Homeಮುಖಪುಟನಿರುದ್ಯೋಗ, ಆರ್ಥಿಕ ಕುಸಿತದಿಂದ ದೇಶದ ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಕೇಜ್ರಿವಾಲ್‌

ನಿರುದ್ಯೋಗ, ಆರ್ಥಿಕ ಕುಸಿತದಿಂದ ದೇಶದ ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಕೇಜ್ರಿವಾಲ್‌

- Advertisement -
- Advertisement -

ದೇಶಾದ್ಯಂತ ನಡೆಯುವ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟವನ್ನು ಬೆಂಬಲಿಸಿರುವ ದೆಹಲಿ ಮುಖ್ಯಮಂತ್ರಿ, ಪೌರತ್ವ ಕಾಯ್ದೆ ಯಾವುದೇ ಕಾರಣಕ್ಕೂ ಬೇಡ ಎಂದು ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಆಗ್ರಹಿಸಿದ್ದಾರೆ.

ಹಾಗಾದರೆ ಪಾಕಿಸ್ತಾನದಲ್ಲಿರುವ ಹಿಂದೂಗಳಿಗೆ ಒಳ್ಳೆಯದಾಗಬಾರದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಇದು ಏನು? ಪಾಕಿಸ್ತಾನದ ಹಿಂದೂಗಳ ಬಗ್ಗೆ ತುಂಬಾ ಪ್ರೀತಿ ಇದ್ದರೆ ಭಾರತದಲ್ಲಿರುವ ಹಿಂದೂಗಳ ಬಗ್ಗೆ ಪ್ರೀತಿ ಯಾಕಿಲ್ಲ? ಇಲ್ಲಿ ಆರ್ಥಿಕತೆಯು ಕುಸಿದಿದೆ, ಉದ್ಯೋಗಗಳು ಸಿಗುತ್ತಿಲ್ಲ. ದಿನಬಳಕೆಯ ವಸ್ತುಗಳ ಬೆಲೆ ಏರುತ್ತಿದೆ. ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಇವರ ಬಗ್ಗೆ ಏಕೆ ಮೋದಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಇಂತಹ ಸಂದರ್ಭದಲ್ಲಿ ಪೌರತ್ವ ಕಾನೂನಿನ ಅವಶ್ಯಕತೆ ಏನು ಎಂದು ಅವರು ದೆಹಲಿ ನಾಗರಿಕರೊಂದಿಗೆ ಟೌನ್‌ಹಾಲ್‌ನಲ್ಲಿ ನಡೆದ ಸಂವಾದದಲ್ಲಿ ಪ್ರಶ್ನಿಸಿದ್ದಾರೆ. ಬೇರೆ ದೇಶದ ಮುಸ್ಲಿಮೇತರರಿಗೆ ಅಂದರೆ ಹಿಂದೂಗಳಿಗೆ ದಾಖಲೆ ಇಲ್ಲಿದಿದ್ದರೂ ಕರೆದುಕೊಂಡುಬಂದು ಪೌರತ್ವ ನೀಡುವುದು ಮತ್ತು ನಮ್ಮದೇ ದೇಶದಲ್ಲಿರುವ ಕೋಟ್ಯಾಂತರ ದಾಖಲೆಯಿಲ್ಲದ ಹಿಂದೂ ಧರ್ಮದವರನ್ನು ಹೊರದಬ್ಬುವ ಈ ಕಾನೂನು ನನಗೆ ಅರ್ಥವಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಬುರಾರಿಯಲ್ಲಿ ಬಿಹಾರ ಅಥವಾ ಉತ್ತರ ಪ್ರದೇಶದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯೊಬ್ಬನ್ನು ನಿಮ್ಮ ಜನನ ಪ್ರಮಾಣಪತ್ರವಿದೆಯೇ ‌ಎಂದು ಕೇಳಿದೆ. ಅದಕ್ಕೆ ಅವರು ನಾನು ಮನೆಯಲ್ಲಿ ಹುಟ್ಟಿದವನು ಮತ್ತು ಆ ಕಾಲದಲ್ಲಿ ನಮ್ಮ ಮನೆಯಲ್ಲಿ ವಿದ್ಯಾವಂತರು ಇರದ ಕಾರಣ ಜನನಪ್ರಮಾಣ ಪತ್ರ ಮಾಡಿಸಿಲ್ಲ ಎಂದರು. ಅವರ ಹೆತ್ತವರಿಗೂ ಸಹ ಜನನ ಪ್ರಮಾಣಪತ್ರ ಇಲ್ಲ. ಹಾಗಾಗಿ ನಾನು ‘ಅಬ್ ಕ್ಯಾ ಕರೋಗೆ, ನೀವು ದೇಶವನ್ನು ತೊರೆಯಬೇಕಾಗುತ್ತದೆ” ಎಂದೆ. ಆಗ ಪಾಪ ಅವರ ಮುಖವನ್ನು ನೋಡಲಾಗಲಿಲ್ಲ

ದೇಶದ ಬಹಳಷ್ಟು ಜನರ ಬಳಿ ಪ್ರಮಾಣ ಪತ್ರಗಳಿಲ್ಲ. ಎಲ್ಲಾ ಧರ್ಮದವರದ್ದು ಸಹ. ಹಾಗಂತ ಅವರನ್ನು ಅಕ್ರಮ ನುಸುಳುಕೋರರು ಎನ್ನಲಾಗುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...