Homeಮುಖಪುಟನಿರುದ್ಯೋಗ, ಆರ್ಥಿಕ ಕುಸಿತದಿಂದ ದೇಶದ ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಕೇಜ್ರಿವಾಲ್‌

ನಿರುದ್ಯೋಗ, ಆರ್ಥಿಕ ಕುಸಿತದಿಂದ ದೇಶದ ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಕೇಜ್ರಿವಾಲ್‌

- Advertisement -
- Advertisement -

ದೇಶಾದ್ಯಂತ ನಡೆಯುವ ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟವನ್ನು ಬೆಂಬಲಿಸಿರುವ ದೆಹಲಿ ಮುಖ್ಯಮಂತ್ರಿ, ಪೌರತ್ವ ಕಾಯ್ದೆ ಯಾವುದೇ ಕಾರಣಕ್ಕೂ ಬೇಡ ಎಂದು ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಆಗ್ರಹಿಸಿದ್ದಾರೆ.

ಹಾಗಾದರೆ ಪಾಕಿಸ್ತಾನದಲ್ಲಿರುವ ಹಿಂದೂಗಳಿಗೆ ಒಳ್ಳೆಯದಾಗಬಾರದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು “ಇದು ಏನು? ಪಾಕಿಸ್ತಾನದ ಹಿಂದೂಗಳ ಬಗ್ಗೆ ತುಂಬಾ ಪ್ರೀತಿ ಇದ್ದರೆ ಭಾರತದಲ್ಲಿರುವ ಹಿಂದೂಗಳ ಬಗ್ಗೆ ಪ್ರೀತಿ ಯಾಕಿಲ್ಲ? ಇಲ್ಲಿ ಆರ್ಥಿಕತೆಯು ಕುಸಿದಿದೆ, ಉದ್ಯೋಗಗಳು ಸಿಗುತ್ತಿಲ್ಲ. ದಿನಬಳಕೆಯ ವಸ್ತುಗಳ ಬೆಲೆ ಏರುತ್ತಿದೆ. ಕೋಟ್ಯಾಂತರ ಹಿಂದೂಗಳು ಕಷ್ಟ ಅನುಭವಿಸುತ್ತಿದ್ದಾರೆ. ಇವರ ಬಗ್ಗೆ ಏಕೆ ಮೋದಿ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಮರುಪ್ರಶ್ನೆ ಹಾಕಿದ್ದಾರೆ.

ಇಂತಹ ಸಂದರ್ಭದಲ್ಲಿ ಪೌರತ್ವ ಕಾನೂನಿನ ಅವಶ್ಯಕತೆ ಏನು ಎಂದು ಅವರು ದೆಹಲಿ ನಾಗರಿಕರೊಂದಿಗೆ ಟೌನ್‌ಹಾಲ್‌ನಲ್ಲಿ ನಡೆದ ಸಂವಾದದಲ್ಲಿ ಪ್ರಶ್ನಿಸಿದ್ದಾರೆ. ಬೇರೆ ದೇಶದ ಮುಸ್ಲಿಮೇತರರಿಗೆ ಅಂದರೆ ಹಿಂದೂಗಳಿಗೆ ದಾಖಲೆ ಇಲ್ಲಿದಿದ್ದರೂ ಕರೆದುಕೊಂಡುಬಂದು ಪೌರತ್ವ ನೀಡುವುದು ಮತ್ತು ನಮ್ಮದೇ ದೇಶದಲ್ಲಿರುವ ಕೋಟ್ಯಾಂತರ ದಾಖಲೆಯಿಲ್ಲದ ಹಿಂದೂ ಧರ್ಮದವರನ್ನು ಹೊರದಬ್ಬುವ ಈ ಕಾನೂನು ನನಗೆ ಅರ್ಥವಾಗುತ್ತಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಬುರಾರಿಯಲ್ಲಿ ಬಿಹಾರ ಅಥವಾ ಉತ್ತರ ಪ್ರದೇಶದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಯೊಬ್ಬನ್ನು ನಿಮ್ಮ ಜನನ ಪ್ರಮಾಣಪತ್ರವಿದೆಯೇ ‌ಎಂದು ಕೇಳಿದೆ. ಅದಕ್ಕೆ ಅವರು ನಾನು ಮನೆಯಲ್ಲಿ ಹುಟ್ಟಿದವನು ಮತ್ತು ಆ ಕಾಲದಲ್ಲಿ ನಮ್ಮ ಮನೆಯಲ್ಲಿ ವಿದ್ಯಾವಂತರು ಇರದ ಕಾರಣ ಜನನಪ್ರಮಾಣ ಪತ್ರ ಮಾಡಿಸಿಲ್ಲ ಎಂದರು. ಅವರ ಹೆತ್ತವರಿಗೂ ಸಹ ಜನನ ಪ್ರಮಾಣಪತ್ರ ಇಲ್ಲ. ಹಾಗಾಗಿ ನಾನು ‘ಅಬ್ ಕ್ಯಾ ಕರೋಗೆ, ನೀವು ದೇಶವನ್ನು ತೊರೆಯಬೇಕಾಗುತ್ತದೆ” ಎಂದೆ. ಆಗ ಪಾಪ ಅವರ ಮುಖವನ್ನು ನೋಡಲಾಗಲಿಲ್ಲ

ದೇಶದ ಬಹಳಷ್ಟು ಜನರ ಬಳಿ ಪ್ರಮಾಣ ಪತ್ರಗಳಿಲ್ಲ. ಎಲ್ಲಾ ಧರ್ಮದವರದ್ದು ಸಹ. ಹಾಗಂತ ಅವರನ್ನು ಅಕ್ರಮ ನುಸುಳುಕೋರರು ಎನ್ನಲಾಗುತ್ತದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...