Homeಕರೋನಾ ತಲ್ಲಣಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

ಪ್ರತಿದಿನ 10-20 ಕೊರೊನಾ ಪ್ರಕರಣಗಳು: ಕುಂಭಮೇಳದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಕೇಂದ್ರದ ಸೂಚನೆ

- Advertisement -
- Advertisement -

ಕಳೆದ ಕೆಲವು ವಾರಗಳಲ್ಲಿ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾವೈರಸ್ ಸೋಂಕಿನ ಹಿನ್ನೆಲೆಯಲ್ಲಿ, ಕುಂಭಮೇಳದಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಭಾನುವಾರ ಉತ್ತರಾಖಂಡ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕುಂಭಮೇಳದ ಸಂದರ್ಭದಲ್ಲಿ ದೇಶಾದ್ಯಂತದ ಯಾತ್ರಾರ್ಥಿಗಳು ಉತ್ತರಾಖಂಡಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ತಿಳಿಸಿದೆ, ಕುಂಭಮೇಳದಲ್ಲಿ ವೈದ್ಯಕೀಯ ಆರೈಕೆ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಗಳನ್ನು ಪರಿಶೀಲಿಸಲು ಹೋಗಿದ್ದ ಉನ್ನತ ಮಟ್ಟದ ತಂಡವು ಕಳವಳ ವ್ಯಕ್ತಪಡಿಸಿದ ನಂತರ ಕೇಂದ್ರ ಈ ಕ್ರಮ ಕೈಗೊಂಡಿದೆ.

“ಕೇಂದ್ರ ತಂಡದ ವರದಿಯ ಪ್ರಕಾರ, ಪ್ರತಿದಿನ 10-20 ಯಾತ್ರಿಕರು ಮತ್ತು 10-20 ಸ್ಥಳೀಯರು ಕೊರೊನಾ ಸೋಂಕಿತರಾಗುತ್ತಿದ್ದಾರೆ ಎಂದು ವರದಿಯಾಗುತ್ತಿದೆ ಎಂದು ಕಾರ್ಯದರ್ಶಿ ತಿಳಿಸಿದ್ದಾರೆ. ಈ ಸೋಂಕಿತರ ಪ್ರಮಾಣವು ಕುಂಭಮೇಳದಲ್ಲಿ ಅತೀ ವೇಗವಾಗಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಚಿವಾಲಯ ತಿಳಿಸಿದೆ.

ತಂಡದ ವರದಿ ಆಧಾರದ ಮೇಲೆ, ಯಾತ್ರಾರ್ಥಿಗಳು ಮತ್ತು ಸ್ಥಳೀಯ ಜನಸಂಖ್ಯೆಯನ್ನು ಸೂಕ್ತವಾಗಿ ಪರೀಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ ಕೊರೊನಾ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ಉತ್ತರಾಖಂಡವನ್ನು ಕೋರಲಾಗಿದೆ ಎಂದು ಆರೋಗ್ಯ ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಲಸಿಕೆ ಪಡೆದ ಎರಡೇ ದಿನದಲ್ಲಿ ಕೊರೊನಾ ಪಾಸಿಟಿವ್‌ ಆದ ಪಾಕಿಸ್ತಾನ ಪ್ರಧಾನಿ

ಕುಂಭಮೇಳದಲ್ಲಿ ಶುಭ ಸ್ನಾನದ ಮೊದಲು ಮತ್ತು ನಂತರ ಫ್ರಂಟ್ ಲೈನ್ ಕಾರ್ಯಕರ್ತರಿಗೆ ನಿಯಮಿತ ಕೊರೊನಾ ಪರೀಕ್ಷೆ, ಹೆಚ್ಚಿನ ಜನನಿಭೀಡ ಪ್ರದೇಶಗಳಲ್ಲಿ ಪರೀಕ್ಷೆಗಳನ್ನು ನಡೆಸುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಉತ್ತರಾಖಂಡ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ನಿರ್ದೇಶಿಸಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಪ್ರಸ್ತುತ ಭಾರತದಲ್ಲಿ 12 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಕುಂಭಮೇಳದಲ್ಲಿ ಈ ರಾಜ್ಯಗಳಿಂದಲೂ ಹರಿದ್ವಾರಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿರಬಹುದು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

“ಕುಂಭಮೇಳದಲ್ಲಿ ಶುಭ ಶಾಹಿ ಸ್ನಾನದ ದಿನಗಳ ನಂತರ ಸ್ಥಳೀಯ ಜನಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಗಮನಿಸಲಾಗಿದೆ” ಎಂದು ಆರೋಗ್ಯ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹರಿದ್ವಾರದಲ್ಲಿ ಪ್ರತಿದಿನ 50,000 ರಾಪಿಡ್ ಆಂಟಿಜೆನ್ ಪರೀಕ್ಷೆಗಳು ಮತ್ತು 5,000 ಆರ್‌ಟಿಪಿಸಿಆರ್ ಪರೀಕ್ಷೆಗಳು ನಡೆಸಲಾಗುತ್ತಿದ್ದು, ಕುಂಭಮೇಳದಲ್ಲಿ ಅಪಾರ ಸಂಖ್ಯೆಯ ಯಾತ್ರಾರ್ಥಿಗಳು ಬರುವ ನಿರೀಕ್ಷೆ ಇರುವುದರಿಂದ ಇದು ಸಾಕಾಗುವುದಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಲಾಗಿದೆ. ಪ್ರಸ್ತುತ ಯಾತ್ರಾರ್ಥಿಗಳು ಮತ್ತು ಸ್ಥಳೀಯ ಜನಸಂಖ್ಯೆಯನ್ನು ಸೂಕ್ತವಾಗಿ ಪರೀಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಐಸಿಎಂಆರ್ ಮಾರ್ಗಸೂಚಿಗಳ ಪ್ರಕಾರ ಆರ್‌ಟಿಪಿಸಿಆರ್ ಪರೀಕ್ಷೆಗಳನ್ನು ಗಮನಾರ್ಹವಾಗಿ ಹೆಚ್ಚಿಸುವ ಅಗತ್ಯವಿದೆ ಎಂದು ಸಚಿವಾಲಯದ  ಟಿಪ್ಪಣಿ ತಿಳಿಸಿದೆ.


ಇದನ್ನೂ ಓದಿ: ಕೇಂದ್ರ ಅನುಮತಿಸಿದರೆ, ದೆಹಲಿಯ ಎಲ್ಲರಿಗೂ 3 ತಿಂಗಳಲ್ಲಿ ಕೊರೊನಾ ಲಸಿಕೆ – ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...