Homeಮುಖಪುಟಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

- Advertisement -
- Advertisement -

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ್ನು ಖಾಸಗೀಕರಣಗೊಳಿಸುವ ಕ್ರಮಕ್ಕೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಂಪನಿಗೆ ಮಾರಾಟ ಮಾಡುವುದನ್ನು ವಿರೋಧಿಸಿ, ನೌಕರರು ದೇಶವ್ಯಾಪಿ ಮುಷ್ಕರ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

2020 ರ ಮಾರ್ಚ್ ವೇಳೆಗೆ ಬಿಪಿಸಿಎಲ್ ಅನ್ನು ಖಾಸಗಿ ಸಂಸ್ಥೆಗೆ ಮಾರಾಟ ಮಾಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಕೋಪಗೊಂಡಿರುವ ನೌಕರರು ದೇಶಾದ್ಯಂತ ನವೆಂಬರ್‌ 28 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ವಿಡಿಯೋ ನೋಡಿ:

ನವೆಂಬರ್ 25 ರಂದು ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ಬಿಪಿಸಿಎಲ್ ಅನ್ನು ಪೆಟ್ಟಾದಿಂದ ಕೊಚ್ಚಿಯ ಅಂಬಾಲಮುಗಲ್‌ಗೆ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಮೆರವಣಿಗೆ ನಡೆಸಲಿದ್ದಾರೆ. ಸಿಪಿಐ (ಎಂ) ನವೆಂಬರ್ 22 ರಂದು ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ಕೊಚ್ಚಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದೆ.

ಮುಂಬೈ, ಕೊಚ್ಚಿ, ಮಧ್ಯಪ್ರದೇಶದ ಬಿನಾ ಮತ್ತು ಅಸ್ಸಾಂನ ನುಮಾಲಿಗರ್‌ಲ್ಲಿ ಬಿಪಿಸಿಎಲ್‌ಗೆ ಸೇರಿದ 4 ಸಂಸ್ಕರಣಾಗಾರಗಳಿವೆ. ಇತರ ಸಂಬಂಧಿತ ಪೆಟ್ರೋಲ್-ಡೀಸೆಲ್ ಚಿಲ್ಲರೆ ಮಾರಾಟ ಮಳಿಗೆಗಳು, ಎಲ್‌ಪಿಜಿ ವಿತರಣಾ ಕೇಂದ್ರಗಳು ಮತ್ತು ಎಲ್‌ಪಿಜಿ ಬಾಟ್ಲಿಂಗ್ ಸ್ಥಾವರ ಹೊಂದಿರುವ ಬಿಪಿಸಿಎಲ್ ಒಟ್ಟು 12,000 ಖಾಯಂ ಉದ್ಯೋಗಿಗಳು ಮತ್ತು ಸಾವಿರಾರು ಗುತ್ತಿಗೆ ಸಿಬ್ಬಂದಿಗಳನ್ನು ಹೊಂದಿದೆ.

ಕೇರಳದಲ್ಲಿ ಮಾತ್ರ, ಕೊಚ್ಚಿಯ ಬಿಪಿಸಿಎಲ್ ಸಂಸ್ಕರಣಾಗಾರದಲ್ಲಿ, ಸುಮಾರು 2,500 ಖಾಯಂ ಸಿಬ್ಬಂದಿ ಮತ್ತು ಸುಮಾರು 6,000 ಗುತ್ತಿಗೆ ನೌಕರರಿದ್ದಾರೆ. ಜತೆಗೆ ಸಂಸ್ಕರಣಾಗಾರದ ವಿವಿಧ ಯೋಜನೆಗಳಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಏರ್ ಇಂಡಿಯಾದೊಂದಿಗೆ ಬಿಪಿಸಿಎಲ್ ಅನ್ನು ಮಾರಾಟ ಮಾಡುವುದರಿಂದ ಸರ್ಕಾರಕ್ಕೆ ಒಂದು ಲಕ್ಷ ಕೋಟಿ ರೂ. ನಷ್ಟ ಉಂಟಾಗುವ ಸಾಧ್ಯತೆಯಿದೆ. ಹೆಚ್ಚು ಲಾಭದಲ್ಲಿರುವ ಬಿಪಿಸಿಎಲ್ ಅನ್ನು ಖಾಸಗೀಕರಣಗೊಳಿಸುತ್ತಿರುವುದು ಆತಂಕವನ್ನುಂಟು ಮಾಡಿದೆ.

