Homeಕರ್ನಾಟಕಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ಕೇಂದ್ರದ ಇಂಟರ್ನೆಟ್ ನಿಯಂತ್ರಣ: ಮಾಧ್ಯಮ ಸ್ವಾತಂತ್ಯ್ರ & ಮಾಹಿತಿ ಹಕ್ಕಿಗೆ ಧಕ್ಕೆ

ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ‘ದಿ ನ್ಯೂಸ್ ಮಿನಿಟ್’ ಸಂಪಾದಕಿ ಧನ್ಯ ರಾಜೇಂದ್ರನ್, ಚಿಂತಕ ಶಿವಸುಂದರ್, ಪತ್ರಕರ್ತ ನವೀನ್ ಸೂರಿಂಜೆ ಭಾಗವಹಿಸಲಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಹೊಸ ‘ಇಂಟರ್ನೆಟ್ ನಿಯಂತ್ರಣ’ ಕಾಯ್ದೆಗಳು, ಮಾಧ್ಯಮ ಸ್ವಾತಂತ್ರ್ಯ ಹಾಗು ಓದುಗರ ತಿಳಿದುಕೊಳ್ಳುವ ಹಕ್ಕಿಗೆ ಧಕ್ಕೆಯಾಗುತ್ತದೆ ಎಂದು ಆರೋಪಿಸಿರುವ ‘ಆಲ್‌ ಇಂಡಿಯಾ ಪೀಪಲ್ಸ್ ಫಾರಂ (AIPF)’, ಈ ವಿಷಯದ ಬಗ್ಗೆ ಚರ್ಚಿಸಲು ಬುಧವಾರ ಬೆಂಗಳೂರಿನ ಕೆಆ‌ರ್‌ ವೃತ್ತದ ಬಳಿಯ ಯುವಿಸಿಇ ಅಲುಮ್ನಿ ಅಸೋಷಿಯೇಶನ್‌‌ನಲ್ಲಿ ಸಾರ್ವಜನಿಕ ಸಭೆಯನ್ನು ಆಯೋಜಿಸಿದೆ.

ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ, ‘ದಿ ನ್ಯೂಸ್ ಮಿನಿಟ್’ ಸಂಪಾದಕಿ ಧನ್ಯ ರಾಜೇಂದ್ರನ್, ಚಿಂತಕ ಶಿವಸುಂದರ್, ಪತ್ರಕರ್ತ ನವೀನ್ ಸೂರಿಂಜೆ ಭಾಗವಹಿಸಲಿದ್ದು, AIPF ನ ವಕೀಲರಾದ ಅವನಿ‌ ಚೋಕ್ಷಿ ಸಮನ್ವಯಕಾರರಾಗಿ ಇರಲಿದ್ದಾರೆ.

ಇದನ್ನೂ ಓದಿ: `ಡಿಜಿಟಲ್ ಕಂಟೆಂಟ್’ ‌ನಿಯಂತ್ರಣಕ್ಕೆ ಕೇಂದ್ರದ ’ಭಯಾನಕ’ ನಿಯಮಗಳು!

“ಹತ್ರಾಸ್‌ನಲ್ಲಿ ನಡೆದ ದೌರ್ಜನ್ಯಕ್ಕೆ ನಾವೆಲ್ಲ ಪ್ರತಿಭಟಿಸಿದೆವು. ದೂರದ ರಾಜ್ಯದ ಕುಗ್ರಾಮವೊಂದರ ಆ ಫಟನೆ‌ ನಮಗೆ ತಿಳಿದಿದ್ದು ಆನ್‌ಲೈನ್‌ ನ್ಯೂಸ್ ವೆಬ್‌ಸೈಟ್ ಒಂದರ ಮೂಲಕವಾಗಿದೆ. ಅಂತಹ ಸುದ್ದಿಯ ನಮಗೆ‌ ನಾಳೆ ಸಿಕ್ಕಿಲ್ಲ ಎಂದರೆ ಹೇಗಿರಬಹುದು ? ಆ ದಿವಸ ದೂರ ಇಲ್ಲ” ಎಂದು AIPF ಆತಂಕ ವ್ಯಕ್ತಪಡಿಸಿದೆ.

