Homeಮುಖಪುಟಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

ಭಾರತ್ ಪೆಟ್ರೋಲಿಯಂ ಖಾಸಗೀಕರಣ: ಕೇಂದ್ರದ ನಿರ್ಧಾರದ ವಿರುದ್ಧ ನೌಕರರಿಂದ ಬೃಹತ್‌ ಮುಷ್ಕರಕ್ಕೆ ಸಿದ್ದತೆ

- Advertisement -
- Advertisement -

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ್ನು ಖಾಸಗೀಕರಣಗೊಳಿಸುವ ಕ್ರಮಕ್ಕೆ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ. ಖಾಸಗಿ ಕಂಪನಿಗೆ ಮಾರಾಟ ಮಾಡುವುದನ್ನು ವಿರೋಧಿಸಿ, ನೌಕರರು ದೇಶವ್ಯಾಪಿ ಮುಷ್ಕರ ಹಮ್ಮಿಕೊಳ್ಳುವುದಾಗಿ ತಿಳಿಸಿದ್ದಾರೆ.

2020 ರ ಮಾರ್ಚ್ ವೇಳೆಗೆ ಬಿಪಿಸಿಎಲ್ ಅನ್ನು ಖಾಸಗಿ ಸಂಸ್ಥೆಗೆ ಮಾರಾಟ ಮಾಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ಕೋಪಗೊಂಡಿರುವ ನೌಕರರು ದೇಶಾದ್ಯಂತ ನವೆಂಬರ್‌ 28 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸುವುದಾಗಿ ಹೇಳಿದ್ದಾರೆ.

ವಿಡಿಯೋ ನೋಡಿ:

ನವೆಂಬರ್ 25 ರಂದು ಕೇರಳದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿಥಾಲಾ ಅವರು ಬಿಪಿಸಿಎಲ್ ಅನ್ನು ಪೆಟ್ಟಾದಿಂದ ಕೊಚ್ಚಿಯ ಅಂಬಾಲಮುಗಲ್‌ಗೆ ಖಾಸಗೀಕರಣಗೊಳಿಸುವುದನ್ನು ವಿರೋಧಿಸಿ, ಮೆರವಣಿಗೆ ನಡೆಸಲಿದ್ದಾರೆ. ಸಿಪಿಐ (ಎಂ) ನವೆಂಬರ್ 22 ರಂದು ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ಕೊಚ್ಚಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಿದೆ.

ಮುಂಬೈ, ಕೊಚ್ಚಿ, ಮಧ್ಯಪ್ರದೇಶದ ಬಿನಾ ಮತ್ತು ಅಸ್ಸಾಂನ ನುಮಾಲಿಗರ್‌ಲ್ಲಿ ಬಿಪಿಸಿಎಲ್‌ಗೆ ಸೇರಿದ 4 ಸಂಸ್ಕರಣಾಗಾರಗಳಿವೆ. ಇತರ ಸಂಬಂಧಿತ ಪೆಟ್ರೋಲ್-ಡೀಸೆಲ್ ಚಿಲ್ಲರೆ ಮಾರಾಟ ಮಳಿಗೆಗಳು, ಎಲ್‌ಪಿಜಿ ವಿತರಣಾ ಕೇಂದ್ರಗಳು ಮತ್ತು ಎಲ್‌ಪಿಜಿ ಬಾಟ್ಲಿಂಗ್ ಸ್ಥಾವರ ಹೊಂದಿರುವ ಬಿಪಿಸಿಎಲ್ ಒಟ್ಟು 12,000 ಖಾಯಂ ಉದ್ಯೋಗಿಗಳು ಮತ್ತು ಸಾವಿರಾರು ಗುತ್ತಿಗೆ ಸಿಬ್ಬಂದಿಗಳನ್ನು ಹೊಂದಿದೆ.

