Homeಕರ್ನಾಟಕಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ: ಅಮಿತ್ ಶಾಗೆ ಸಿದ್ದರಾಮಯ್ಯ ಮನವರಿಕೆ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ರಾತ್ರಿ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಮಾಡಿ, ಕೇಂದ್ರದ ನೀತಿಯಿಂದ ಬಡವರ ಆಹಾರಕ್ಕೆ ಸಮಸ್ಯೆ ಆಗಿರುವ ಸಂಗತಿಯನ್ನು ಮನವರಿಕೆ ಮಾಡಿಕೊಟ್ಟಿದ್ದಾರೆ.

ಈ ಬಗ್ಗೆ ಗುರುವಾರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ”ನಿನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಎಫ್.ಸಿ.ಐ. ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ. ಅಮಿತ್ ಶಾ ಸಂಬಂಧಪಟ್ಟ ಸಚಿವರೊಂದಿಗೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

”ರಾಜ್ಯಕ್ಕೆ ಎರಡು ಐ.ಆರ್.ಪಿ ಬಟಾಲಿಯನ್ ನ್ನು ಒದಗಿಸಿದ್ದು, ಇನ್ನೆರಡು ಬಟಾಲಿಯನ್ ಒದಗಿಸಬೇಕೆಂದು ಮನವಿ ಮಾಡಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದರು.

ಶಾ-ಸಿದ್ದು ಭೇಟಿ ವೇಳೆ ಅಕ್ಕಿ ವಿಚಾರ ಚರ್ಚೆ

ಈ ಸೌಹಾರ್ದ ಭೇಟಿಯ ವೇಳೆ ಸಿದ್ದರಾಮಯ್ಯ ಅವರು, ”ಕೇಂದ್ರದ ಇತ್ತೀಚಿನ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ನೇರವಾಗಿ ಬಡವರ ಎರಡು ಹೊತ್ತಿನ ಊಟಕ್ಕೂ ತೊಂದರೆ ಕೊಡುತ್ತದೆ. ಆದ್ದರಿಂದ ರಾಜ್ಯಗಳಿಗೆ ಆಹಾರ ಧಾನ್ಯಗಳನ್ನು ಕೊಡದಿರುವ ಧೋರಣೆ ಬದಲಾದರೆ ಒಳ್ಳೆಯದು ಎಂದು ಅಮಿತ್ ಶಾ ಅವರಿಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರದ ನೀತಿಯಿಂದ ಬಡವರಿಗೆ ಅಹಾರ ನೀಡುವ ಯೋಜನೆಗೆ ತೊಂದರೆಯಾಗುತ್ತಿದೆ ಎನ್ನುವುದನ್ನು ಮುಖ್ಯಮಂತ್ರಿಗಳು ಅಮಿತ್ ಶಾ ಅವರ ಗಮನಕ್ಕೆ ತಂದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

”ಕೇಂದ್ರ ಸರ್ಕಾರದ ಹೊಸ ನೀತಿ ಆಹಾರ ಭದ್ರತಾ ಕಾಯ್ದೆಗೆ ವಿರುದ್ಧವಾಗಿದೆ. ಇದು ಬಡವರ ಎರಡು ಹೊತ್ತಿನ ಊಟಕ್ಕೆ ತೊಂದರೆಯಿಂಟು ಮಾಡುತ್ತಿದೆ. ರಾಜ್ಯ ಸರ್ಕಾರಗಳಿಗೆ ಆಹಾರಧಾನ್ಯ ಪೂರೈಕೆ ಮಾಡದಿರುವ ನೀತಿಯನ್ನು ಬದಲಾಯಿಸುವುದು ಒಳಿತು” ಎಂದು ಸಿದ್ದರಾಮಯ್ಯ ಹೇಳಿದ್ದಾಗಿ ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ.

ಈ ಬಗ್ಗೆ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರ ಜತೆ ಗುರುವಾರ ಮಾತುಕತೆ ನಡೆಸುವುದಾಗಿ ಅಮಿತ್ ಶಾ ಅವರು ಆಶ್ವಾಸನೆ ನೀಡಿದ್ದಾರೆ.

ಚುನಾವಣೆ ವೇಳೆ ರಾಜ್ಯ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳಲ್ಲಿ, ಬಿಪಿಎಲ್ ಕುಟುಂಬದ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯೂ ಒಂದಾಗಿದ್ದು, ಇದನ್ನೂ ಜಾರಿಗೊಳಿಸಲು ರಾಜ್ಯ ಸರ್ಕಾರಕ್ಕೆ ಅಕ್ಕಿಯ ಅಭಾವ ಕಾಡುತ್ತಿದೆ.

ಅಕ್ಕಿ ಪೂರೈಸಿ ಎಂದು ಭಾರತೀಯ ಆಹಾರ ನಿಗಮಕ್ಕೆ ರಾಜ್ಯ ಸರ್ಕಾರ ಮಾಡಿದ್ದ ಮನವಿ ತಿರಸ್ಕೃತವಾಗಿದೆ. ಹೀಗಾಗಿ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಕರ್ನಾಟಕ ಸರ್ಕಾರ ಮುಂದಾಗಿದೆ.

ಇದನ್ನೂ ಓದಿ:

ಶಾ ಭೇಟಿಗೂ ಮುನ್ನ ಸಿದ್ದು ಹೇಳಿದ್ದೇನು?

”ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು” ಎಂದರು.

”ಆದರೆ, ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್‌ಸಿಐ ನ ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ” ಎಂದು ಬೇಸರವ್ಯಕ್ತಪಡಿಸಿದ್ದರು.

”ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದ್ದರು.

”ಎಫ್‌ಸಿಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...