Homeಮುಖಪುಟರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಲು ಕೇಂದ್ರದ ಏಜೆನ್ಸಿಗಳ ದುರುಪಯೋಗ - ಶಿವಸೇನೆ

ರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಲು ಕೇಂದ್ರದ ಏಜೆನ್ಸಿಗಳ ದುರುಪಯೋಗ – ಶಿವಸೇನೆ

ಅನಿಲ್ ದೇಶ್ಮುಖ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಇಬ್ಬರ ವಿಚಾರದಲ್ಲಿ ಏಕೆ ವಿಭಿನ್ನ ನಿರ್ಧಾರಗಳು? ಎಂದು ಶಿವಸೇನೆ ಪ್ರಶ್ನಿಸಿದೆ.

- Advertisement -
- Advertisement -

ರಾಜಕೀಯ ಪ್ರತಿಸ್ಪರ್ಧಿಗಳನ್ನು ಮೂಲೆಗುಂಪು ಮಾಡಲು ಕಾನೂನು ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಶಿವಸೇನೆ ಬುಧವಾರ ಹೇಳಿದೆ.

ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬೀರ್ ಸಿಂಗ್, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಮಾಡಿದ್ದ ಭ್ರಷ್ಟಾಚಾರದ ಆರೋಪದಲ್ಲಿ ಬಾಂಬೆ ಹೈಕೋರ್ಟ್ ಸಿಐಡಿ ತನಿಖೆಗೆ ಸೂಚಿಸಿದೆ. ಆದರೆ, ವಕೀಲೆ ಜೈಶ್ರೀ ಪಾಟೀಲ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಯಲ್ಲಿ ಆರೋಪಗಳನ್ನು ಹುಡುಕಿದೆ ಎಂದು ಶಿವಸೇನೆಯ ಮುಖವಾಣಿ “ಸಮನಾ” ದ ಸಂಪಾದಕೀಯದಲ್ಲಿ ತಿಳಿಸಲಾಗಿದೆ.

“ಕಾನೂನಿಗಿಂತ ಯಾರು ಮೇಲಲ್ಲ. ಆದರೆ, ರಾಜಕೀಯ ಪ್ರತಿಸ್ಪರ್ಧಿಗಳನ್ನು ಮೂಲೆಗುಂಪಾಗಿಸಲು ಕಾನೂನು ಮತ್ತು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ” ಎಂದು ಮರಾಠಿ ಮಾಧ್ಯಮ ಹೇಳಿದೆ.

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

“ಮಹಾರಾಷ್ಟ್ರ ಸರ್ಕಾರವನ್ನು ಹೀಗೆ ದುರ್ಬಲಗೊಳಿಸುವಲ್ಲಿ ಸಾಂವಿಧಾನಿಕ ಅಧಿಕಾರಿಗಳು ಕೂಡ ಭಾಗಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ” ಎಂದು ಆತಂಕ ವ್ಯಕ್ತಪಡಿಸಿದೆ. ಶಿವಸೇನೆ ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಅಧಿಕಾರ ಹಂಚಿಕೊಂಡಿದೆ.

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅವರು ಎನ್‌ಸಿಪಿ ನಾಯಕ ಅನಿಲ್ ದೇಶ್ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪದ ಬಗ್ಗೆ 15 ದಿನಗಳೊಳಗೆ ಪ್ರಾಥಮಿಕ ತನಿಖೆ ನಡೆಸುವಂತೆ ಹೈಕೋರ್ಟ್ ಸೋಮವಾರ ಸಿಬಿಐಗೆ ನಿರ್ದೇಶನ ನೀಡಿದೆ. ತೀರ್ಪಿನ ನಂತರ ಅನಿಲ್ ದೇಶ್ಮುಖ್ ರಾಜ್ಯ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅನಿಲ್ ದೇಶ್ಮುಖ್ ವಿರುದ್ಧದ ಆರೋಪಗಳ ಬಗ್ಗೆ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಆದೇಶ ಹೊರಡಿಸಿದೆ, ಆದರೆ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 10 ವರ್ಷಗಳ ಹಳೆಯ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್‌ ತಡೆಹಿಡಿದಿದೆ. ಅನಿಲ್ ದೇಶ್ಮುಖ್ ಮತ್ತು ಕರ್ನಾಟಕ ಮುಖ್ಯಮಂತ್ರಿ ಇಬ್ಬರ ವಿಚಾರದಲ್ಲಿ ಏಕೆ ವಿಭಿನ್ನ ನಿರ್ಧಾರಗಳು? ನೈತಿಕತೆಯು ಶಿವಸೇನೆ ಮತ್ತು ಎನ್‌ಸಿಪಿಗೆ ಮಾತ್ರವೇ?” ಎಂದು ಶಿವಸೇನೆ ಪ್ರಶ್ನಿಸಿದೆ.

ಅಕ್ರಮ ಡಿನೋಟಿಫಿಕೇಶನ್‌ ಭ್ರಷ್ಟಾಚಾರದ ಪ್ರಕರಣದಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಕರ್ನಾಟಕದ ಪ್ರಸ್ತುತ ಮುಖ್ಯಮಂತ್ರಿಯಾಗಿರುವ ಬಿ.ಎಸ್.ಯಡಿಯುರಪ್ಪ 2006 ರಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದರು. ಈ ಅಧಿಕಾರಾವಧಿಯಲ್ಲಿ ಅಕ್ರಮವಾಗಿ ಭೂಮಿಯ ಡಿ-ನೋಟಿಫೈ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ: ತಿಂಗಳಿಗೆ 100 ಕೋಟಿ ಲಂಚ ಸಂಗ್ರಹಕ್ಕೆ ಗೃಹ ಸಚಿವರ ಸೂಚನೆ- ಪರಮ್ ಬೀರ್ ಸಿಂಗ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...