ಬಿಪಿಸಿಎಲ್ ಅನ್ನು ಖಾಸಗಿ ಕಂಪನಿಗೆ ಮಾರಿದರೆ ಉದ್ಯೋಗ ನಷ್ಟವಾಗುವ ಭೀತಿ ಹೆಚ್ಚಿದೆ. ವಿದೇಶಿ ಅಥವಾ ಬಹುರಾಷ್ಟ್ರೀಯ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ, ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಕೊಚ್ಚಿಯಲ್ಲಿರುವ ಬಿಪಿಸಿಎಲ್‌ನ ಸಂಸ್ಕರಣಾಗಾರಗಳು ಬಹು ಘಟಕಗಳಿಂದ ಕೂಡಿದೆ. ಬಹುರಾಷ್ಟ್ರೀಯ ತೈಲ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ ತಮ್ಮ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿಲ್ಲ. ಏಕೆಂದರೆ ಅವುಗಳು ಅಗತ್ಯಕ್ಕಿಂತ ಹೆಚ್ಚಿನ ಸ್ಟಾಕ್ ಹೊಂದಿವೆ. ಈಗ ನಿಜವಾಗಿ ಗುರಿ ಇಟ್ಟುಕೊಂಡಿರುವುದು ಭಾರತದ ಮಾರುಕಟ್ಟೆ ತೆರೆಯುವಿಕೆಯಲ್ಲಿ. ಹೀಗಾಗಿ ಸಂಸ್ಕರಣಾಗಾರಗಳ ಅನೇಕ ಘಟಕಗಳನ್ನು ಕೇವಲ ಒಂದೇ ಘಟಕಗಳಿಗೆ ಮುಚ್ಚುವ ಹೆಚ್ಚಿನ ಅವಕಾಶಗಳಿವೆ. ಆದ್ದರಿಂದ ಇದು ದೇಶಾದ್ಯಂತ ಸಾವಿರಾರು ಜನರಿಗೆ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸ್ಕರಣಾಗಾರ ನೌಕರರ ಒಕ್ಕೂಟವನ್ನು ಪ್ರತಿನಿಧಿಸುವ ನಸೀಮುದ್ದೀನ್ ಎಸ್.ಕೆ ಹೇಳಿದರು.

ಬಿಪಿಸಿಎಲ್‌ ಖಾಸಗೀಕರಣವಾದರೆ ಮುಂದೆ ಹೊಸ ನೇಮಕಾತಿಗಳಿಗೆ ಅವಕಾಶಗಳಿರುವುದಿಲ್ಲ. ಕೇರಳದ ಕೊಚ್ಚಿ ಸಂಸ್ಕರಣಾಗಾರವು ಸಾರ್ವಜನಿಕ ವಲಯದ ಏಕೈಕ ಸಂಸ್ಥೆಯಾಗಿದೆ. ಅಲ್ಲಿ ಈಗಲೂ ಜನರನ್ನು ಸಕ್ರಿಯವಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಸಗೊಬ್ಬರ, ರಾಸಾಯನಿಕಗಳು ತಿರುವಾಂಕೂರು ಲಿಮಿಟೆಡ್ (ಫ್ಯಾಕ್ಟ್) ಮತ್ತು ಎಚ್‌ಎಂಟಿ ಲಿಮಿಟೆಡ್ ಸೇರಿದಂತೆ ಕೇರಳದ ಎಲ್ಲಾ ಸಾರ್ವಜನಿಕ ವಲಯದ ಕಂಪನಿಗಳು ನೇಮಕಾತಿಗಳಲ್ಲಿ ಸುಪ್ತ ಹಂತದ ಮೂಲಕ ಸಾಗುತ್ತಿವೆ ಎಂದು ಕೊಚ್ಚಿನ್ ರಿಫೈನರೀಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಪಿ ಹೇಳಿದರು.

