Homeಕರೋನಾ ತಲ್ಲಣಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ, ಕುಂಭಮೇಳದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಭಾನುವಾರ ಉತ್ತರಾಖಂಡ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕುಂಭಮೇಳದ ಸಂದರ್ಭದಲ್ಲಿ ದೇಶಾದ್ಯಂತದ ಯಾತ್ರಾರ್ಥಿಗಳು ಉತ್ತರಾಖಂಡಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ತಿಳಿಸಿದೆ, ಕುಂಭಮೇಳದಲ್ಲಿ ವೈದ್ಯಕೀಯ ಆರೈಕೆ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳನ್ನು ಪರಿಶೀಲಿಸಲು ಹೋಗಿದ್ದ ಉನ್ನತ ಮಟ್ಟದ ತಂಡವು ಕಳವಳ ವ್ಯಕ್ತಪಡಿಸಿದ ನಂತರ ಕೇಂದ್ರ ಈ ಕ್ರಮ ಕೈಗೊಂಡಿದೆ.

“ಕೇಂದ್ರ ತಂಡದ ವರದಿಯ ಪ್ರಕಾರ, ಪ್ರತಿದಿನ 10-20 ಯಾತ್ರಿಕರು ಮತ್ತು 10-20 ಸ್ಥಳೀಯರು ಕೊರೊನಾ ಸೋಂಕಿತರಾಗುತ್ತಿದ್ದಾರೆ ಎಂದು ವರದಿಯಾಗುತ್ತಿದೆ ಎಂದು ಕಾರ್ಯದರ್ಶಿ ತಿಳಿಸಿದ್ದಾರೆ. ಈ ಸೋಂಕಿತರ ಪ್ರಮಾಣವು ಕುಂಭಮೇಳದಲ್ಲಿ ಅತೀ ವೇಗವಾಗಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಚಿವಾಲಯ ತಿಳಿಸಿದೆ.

ತಂಡದ ವರದಿ ಆಧಾರದ ಮೇಲೆ, ಯಾತ್ರಾರ್ಥಿಗಳು ಮತ್ತು ಸ್ಥಳೀಯ ಜನಸಂಖ್ಯೆಯನ್ನು ಸೂಕ್ತವಾಗಿ ಪರೀಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ ಕೊರೊನಾ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ಉತ್ತರಾಖಂಡವನ್ನು ಕೋರಲಾಗಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಲಸಿಕೆ ಪಡೆದ ಎರಡೇ ದಿನದಲ್ಲಿ ಕೊರೊನಾ ಪಾಸಿಟಿವ್‌ ಆದ ಪಾಕಿಸ್ತಾನ ಪ್ರಧಾನಿ

ಕುಂಭಮೇಳದಲ್ಲಿ ಶುಭ ಸ್ನಾನದ ಮೊದಲು ಮತ್ತು ನಂತರ ಫ್ರಂಟ್ ಲೈನ್ ಕಾರ್ಯಕರ್ತರಿಗೆ ನಿಯಮಿತ ಕೊರೊನಾ ಪರೀಕ್ಷೆ, ಹೆಚ್ಚಿನ ಜನನಿಭೀಡ ಪ್ರದೇಶಗಳಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಉತ್ತರಾಖಂಡ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಪ್ರಸ್ತುತ ಭಾರತದಲ್ಲಿ 12 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕುಂಭಮೇಳದಲ್ಲಿ ಈ ರಾಜ್ಯಗಳಿಂದಲೂ ಹರಿದ್ವಾರಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿರಬಹುದು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

“ಕುಂಭಮೇಳದಲ್ಲಿ ಶುಭ ಶಾಹಿ ಸ್ನಾನದ ದಿನಗಳ ನಂತರ ಸ್ಥಳೀಯ ಜನಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಗಮನಿಸಲಾಗಿದೆ” ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹರಿದ್ವಾರದಲ್ಲಿ ಪ್ರತಿದಿನ 50,000 ರಾಪಿಡ್ ಆಂಟಿಜೆನ್ ಪರೀಕ್ಷೆಗಳು ಮತ್ತು 5,000 ಆರ್‌ಟಿಪಿಸಿಆರ್ ಪರೀಕ್ಷೆಗಳು ನಡೆಸಲಾಗುತ್ತಿದ್ದು, ಕುಂಭಮೇಳದಲ್ಲಿ ಅಪಾರ ಸಂಖ್ಯೆಯ ಯಾತ್ರಾರ್ಥಿಗಳು ಬರುವ ನಿರೀಕ್ಷೆ ಇರುವುದರಿಂದ ಇದು ಸಾಕಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದೆ. ಪ್ರಸ್ತುತ ಯಾತ್ರಾರ್ಥಿಗಳು ಮತ್ತು ಸ್ಥಳೀಯ ಜನಸಂಖ್ಯೆಯನ್ನು ಸೂಕ್ತವಾಗಿ ಪರೀಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಗಮನಾರ್ಹವಾಗಿ ಹೆಚ್ಚಿಸುವ ಅಗತ್ಯವಿದೆ ಎಂದು ಸಚಿವಾಲಯದ  ಟಿಪ್ಪಣಿ ತಿಳಿಸಿದೆ.


ಇದನ್ನೂ ಓದಿ: ಕೇಂದ್ರ ಅನುಮತಿಸಿದರೆ, ದೆಹಲಿಯ ಎಲ್ಲರಿಗೂ 3 ತಿಂಗಳಲ್ಲಿ ಕೊರೊನಾ ಲಸಿಕೆ – ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....