ಕೇರಳದಲ್ಲಿ ಮಾತ್ರ, ಕೊಚ್ಚಿಯ ಬಿಪಿಸಿಎಲ್ ಸಂಸ್ಕರಣಾಗಾರದಲ್ಲಿ, ಸುಮಾರು 2,500 ಖಾಯಂ ಸಿಬ್ಬಂದಿ ಮತ್ತು ಸುಮಾರು 6,000 ಗುತ್ತಿಗೆ ನೌಕರರಿದ್ದಾರೆ. ಜತೆಗೆ ಸಂಸ್ಕರಣಾಗಾರದ ವಿವಿಧ ಯೋಜನೆಗಳಲ್ಲಿ ಸಾವಿರಾರು ಜನ ಕೆಲಸ ಮಾಡುತ್ತಿದ್ದಾರೆ. ವರದಿಗಳ ಪ್ರಕಾರ, ಏರ್ ಇಂಡಿಯಾದೊಂದಿಗೆ ಬಿಪಿಸಿಎಲ್ ಅನ್ನು ಮಾರಾಟ ಮಾಡುವುದರಿಂದ ಸರ್ಕಾರಕ್ಕೆ ಒಂದು ಲಕ್ಷ ಕೋಟಿ ರೂ. ನಷ್ಟ ಉಂಟಾಗುವ ಸಾಧ್ಯತೆಯಿದೆ. ಹೆಚ್ಚು ಲಾಭದಲ್ಲಿರುವ ಬಿಪಿಸಿಎಲ್ ಅನ್ನು ಖಾಸಗೀಕರಣಗೊಳಿಸುತ್ತಿರುವುದು ಆತಂಕವನ್ನುಂಟು ಮಾಡಿದೆ.

ಬಿಪಿಸಿಎಲ್ ಅನ್ನು ಖಾಸಗಿ ಕಂಪನಿಗೆ ಮಾರಿದರೆ ಉದ್ಯೋಗ ನಷ್ಟವಾಗುವ ಭೀತಿ ಹೆಚ್ಚಿದೆ. ವಿದೇಶಿ ಅಥವಾ ಬಹುರಾಷ್ಟ್ರೀಯ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ, ಸಾವಿರಾರು ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ಕೊಚ್ಚಿಯಲ್ಲಿರುವ ಬಿಪಿಸಿಎಲ್‌ನ ಸಂಸ್ಕರಣಾಗಾರಗಳು ಬಹು ಘಟಕಗಳಿಂದ ಕೂಡಿದೆ. ಬಹುರಾಷ್ಟ್ರೀಯ ತೈಲ ಕಂಪನಿಗಳು, ಬಿಪಿಸಿಎಲ್ ಅನ್ನು ಸ್ವಾಧೀನಪಡಿಸಿಕೊಂಡರೆ ತಮ್ಮ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಿಲ್ಲ. ಏಕೆಂದರೆ ಅವುಗಳು ಅಗತ್ಯಕ್ಕಿಂತ ಹೆಚ್ಚಿನ ಸ್ಟಾಕ್ ಹೊಂದಿವೆ. ಈಗ ನಿಜವಾಗಿ ಗುರಿ ಇಟ್ಟುಕೊಂಡಿರುವುದು ಭಾರತದ ಮಾರುಕಟ್ಟೆ ತೆರೆಯುವಿಕೆಯಲ್ಲಿ. ಹೀಗಾಗಿ ಸಂಸ್ಕರಣಾಗಾರಗಳ ಅನೇಕ ಘಟಕಗಳನ್ನು ಕೇವಲ ಒಂದೇ ಘಟಕಗಳಿಗೆ ಮುಚ್ಚುವ ಹೆಚ್ಚಿನ ಅವಕಾಶಗಳಿವೆ. ಆದ್ದರಿಂದ ಇದು ದೇಶಾದ್ಯಂತ ಸಾವಿರಾರು ಜನರಿಗೆ ಉದ್ಯೋಗ ನಷ್ಟಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಸಂಸ್ಕರಣಾಗಾರ ನೌಕರರ ಒಕ್ಕೂಟವನ್ನು ಪ್ರತಿನಿಧಿಸುವ ನಸೀಮುದ್ದೀನ್ ಎಸ್.ಕೆ ಹೇಳಿದರು.

