Homeಕರ್ನಾಟಕಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಗುರುವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ. ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಸಂಬಂಧಪಟ್ಟ ಸಚಿವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

”ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಶಾ-ಸಿದ್ದು ಭೇಟಿ ವೇಳೆ ಅಕ್ಕಿ ವಿಚಾರ ಚರ್ಚೆ

ಈ ಸೌಹಾರ್ದ ಭೇಟಿಯ ವೇಳೆ ಸಿದ್ದರಾಮಯ್ಯ ಅವರು, ”ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎಂದು ಅಮಿತ್ ಶಾ ಅವರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೀತಿಯಿಂದ ಬಡವರಿಗೆ ಅಹಾರ ನೀಡುವ ಯೋಜನೆಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

”ಕೇಂದ್ರ ಸರ್ಕಾರದ ಹೊಸ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ಬಡವರ ಎರಡು ಹೊತ್ತಿನ ಊಟಕ್ಕೆ ತೊಂದರೆಯಿಂಟು ಮಾಡುತ್ತಿದೆ. ರಾಜ್ಯ ಸರ್ಕಾರಗಳಿಗೆ ಆಹಾರಧಾನ್ಯ ಪೂರೈಕೆ ಮಾಡದಿರುವ ನೀತಿಯನ್ನು ಬದಲಾಯಿಸುವುದು ಒಳಿತು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರ ಜತೆ ಗುರುವಾರ ಮಾತುಕತೆ ನಡೆಸುವುದಾಗಿ ಅಮಿತ್ ಶಾ ಅವರು ಆಶ್ವಾಸನೆ ನೀಡಿದ್ದಾರೆ.

ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ, ಬಿಪಿಎಲ್ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯೂ ಒಂದಾಗಿದ್ದು, ಇದನ್ನೂ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಕ್ಕಿಯ ಅಭಾವ ಕಾಡುತ್ತಿದೆ.

ಅಕ್ಕಿ ಪೂರೈಸಿ ಎಂದು ಭಾರತೀಯ ಆಹಾರ ನಿಗಮಕ್ಕೆ ರಾಜ್ಯ ಸರ್ಕಾರ ಮಾಡಿದ್ದ ಮನವಿ ತಿರಸ್ಕೃತವಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ:

ಶಾ ಭೇಟಿಗೂ ಮುನ್ನ ಸಿದ್ದು ಹೇಳಿದ್ದೇನು?

”ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು” ಎಂದರು.

”ಆದರೆ, ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್‌ಸಿಐ ನ ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ” ಎಂದು ಬೇಸರವ್ಯಕ್ತಪಡಿಸಿದ್ದರು.

”ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದರು.

”ಎಫ್‌ಸಿಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...