ಕೊಚ್ಚಿ ಸಂಸ್ಕರಣಾಗಾರದಲ್ಲಿಅಲ್ಲಿನ ರಾಜ್ಯಸರ್ಕಾರ ಶೇ. 5 ಪಾಲನ್ನು ಹೊಂದಿದೆ. ಅದರಿಂದ ಫೀಡ್‌ಸ್ಟಾಕ್‌ಗಳನ್ನು ಪೆಟ್ರೋಕೆಮಿಕಲ್‌ ಪಾರ್ಕ್‌ ಸ್ಥಾಪಿಸಲು ಸರ್ಕಾರ ಇತ್ತೀಚೆಗೆ ಮನವಿ ಮುಂದಿಟ್ಟಿತ್ತು.   ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪೆಟ್ರೋಕೆಮಿಕಲ್ ಪಾರ್ಕ್‌ನಲ್ಲಿ 25 ಸಾವಿರ ಕೋಟಿ ರೂ.ಗಳ ಹೂಡಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಖಾಸಗೀಕರಣದಿಂದಾಗಿ ಬಿಪಿಸಿಎಲ್‌ ಹಾಗೂ ನೌಕರರನ್ನು ಇದು ಅನಿಶ್ಚಿತತೆಗೆ ದೂಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್  ಆತಂಕ ವ್ಯಕ್ತಪಡಿಸಿದ್ದಾರೆ.

2018-19ನೇ ಸಾಲಿನಲ್ಲಿ ಬಿಪಿಸಿಎಲ್ ನಿವ್ವಳ ಲಾಭ 7,802.30 ಕೋಟಿ ರೂ. ಆಗಿತ್ತು. ಅದರಲ್ಲಿ ಕಂಪನಿಯ ಒಟ್ಟು ಸಿಎಸ್ಆರ್ ಪಾಲು 177.94 ಕೋಟಿ ರೂ. ಆಗಿತ್ತು. ಕೇರಳದಲ್ಲಿ ಮಾತ್ರ ಬಿಪಿಸಿಎಲ್ ವಿವಿಧ ಸಿಎಸ್ಆರ್ ಉಪಕ್ರಮಗಳಿಗಾಗಿ ಒಟ್ಟು 24.75 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ 12.16 ಕೋಟಿ ರೂ. ನೀಡಿದೆ ಎಂದು ತಿಳಿದು ಬಂದಿದೆ.

ಈಗ ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಆಂದೋಲನವನ್ನಾಗಿ ಮಾಡಲು ನೌಕರರು ನಿರ್ಧರಿಸಿದ್ದಾರೆ. “ಇದು ಕೇವಲ ನಮ್ಮ ಉದ್ಯೋಗ ಮಾತ್ರವಲ್ಲ,  ಸಾಮಾಜಿಕ ನ್ಯಾಯದ ವಿಷಯ”ವೂ ಆಗಿದೆ. ಕಂಪನಿಯು ಖಾಸಗೀಕರಣಗೊಳಿಸಿದರೆ, ಮೀಸಲಾತಿ ಹಾಗೂ ಹುದ್ದೆಗಳ ವಿತರಣೆಯೂ ಇರುವುದಿಲ್ಲ. ಆದ್ದರಿಂದ ಜನ ರಾಜಕೀಯ ಸಂಬಂಧಗಳನ್ನು ಬಿಟ್ಟು, ಎಲ್ಲರೂ ಮುಕ್ತವಾಗಿ ಖಾಸಗೀಕರಣದ ವಿರುದ್ಧ ಒಂದಾಗುವುದು ಅತೀ ಮುಖ್ಯ ಎಂದು ಪ್ರವೀಣ್ ಕುಮಾರ್ ಹೇಳಿದರು.

ಇನ್ನು ನಷ್ಟದ ಕಾರಣಕ್ಕೆ ಮೋದಿ ಸರ್ಕಾರ ಬಿಪಿಸಿಎಲ್‌ ಮಾರಲು ಹೊರಟರೆ ಇನ್ನೊಂದು ಕಡೆ ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ಇದು ಹೇಗೆ ಸಾಧ್ಯ? ಸರ್ಕಾರಿ ಕಂಪನಿ ಮುಳುಗಿತ್ತಿದೆ, ಖಾಸಗಿ ಕಂಪನಿ ಬೆಳೆಯುತ್ತಿದೆ? ಇದರಲ್ಲಿ ಮೋದಿಯದು ಪಾತ್ರವಿಲ್ಲವೇ? ಎಂದು ಬಹಳಷ್ಟು ಜನ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...