Homeಕರ್ನಾಟಕಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಗುರುವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ. ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಸಂಬಂಧಪಟ್ಟ ಸಚಿವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

”ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಶಾ-ಸಿದ್ದು ಭೇಟಿ ವೇಳೆ ಅಕ್ಕಿ ವಿಚಾರ ಚರ್ಚೆ

ಈ ಸೌಹಾರ್ದ ಭೇಟಿಯ ವೇಳೆ ಸಿದ್ದರಾಮಯ್ಯ ಅವರು, ”ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎಂದು ಅಮಿತ್ ಶಾ ಅವರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೀತಿಯಿಂದ ಬಡವರಿಗೆ ಅಹಾರ ನೀಡುವ ಯೋಜನೆಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

”ಕೇಂದ್ರ ಸರ್ಕಾರದ ಹೊಸ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ಬಡವರ ಎರಡು ಹೊತ್ತಿನ ಊಟಕ್ಕೆ ತೊಂದರೆಯಿಂಟು ಮಾಡುತ್ತಿದೆ. ರಾಜ್ಯ ಸರ್ಕಾರಗಳಿಗೆ ಆಹಾರಧಾನ್ಯ ಪೂರೈಕೆ ಮಾಡದಿರುವ ನೀತಿಯನ್ನು ಬದಲಾಯಿಸುವುದು ಒಳಿತು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರ ಜತೆ ಗುರುವಾರ ಮಾತುಕತೆ ನಡೆಸುವುದಾಗಿ ಅಮಿತ್ ಶಾ ಅವರು ಆಶ್ವಾಸನೆ ನೀಡಿದ್ದಾರೆ.

ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ, ಬಿಪಿಎಲ್ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯೂ ಒಂದಾಗಿದ್ದು, ಇದನ್ನೂ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಕ್ಕಿಯ ಅಭಾವ ಕಾಡುತ್ತಿದೆ.

ಅಕ್ಕಿ ಪೂರೈಸಿ ಎಂದು ಭಾರತೀಯ ಆಹಾರ ನಿಗಮಕ್ಕೆ ರಾಜ್ಯ ಸರ್ಕಾರ ಮಾಡಿದ್ದ ಮನವಿ ತಿರಸ್ಕೃತವಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ:

ಶಾ ಭೇಟಿಗೂ ಮುನ್ನ ಸಿದ್ದು ಹೇಳಿದ್ದೇನು?

”ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು” ಎಂದರು.

”ಆದರೆ, ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್‌ಸಿಐ ನ ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ” ಎಂದು ಬೇಸರವ್ಯಕ್ತಪಡಿಸಿದ್ದರು.

”ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದರು.

”ಎಫ್‌ಸಿಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...