Homeಮುಖಪುಟನಿರುದ್ಯೋಗ, ಆರ್ಥಿಕ ಕುಸಿತದಿಂದ ದೇಶದ ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಕೇಜ್ರಿವಾಲ್‌

ನಿರುದ್ಯೋಗ, ಆರ್ಥಿಕ ಕುಸಿತದಿಂದ ದೇಶದ ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಕೇಜ್ರಿವಾಲ್‌

- Advertisement -
- Advertisement -

ದೇಶಾದ್ಯಂತ ನಡೆಯುವ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟವನ್ನು ಬೆಂಬಲಿಸಿರುವ ದೆಹಲಿ ಮುಖ್ಯಮಂತ್ರಿ, ಪೌರತ್ವ ಕಾಯ್ದೆ ಯಾವುದೇ ಕಾರಣಕ್ಕೂ ಬೇಡ ಎಂದು ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಆಗ್ರಹಿಸಿದ್ದಾರೆ.

ಹಾಗಾದರೆ ಪಾಕಿಸ್ತಾನದಲ್ಲಿರುವ ಹಿಂದೂಗಳಿಗೆ ಒಳ್ಳೆಯದಾಗಬಾರದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಇದು ಏನು? ಪಾಕಿಸ್ತಾನದ ಹಿಂದೂಗಳ ಬಗ್ಗೆ ತುಂಬಾ ಪ್ರೀತಿ ಇದ್ದರೆ ಭಾರತದಲ್ಲಿರುವ ಹಿಂದೂಗಳ ಬಗ್ಗೆ ಪ್ರೀತಿ ಯಾಕಿಲ್ಲ? ಇಲ್ಲಿ ಆರ್ಥಿಕತೆಯು ಕುಸಿದಿದೆ, ಉದ್ಯೋಗಗಳು ಸಿಗುತ್ತಿಲ್ಲ. ದಿನಬಳಕೆಯ ವಸ್ತುಗಳ ಬೆಲೆ ಏರುತ್ತಿದೆ. ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಇವರ ಬಗ್ಗೆ ಏಕೆ ಮೋದಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಇಂತಹ ಸಂದರ್ಭದಲ್ಲಿ ಪೌರತ್ವ ಕಾನೂನಿನ ಅವಶ್ಯಕತೆ ಏನು ಎಂದು ಅವರು ದೆಹಲಿ ನಾಗರಿಕರೊಂದಿಗೆ ಟೌನ್‌ಹಾಲ್‌ನಲ್ಲಿ ನಡೆದ ಸಂವಾದದಲ್ಲಿ ಪ್ರಶ್ನಿಸಿದ್ದಾರೆ. ಬೇರೆ ದೇಶದ ಮುಸ್ಲಿಮೇತರರಿಗೆ ಅಂದರೆ ಹಿಂದೂಗಳಿಗೆ ದಾಖಲೆ ಇಲ್ಲಿದಿದ್ದರೂ ಕರೆದುಕೊಂಡುಬಂದು ಪೌರತ್ವ ನೀಡುವುದು ಮತ್ತು ನಮ್ಮದೇ ದೇಶದಲ್ಲಿರುವ ಕೋಟ್ಯಾಂತರ ದಾಖಲೆಯಿಲ್ಲದ ಹಿಂದೂ ಧರ್ಮದವರನ್ನು ಹೊರದಬ್ಬುವ ಈ ಕಾನೂನು ನನಗೆ ಅರ್ಥವಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಬುರಾರಿಯಲ್ಲಿ ಬಿಹಾರ ಅಥವಾ ಉತ್ತರ ಪ್ರದೇಶದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯೊಬ್ಬನ್ನು ನಿಮ್ಮ ಜನನ ಪ್ರಮಾಣಪತ್ರವಿದೆಯೇ ‌ಎಂದು ಕೇಳಿದೆ. ಅದಕ್ಕೆ ಅವರು ನಾನು ಮನೆಯಲ್ಲಿ ಹುಟ್ಟಿದವನು ಮತ್ತು ಆ ಕಾಲದಲ್ಲಿ ನಮ್ಮ ಮನೆಯಲ್ಲಿ ವಿದ್ಯಾವಂತರು ಇರದ ಕಾರಣ ಜನನಪ್ರಮಾಣ ಪತ್ರ ಮಾಡಿಸಿಲ್ಲ ಎಂದರು. ಅವರ ಹೆತ್ತವರಿಗೂ ಸಹ ಜನನ ಪ್ರಮಾಣಪತ್ರ ಇಲ್ಲ. ಹಾಗಾಗಿ ನಾನು ‘ಅಬ್ ಕ್ಯಾ ಕರೋಗೆ, ನೀವು ದೇಶವನ್ನು ತೊರೆಯಬೇಕಾಗುತ್ತದೆ” ಎಂದೆ. ಆಗ ಪಾಪ ಅವರ ಮುಖವನ್ನು ನೋಡಲಾಗಲಿಲ್ಲ

ದೇಶದ ಬಹಳಷ್ಟು ಜನರ ಬಳಿ ಪ್ರಮಾಣ ಪತ್ರಗಳಿಲ್ಲ. ಎಲ್ಲಾ ಧರ್ಮದವರದ್ದು ಸಹ. ಹಾಗಂತ ಅವರನ್ನು ಅಕ್ರಮ ನುಸುಳುಕೋರರು ಎನ್ನಲಾಗುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...