Homeಕರ್ನಾಟಕಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ‘ದಿ ನ್ಯೂಸ್ ಮಿನಿಟ್’ ಸಂಪಾದಕಿ ಧನ್ಯ ರಾಜೇಂದ್ರನ್, ಚಿಂತಕ ಶಿವಸುಂದರ್, ಪತ್ರಕರ್ತ ನವೀನ್ ಸೂರಿಂಜೆ ಭಾಗವಹಿಸಲಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಹೊಸ ‘ಇಂಟರ್ನೆಟ್ ನಿಯಂತ್ರಣ’ ಕಾಯ್ದೆಗಳು, ಮಾಧ್ಯಮ ಸ್ವಾತಂತ್ರ್ಯ ಹಾಗು ಓದುಗರ ತಿಳಿದುಕೊಳ್ಳುವ ಹಕ್ಕಿಗೆ ಧಕ್ಕೆಯಾಗುತ್ತದೆ ಎಂದು ಆರೋಪಿಸಿರುವ ‘ಆಲ್‌ ಇಂಡಿಯಾ ಪೀಪಲ್ಸ್ ಫಾರಂ (AIPF)’, ಈ ವಿಷಯದ ಬಗ್ಗೆ ಚರ್ಚಿಸಲು ಬುಧವಾರ ಬೆಂಗಳೂರಿನ ಕೆಆ‌ರ್‌ ವೃತ್ತದ ಬಳಿಯ ಯುವಿಸಿಇ ಅಲುಮ್ನಿ ಅಸೋಷಿಯೇಶನ್‌‌ನಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿದೆ.

ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ‘ದಿ ನ್ಯೂಸ್ ಮಿನಿಟ್’ ಸಂಪಾದಕಿ ಧನ್ಯ ರಾಜೇಂದ್ರನ್, ಚಿಂತಕ ಶಿವಸುಂದರ್, ಪತ್ರಕರ್ತ ನವೀನ್ ಸೂರಿಂಜೆ ಭಾಗವಹಿಸಲಿದ್ದು, AIPF ನ ವಕೀಲರಾದ ಅವನಿ‌ ಚೋಕ್ಷಿ ಸಮನ್ವಯಕಾರರಾಗಿ ಇರಲಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

“ಹತ್ರಾಸ್‌ನಲ್ಲಿ ನಡೆದ ದೌರ್ಜನ್ಯಕ್ಕೆ ನಾವೆಲ್ಲ ಪ್ರತಿಭಟಿಸಿದೆವು. ದೂರದ ರಾಜ್ಯದ ಕುಗ್ರಾಮವೊಂದರ ಆ ಫಟನೆ‌ ನಮಗೆ ತಿಳಿದಿದ್ದು ಆನ್‌ಲೈನ್‌ ನ್ಯೂಸ್ ವೆಬ್‌ಸೈಟ್ ಒಂದರ ಮೂಲಕವಾಗಿದೆ. ಅಂತಹ ಸುದ್ದಿಯ ನಮಗೆ‌ ನಾಳೆ ಸಿಕ್ಕಿಲ್ಲ ಎಂದರೆ ಹೇಗಿರಬಹುದು ? ಆ ದಿವಸ ದೂರ ಇಲ್ಲ” ಎಂದು AIPF ಆತಂಕ ವ್ಯಕ್ತಪಡಿಸಿದೆ.

ಕಳೆದ ಫೆಬ್ರವರಿ ತಿಂಗಳಲ್ಲಿ ಕೇಂದ್ರ ಸರ್ಕಾರವು ‘ಇಂಟರ್‌ನೆಟ್ ನಿಯಂತ್ರಣ’ದ ಹೆಸರಿನಲ್ಲಿ ಆನ್‌ಲೈನ್ ಮಾಧ್ಯಮಗಳಲ್ಲಿನ ವರದಿಗಳನ್ನು ತಡೆಯಲು, ಯಾವುದೆ ಚರ್ಚೆಯಿಲ್ಲದೆ ಹೊಸ ಕಾಯ್ದೆ ತರಲು ಯೋಚಿಸುತ್ತಿದೆ.

“ಮಾಧ್ಯಮಗಳಿಗೆ ಸಂಬಂಧವಿಲ್ಲದ ‘ಮಾಹಿತಿ ತಂತ್ರಜ್ಞಾನ ಕಾಯ್ದೆ’ ಅಡಿಯಲ್ಲಿ ಸಂವಿಧಾನ ಬಾಹಿರ ನಿಯಮಗಳನ್ನು ತಂದು ಸರ್ಕಾರ ಈ ಹುನ್ನಾರಕ್ಕೆ ಇಳಿದಿದೆ. ಇದು ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದೆ. ಹೀಗೆ ಆದರೆ ಧೈರ್ಯವುಳ್ಳ ಸ್ವತಂತ್ರ ಮಾಧ್ಯಮಗಳು ಸರ್ಕಾರದ ವೈಫಲ್ಯಗಳ ಬಗ್ಗೆ ಮಾಡಿದ ವರದಿಗಳನ್ನು ಸರ್ಕಾರವೆ ಅದನ್ನು‌ ಸುಲಭವಾಗಿ ಕಿತ್ತಹಾಕಬಹುದು” ಎಂದು AIPF ಆರೋಪಿಸಿದೆ.

“ಸುಪ್ರೀಂಕೋರ್ಟ್‌, ಸಂವಿಧಾನದ‌ ಕಲಂ 19 ರ ವಾಕ್ ಸ್ವಾತಂತ್ರ್ಯವು ಮೂಲಭೂತ ಹಕ್ಕೆಂದು ಸ್ಪಷ್ಟವಾಗಿ ಹೇಳಿದೆ. ವಾಕ್‌ಸ್ವಾತಂತ್ಯ್ರದ ಜೊತೆಗೆ ಮಾಹಿತಿ ಪಡೆಯುವ ಹಕ್ಕು ಕೂಡಾ ಮೂಲಭೂತ ಹಕ್ಕಾಗಿದೆ. ಪ್ರಸ್ತುತ ಮಸೂದೆಯು ನಮ್ಮಿಂದ ಮಾಹಿತಿಯಿಂದ ಹಾಗೂ ನಿಜಾಂಶಗಳಿಂದ ದೂರು ಇಡಲು ಹೊರಟಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ದುರಾಡಳಿತ ಬಗ್ಗೆ ತಿಳಿಯುವುದೇ ಕಷ್ಟವಗುತ್ತದೆ” ಎಂದು AIPF ಹೇಳಿದ್ದು, ಸಾರ್ವಜನಿಕ ಸಭೆಯಲ್ಲಿ ಹೆಚ್ಚಿನ ಜನರು ಭಾಗವಹಿಸುವಂತೆ ಕೇಳಿಕೊಂಡಿದೆ.


ಇದನ್ನೂ ಓದಿ: ಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...