ಬಿಪಿಸಿಎಲ್‌ ಖಾಸಗೀಕರಣವಾದರೆ ಮುಂದೆ ಹೊಸ ನೇಮಕಾತಿಗಳಿಗೆ ಅವಕಾಶಗಳಿರುವುದಿಲ್ಲ. ಕೇರಳದ ಕೊಚ್ಚಿ ಸಂಸ್ಕರಣಾಗಾರವು ಸಾರ್ವಜನಿಕ ವಲಯದ ಏಕೈಕ ಸಂಸ್ಥೆಯಾಗಿದೆ. ಅಲ್ಲಿ ಈಗಲೂ ಜನರನ್ನು ಸಕ್ರಿಯವಾಗಿ ಕೆಲಸಕ್ಕೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ರಸಗೊಬ್ಬರ, ರಾಸಾಯನಿಕಗಳು ತಿರುವಾಂಕೂರು ಲಿಮಿಟೆಡ್ (ಫ್ಯಾಕ್ಟ್) ಮತ್ತು ಎಚ್‌ಎಂಟಿ ಲಿಮಿಟೆಡ್ ಸೇರಿದಂತೆ ಕೇರಳದ ಎಲ್ಲಾ ಸಾರ್ವಜನಿಕ ವಲಯದ ಕಂಪನಿಗಳು ನೇಮಕಾತಿಗಳಲ್ಲಿ ಸುಪ್ತ ಹಂತದ ಮೂಲಕ ಸಾಗುತ್ತಿವೆ ಎಂದು ಕೊಚ್ಚಿನ್ ರಿಫೈನರೀಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಪಿ ಹೇಳಿದರು.

ಕೊಚ್ಚಿ ಸಂಸ್ಕರಣಾಗಾರದಲ್ಲಿಅಲ್ಲಿನ ರಾಜ್ಯಸರ್ಕಾರ ಶೇ. 5 ಪಾಲನ್ನು ಹೊಂದಿದೆ. ಅದರಿಂದ ಫೀಡ್‌ಸ್ಟಾಕ್‌ಗಳನ್ನು ಪೆಟ್ರೋಕೆಮಿಕಲ್‌ ಪಾರ್ಕ್‌ ಸ್ಥಾಪಿಸಲು ಸರ್ಕಾರ ಇತ್ತೀಚೆಗೆ ಮನವಿ ಮುಂದಿಟ್ಟಿತ್ತು.   ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಪೆಟ್ರೋಕೆಮಿಕಲ್ ಪಾರ್ಕ್‌ನಲ್ಲಿ 25 ಸಾವಿರ ಕೋಟಿ ರೂ.ಗಳ ಹೂಡಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಖಾಸಗೀಕರಣದಿಂದಾಗಿ ಬಿಪಿಸಿಎಲ್‌ ಹಾಗೂ ನೌಕರರನ್ನು ಇದು ಅನಿಶ್ಚಿತತೆಗೆ ದೂಡಲಿದೆ ಎಂದು ಸಿಎಂ ಪಿಣರಾಯಿ ವಿಜಯನ್  ಆತಂಕ ವ್ಯಕ್ತಪಡಿಸಿದ್ದಾರೆ.

2018-19ನೇ ಸಾಲಿನಲ್ಲಿ ಬಿಪಿಸಿಎಲ್ ನಿವ್ವಳ ಲಾಭ 7,802.30 ಕೋಟಿ ರೂ. ಆಗಿತ್ತು. ಅದರಲ್ಲಿ ಕಂಪನಿಯ ಒಟ್ಟು ಸಿಎಸ್ಆರ್ ಪಾಲು 177.94 ಕೋಟಿ ರೂ. ಆಗಿತ್ತು. ಕೇರಳದಲ್ಲಿ ಮಾತ್ರ ಬಿಪಿಸಿಎಲ್ ವಿವಿಧ ಸಿಎಸ್ಆರ್ ಉಪಕ್ರಮಗಳಿಗಾಗಿ ಒಟ್ಟು 24.75 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಶಿಕ್ಷಣ ಕ್ಷೇತ್ರಕ್ಕೆ 12.16 ಕೋಟಿ ರೂ. ನೀಡಿದೆ ಎಂದು ತಿಳಿದು ಬಂದಿದೆ.

