಖಾಯಂ ಸಿಬ್ಬಂದಿ ಮತ್ತು ಸುಮಾರು 6,000 ಗುತ್ತಿಗೆ ನೌಕರರಿದ್ದಾರೆ. ಜತೆಗೆ ಸಂಸ್ಕರಣಾಗಾರದ ವಿವಿಧ ಯೋಜನೆಗಳಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಏರ್ ಇಂಡಿಯಾದೊಂದಿಗೆ ಬಿಪಿಸಿಎಲ್ ಅನ್ನು ಮಾರಾಟ ಮಾಡುವುದರಿಂದ ಸರ್ಕಾರಕ್ಕೆ ಒಂದು ಲಕ್ಷ ಕೋಟಿ ರೂ. ನಷ್ಟ ಉಂಟಾಗುವ ಸಾಧ್ಯತೆಯಿದೆ. ಹೆಚ್ಚು ಲಾಭದಲ್ಲಿರುವ ಬಿಪಿಸಿಎಲ್ ಅನ್ನು ಖಾಸಗೀಕರಣಗೊಳಿಸುತ್ತಿರುವುದು ಆತಂಕವನ್ನುಂಟು ಮಾಡಿದೆ.

ಬಿಪಿಸಿಎಲ್ ಅನ್ನು ಖಾಸಗಿ ಕಂಪನಿಗೆ ಮಾರಿದರೆ ಉದ್ಯೋಗ ನಷ್ಟವಾಗುವ ಭೀತಿ ಹೆಚ್ಚಿದೆ. ವಿದೇಶಿ ಅಥವಾ ಬಹುರಾಷ್ಟ್ರೀಯ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ, ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಕೊಚ್ಚಿಯಲ್ಲಿರುವ ಬಿಪಿಸಿಎಲ್‌ನ ಸಂಸ್ಕರಣಾಗಾರಗಳು ಬಹು ಘಟಕಗಳಿಂದ ಕೂಡಿದೆ. ಬಹುರಾಷ್ಟ್ರೀಯ ತೈಲ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ ತಮ್ಮ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿಲ್ಲ. ಏಕೆಂದರೆ ಅವುಗಳು ಅಗತ್ಯಕ್ಕಿಂತ ಹೆಚ್ಚಿನ ಸ್ಟಾಕ್ ಹೊಂದಿವೆ. ಈಗ ನಿಜವಾಗಿ ಗುರಿ ಇಟ್ಟುಕೊಂಡಿರುವುದು ಭಾರತದ ಮಾರುಕಟ್ಟೆ ತೆರೆಯುವಿಕೆಯಲ್ಲಿ. ಹೀಗಾಗಿ ಸಂಸ್ಕರಣಾಗಾರಗಳ ಅನೇಕ ಘಟಕಗಳನ್ನು ಕೇವಲ ಒಂದೇ ಘಟಕಗಳಿಗೆ ಮುಚ್ಚುವ ಹೆಚ್ಚಿನ ಅವಕಾಶಗಳಿವೆ. ಆದ್ದರಿಂದ ಇದು ದೇಶಾದ್ಯಂತ ಸಾವಿರಾರು ಜನರಿಗೆ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸ್ಕರಣಾಗಾರ ನೌಕರರ ಒಕ್ಕೂಟವನ್ನು ಪ್ರತಿನಿಧಿಸುವ ನಸೀಮುದ್ದೀನ್ ಎಸ್.ಕೆ ಹೇಳಿದರು.

ಬಿಪಿಸಿಎಲ್‌ ಖಾಸಗೀಕರಣವಾದರೆ ಮುಂದೆ ಹೊಸ ನೇಮಕಾತಿಗಳಿಗೆ ಅವಕಾಶಗಳಿರುವುದಿಲ್ಲ. ಕೇರಳದ ಕೊಚ್ಚಿ ಸಂಸ್ಕರಣಾಗಾರವು ಸಾರ್ವಜನಿಕ ವಲಯದ ಏಕೈಕ ಸಂಸ್ಥೆಯಾಗಿದೆ. ಅಲ್ಲಿ ಈಗಲೂ ಜನರನ್ನು ಸಕ್ರಿಯವಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಸಗೊಬ್ಬರ, ರಾಸಾಯನಿಕಗಳು ತಿರುವಾಂಕೂರು ಲಿಮಿಟೆಡ್ (ಫ್ಯಾಕ್ಟ್) ಮತ್ತು ಎಚ್‌ಎಂಟಿ ಲಿಮಿಟೆಡ್ ಸೇರಿದಂತೆ ಕೇರಳದ ಎಲ್ಲಾ ಸಾರ್ವಜನಿಕ ವಲಯದ ಕಂಪನಿಗಳು ನೇಮಕಾತಿಗಳಲ್ಲಿ ಸುಪ್ತ ಹಂತದ ಮೂಲಕ ಸಾಗುತ್ತಿವೆ ಎಂದು ಕೊಚ್ಚಿನ್ ರಿಫೈನರೀಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಪಿ ಹೇಳಿದರು.

