Homeಕರ್ನಾಟಕಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಗುರುವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ. ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಸಂಬಂಧಪಟ್ಟ ಸಚಿವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

”ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಶಾ-ಸಿದ್ದು ಭೇಟಿ ವೇಳೆ ಅಕ್ಕಿ ವಿಚಾರ ಚರ್ಚೆ

ಈ ಸೌಹಾರ್ದ ಭೇಟಿಯ ವೇಳೆ ಸಿದ್ದರಾಮಯ್ಯ ಅವರು, ”ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎಂದು ಅಮಿತ್ ಶಾ ಅವರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೀತಿಯಿಂದ ಬಡವರಿಗೆ ಅಹಾರ ನೀಡುವ ಯೋಜನೆಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

”ಕೇಂದ್ರ ಸರ್ಕಾರದ ಹೊಸ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ಬಡವರ ಎರಡು ಹೊತ್ತಿನ ಊಟಕ್ಕೆ ತೊಂದರೆಯಿಂಟು ಮಾಡುತ್ತಿದೆ. ರಾಜ್ಯ ಸರ್ಕಾರಗಳಿಗೆ ಆಹಾರಧಾನ್ಯ ಪೂರೈಕೆ ಮಾಡದಿರುವ ನೀತಿಯನ್ನು ಬದಲಾಯಿಸುವುದು ಒಳಿತು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರ ಜತೆ ಗುರುವಾರ ಮಾತುಕತೆ ನಡೆಸುವುದಾಗಿ ಅಮಿತ್ ಶಾ ಅವರು ಆಶ್ವಾಸನೆ ನೀಡಿದ್ದಾರೆ.

ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ, ಬಿಪಿಎಲ್ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯೂ ಒಂದಾಗಿದ್ದು, ಇದನ್ನೂ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಕ್ಕಿಯ ಅಭಾವ ಕಾಡುತ್ತಿದೆ.

ಅಕ್ಕಿ ಪೂರೈಸಿ ಎಂದು ಭಾರತೀಯ ಆಹಾರ ನಿಗಮಕ್ಕೆ ರಾಜ್ಯ ಸರ್ಕಾರ ಮಾಡಿದ್ದ ಮನವಿ ತಿರಸ್ಕೃತವಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ:

ಶಾ ಭೇಟಿಗೂ ಮುನ್ನ ಸಿದ್ದು ಹೇಳಿದ್ದೇನು?

”ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು” ಎಂದರು.

”ಆದರೆ, ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್‌ಸಿಐ ನ ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ” ಎಂದು ಬೇಸರವ್ಯಕ್ತಪಡಿಸಿದ್ದರು.

”ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದರು.

”ಎಫ್‌ಸಿಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...