ಈಗ ಬಿಪಿಸಿಎಲ್ ಖಾಸಗೀಕರಣದ ವಿರುದ್ಧ ನಡೆಸಲು ತೀರ್ಮಾನಿಸಿರುವ ಪ್ರತಿಭಟನೆಯನ್ನು ಆಂದೋಲನವನ್ನಾಗಿ ಮಾಡಲು ನೌಕರರು ನಿರ್ಧರಿಸಿದ್ದಾರೆ. “ಇದು ಕೇವಲ ನಮ್ಮ ಉದ್ಯೋಗ ಮಾತ್ರವಲ್ಲ,  ಸಾಮಾಜಿಕ ನ್ಯಾಯದ ವಿಷಯ”ವೂ ಆಗಿದೆ. ಕಂಪನಿಯು ಖಾಸಗೀಕರಣಗೊಳಿಸಿದರೆ, ಮೀಸಲಾತಿ ಹಾಗೂ ಹುದ್ದೆಗಳ ವಿತರಣೆಯೂ ಇರುವುದಿಲ್ಲ. ಆದ್ದರಿಂದ ಜನ ರಾಜಕೀಯ ಸಂಬಂಧಗಳನ್ನು ಬಿಟ್ಟು, ಎಲ್ಲರೂ ಮುಕ್ತವಾಗಿ ಖಾಸಗೀಕರಣದ ವಿರುದ್ಧ ಒಂದಾಗುವುದು ಅತೀ ಮುಖ್ಯ ಎಂದು ಪ್ರವೀಣ್ ಕುಮಾರ್ ಹೇಳಿದರು.

ಇನ್ನು ನಷ್ಟದ ಕಾರಣಕ್ಕೆ ಮೋದಿ ಸರ್ಕಾರ ಬಿಪಿಸಿಎಲ್‌ ಮಾರಲು ಹೊರಟರೆ ಇನ್ನೊಂದು ಕಡೆ ಏಷ್ಯಾದ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಈಗ ವಿಶ್ವದ 6 ನೇ ಅತಿದೊಡ್ಡ ತೈಲ ಕಂಪನಿಯಾಗಿ ಬೆಳೆದು ನಿಂತಿದೆ.

ಮಂಗಳವಾರದ ವಹಿವಾಟಿನ ಮುಕ್ತಾಯದ ವೇಳೆ, ಬ್ರಿಟಿಷ್ ಎನರ್ಜಿ ಜೈಂಟ್ಸ್‌ನದು 132 ಬಿಲಿಯನ್ ಡಾಲರ್‌ ಮೌಲ್ಯವಿದ್ದರೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮೌಲ್ಯ 138 ಬಿಲಿಯನ್ ಡಾಲರ್‌ಗೇರಿದೆ. ಈ ಮೂಲಕ ರಿಲಯನ್ಸ್‌ $138 ಬಿಲಿಯನ್ ತಲುಪಿದ ಮೊದಲ ಭಾರತೀಯ ಕಂಪನಿ ಆಗಿದೆ.

ಇದು ಹೇಗೆ ಸಾಧ್ಯ? ಸರ್ಕಾರಿ ಕಂಪನಿ ಮುಳುಗಿತ್ತಿದೆ, ಖಾಸಗಿ ಕಂಪನಿ ಬೆಳೆಯುತ್ತಿದೆ? ಇದರಲ್ಲಿ ಮೋದಿಯದು ಪಾತ್ರವಿಲ್ಲವೇ? ಎಂದು ಬಹಳಷ್ಟು ಜನ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...