ಕೊಚ್ಚಿ ಸಂಸ್ಕರಣಾಗಾರದಲ್ಲಿಅಲ್ಲಿನ ರಾಜ್ಯಸರ್ಕಾರ ಶೇ. 5 ಪಾಲನ್ನು ಹೊಂದಿದೆ. ಅದರಿಂದ ಫೀಡ್‌ಸ್ಟಾಕ್‌ಗಳನ್ನು ಪೆಟ್ರೋಕೆಮಿಕಲ್‌ ಪಾರ್ಕ್‌ ಸ್ಥಾಪಿಸಲು ಸರ್ಕಾರ ಇತ್ತೀಚೆಗೆ ಮನವಿ ಮುಂದಿಟ್ಟಿತ್ತು.   ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪೆಟ್ರೋಕೆಮಿಕಲ್ ಪಾರ್ಕ್‌ನಲ್ಲಿ 25 ಸಾವಿರ ಕೋಟಿ ರೂ.ಗಳ ಹೂಡಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಖಾಸಗೀಕರಣದಿಂದಾಗಿ ಬಿಪಿಸಿಎಲ್‌ ಹಾಗೂ ನೌಕರರನ್ನು ಇದು ಅನಿಶ್ಚಿತತೆಗೆ ದೂಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್  ಆತಂಕ ವ್ಯಕ್ತಪಡಿಸಿದ್ದಾರೆ.

2018-19ನೇ ಸಾಲಿನಲ್ಲಿ ಬಿಪಿಸಿಎಲ್ ನಿವ್ವಳ ಲಾಭ 7,802.30 ಕೋಟಿ ರೂ. ಆಗಿತ್ತು. ಅದರಲ್ಲಿ ಕಂಪನಿಯ ಒಟ್ಟು ಸಿಎಸ್ಆರ್ ಪಾಲು 177.94 ಕೋಟಿ ರೂ. ಆಗಿತ್ತು. ಕೇರಳದಲ್ಲಿ ಮಾತ್ರ ಬಿಪಿಸಿಎಲ್ ವಿವಿಧ ಸಿಎಸ್ಆರ್ ಉಪಕ್ರಮಗಳಿಗಾಗಿ ಒಟ್ಟು 24.75 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ 12.16 ಕೋಟಿ ರೂ. ನೀಡಿದೆ ಎಂದು ತಿಳಿದು ಬಂದಿದೆ.

ಈಗ ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಆಂದೋಲನವನ್ನಾಗಿ ಮಾಡಲು ನೌಕರರು ನಿರ್ಧರಿಸಿದ್ದಾರೆ. “ಇದು ಕೇವಲ ನಮ್ಮ ಉದ್ಯೋಗ ಮಾತ್ರವಲ್ಲ,  ಸಾಮಾಜಿಕ ನ್ಯಾಯದ ವಿಷಯ”ವೂ ಆಗಿದೆ. ಕಂಪನಿಯು ಖಾಸಗೀಕರಣಗೊಳಿಸಿದರೆ, ಮೀಸಲಾತಿ ಹಾಗೂ ಹುದ್ದೆಗಳ ವಿತರಣೆಯೂ ಇರುವುದಿಲ್ಲ. ಆದ್ದರಿಂದ ಜನ ರಾಜಕೀಯ ಸಂಬಂಧಗಳನ್ನು ಬಿಟ್ಟು, ಎಲ್ಲರೂ ಮುಕ್ತವಾಗಿ ಖಾಸಗೀಕರಣದ ವಿರುದ್ಧ ಒಂದಾಗುವುದು ಅತೀ ಮುಖ್ಯ ಎಂದು ಪ್ರವೀಣ್ ಕುಮಾರ್ ಹೇಳಿದರು.

ಇನ್ನು ನಷ್ಟದ ಕಾರಣಕ್ಕೆ ಮೋದಿ ಸರ್ಕಾರ ಬಿಪಿಸಿಎಲ್‌ ಮಾರಲು ಹೊರಟರೆ ಇನ್ನೊಂದು ಕಡೆ ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ಇದು ಹೇಗೆ ಸಾಧ್ಯ? ಸರ್ಕಾರಿ ಕಂಪನಿ ಮುಳುಗಿತ್ತಿದೆ, ಖಾಸಗಿ ಕಂಪನಿ ಬೆಳೆಯುತ್ತಿದೆ? ಇದರಲ್ಲಿ ಮೋದಿಯದು ಪಾತ್ರವಿಲ್ಲವೇ? ಎಂದು ಬಹಳಷ್ಟು ಜನ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...