ಕಳೆದ ಫೆಬ್ರವರಿ ತಿಂಗಳಲ್ಲಿ ಕೇಂದ್ರ ಸರ್ಕಾರವು ‘ಇಂಟರ್‌ನೆಟ್ ನಿಯಂತ್ರಣ’ದ ಹೆಸರಿನಲ್ಲಿ ಆನ್‌ಲೈನ್ ಮಾಧ್ಯಮಗಳಲ್ಲಿನ ವರದಿಗಳನ್ನು ತಡೆಯಲು, ಯಾವುದೆ ಚರ್ಚೆಯಿಲ್ಲದೆ ಹೊಸ ಕಾಯ್ದೆ ತರಲು ಯೋಚಿಸುತ್ತಿದೆ.

“ಮಾಧ್ಯಮಗಳಿಗೆ ಸಂಬಂಧವಿಲ್ಲದ ‘ಮಾಹಿತಿ ತಂತ್ರಜ್ಞಾನ ಕಾಯ್ದೆ’ ಅಡಿಯಲ್ಲಿ ಸಂವಿಧಾನ ಬಾಹಿರ ನಿಯಮಗಳನ್ನು ತಂದು ಸರ್ಕಾರ ಈ ಹುನ್ನಾರಕ್ಕೆ ಇಳಿದಿದೆ. ಇದು ಪ್ರಜಾಪ್ರಭುತ್ವ ವಿರೋಧಿ ದೋರಣೆಯಾಗಿದೆ. ಹೀಗೆ ಆದರೆ ಧೈರ್ಯವುಳ್ಳ ಸ್ವತಂತ್ರ ಮಾಧ್ಯಮಗಳು ಸರ್ಕಾರದ ವೈಫಲ್ಯಗಳ ಬಗ್ಗೆ ಮಾಡಿದ ವರದಿಗಳನ್ನು ಸರ್ಕಾರವೆ ಅದನ್ನು‌ ಸುಲಭವಾಗಿ ಕಿತ್ತಹಾಕಬಹುದು” ಎಂದು AIPF ಆರೋಪಿಸಿದೆ.

“ಸುಪ್ರೀಂಕೋರ್ಟ್‌, ಸಂವಿಧಾನದ‌ ಕಲಂ 19 ರ ವಾಕ್ ಸ್ವಾತಂತ್ರ್ಯವು ಮೂಲಭೂತ ಹಕ್ಕೆಂದು ಸ್ಪಷ್ಟವಾಗಿ ಹೇಳಿದೆ. ವಾಕ್‌ಸ್ವಾತಂತ್ಯ್ರದ ಜೊತೆಗೆ ಮಾಹಿತಿ ಪಡೆಯುವ ಹಕ್ಕು ಕೂಡಾ ಮೂಲಭೂತ ಹಕ್ಕಾಗಿದೆ. ಪ್ರಸ್ತುತ ಮಸೂದೆಯು ನಮ್ಮಿಂದ ಮಾಹಿತಿಯಿಂದ ಹಾಗೂ ನಿಜಾಂಶಗಳಿಂದ ದೂರು ಇಡಲು ಹೊರಟಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸರ್ಕಾರದ ದುರಾಡಳಿತ ಬಗ್ಗೆ ತಿಳಿಯುವುದೇ ಕಷ್ಟವಗುತ್ತದೆ” ಎಂದು AIPF ಹೇಳಿದ್ದು, ಸಾರ್ವಜನಿಕ ಸಭೆಯಲ್ಲಿ ಹೆಚ್ಚಿನ ಜನರು ಭಾಗವಹಿಸುವಂತೆ ಕೇಳಿಕೊಂಡಿದೆ.


ಇದನ್ನೂ ಓದಿ: ಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...