Homeಕರ್ನಾಟಕಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ - ಸಿಪಿಐ(ಎಂ)

ಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ – ಸಿಪಿಐ(ಎಂ)

- Advertisement -
- Advertisement -

ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ ಕೇಂದ್ರ-ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟಗಳನ್ನು ತೀವ್ರಗೊಳಿಸಲು ಮತ್ತು ಕರ್ನಾಟಕದಲ್ಲಿ ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಪಕ್ಷವು ತೀರ್ಮಾನಿಸಿದೆ ಎಂದು ಸಿಪಿಐ(ಎಂ)ನ ನೂತನ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಕೆ. ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ಪಕ್ಷದ ರಾಜ್ಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ”ಕೇಂದ್ರದ ಮೋದಿ ಸರ್ಕಾರವು ದೇಶದ ಬಹುಸಂಖ್ಯಾತ ಬಡವರನ್ನು ಬಲಿಕೊಟ್ಟು ಮತೀಯವಾದಿ ನೀತಿಗಳ ನೆರಳಲ್ಲಿ ಕಾರ್ಪೊರೇಟ್ ಬಂಡವಾಳದಾರರ ಹಿತಕ್ಕಾಗಿ ನವ-ಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಇತ್ತ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಮೋದಿ ಸರ್ಕಾರದ ರೀತಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂದು ಸಮ್ಮೇಳನದಲ್ಲಿ ಮಂಡಿಸಿದ ರಾಜಕೀಯ ವರದಿಯಲ್ಲಿ ವಿಶ್ಲೇಷಿಸಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಮತ್ತು ರಾಜ್ಯದ ಸರ್ಕಾರದ ನೀತಿಯಿಂದಾಗಿ ಬಡವರು, ಕೂಲಿ ಕಾರ್ಮಿಕರು, ರೈತರು, ಕಾರ್ಮಿಕರು ಮತ್ತು ಇತರೆ ದುಡಿಯುವ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಉದ್ಯೋಗ ಅಭದ್ರತೆ, ರೈತರ ಬೆಳೆಗೆ ಸಿಗದ ಬೆಲೆ, ಬಲವಂತದ ಭೂಸ್ವಾಧೀನ, ಶಿಕ್ಷಣ, ಆರೋಗ್ಯ, ಮತ್ತು ಇತರೆ ನಾಗರೀಕ ಸೇವೆಗಳ ದುಬಾರಿ, ಇತ್ಯಾದಿ ಸಮಸ್ಯೆಗಳಿಂದಾಗಿ ಜರ್ಜರಿತಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿರುವ ಕುರಿತು ಸಮ್ಮೇಳನ ಆತಂಕ ವ್ಯಕ್ತಪಡಿಸಿದೆ” ಎಂದಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆರೆಸ್ಸೆಸ್ ಮತ್ತು ಅದರ ಪರಿವಾರ ಸಂಘಟನೆಗಳು ಜನರ ಧಾರ್ಮಿಕ ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ಮತೀಯವಾದಿ ನೆಲೆಯಲ್ಲಿ ಜನರ ಐಕ್ಯತೆಯನ್ನು ಮುರಿಯಲು ನಡೆಸುತ್ತಿರುವ ಪ್ರಯತ್ನಗಳನ್ನು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಪಕ್ಷದ ಸಮ್ಮೇಳನವು ಅಭಿಪ್ರಾಯಪಟ್ಟಿದೆ. ಕೋಮು ವಿಭಜನೆ ತಡೆಗಟ್ಟುವ ವಿಚಾರದಲ್ಲಿ ಹಾಗೂ ಜನತೆಯ ಐಕ್ಯತೆಯನ್ನು ಕಾಪಾಡಲು ಸಿಪಿಐ(ಎಂ)ನ ಕಾರ್ಯಕರ್ತರು ಮುಂಚೂಣಿಯಲ್ಲಿರುವಂತೆ ಪಕ್ಷದ ಕಾರ್ಯಕರ್ತರಿಗೆ ಸಮ್ಮೇಳನವು ಕರೆ ನೀಡಿದೆ” ಎಂದು ಡಾ.ಪ್ರಕಾಶ್ ಹೇಳಿದ್ದಾರೆ.

ಭೂರಹಿತ ಕುಟುಂಬಗಳಿಗೆ ಮನೆ ನಿವೇಶನ, ಅರಣ್ಯ ಸಾಗುವಳಿದಾರರಿಗೆ ರಕ್ಷಣೆ, ಬಲವಂತದ ಭೂಸ್ವಾಧೀನ ಕೈಬಿಡಲು, ಕರಾಳ ಕೃಷಿ ಕಾಯ್ದೆಗಳ ರದ್ದತಿಗಾಗಿ, ಸಾರ್ವಜನಿಕ ಆಸ್ತಿಗಳ ಖಾಸಗೀಕರಣದ ವಿರುದ್ಧ, ಫೆಬ್ರವರಿ 10 ರಂದು ತಿಂಗಳಲ್ಲಿ ನಡೆಯುವ ಪಾದಯಾತ್ರೆಗೆ ಪಕ್ಷವು ಬೆಂಬಲ ನೀಡುವುದಾಗಿ ಪ್ರಕಾಶ್ ಅವರು ಹೇಳಿದ್ದಾರೆ.

ಐಸಿಡಿಎಸ್ ಯೋಜನೆ ದುರ್ಬಲಗೊಳಿಸುವುದರ ವಿರುದ್ಧ, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಕಡಿವಾಣಕ್ಕೆ ಒತ್ತಾಯಿಸಿ, ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಪಡಿಸಲು ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ಧತಿ ವಿರೋಧಿಸಿ, ಸಾಗರ ಮಾಲ ಯೋಜನೆಯಿಂದ ಕರಾವಳಿ ಜನರ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ನಿವಾರಣೆಗೆ ಒತ್ತಾಯಿಸಿ, ಕೃತಕ ಬುದ್ಧಿಮತ್ತೆಯಿಂದ ಹೆಚ್ಚುತ್ತಿರುವ ಉದ್ಯೋಗ ನಷ್ಟವನ್ನು ತಡೆಗಟ್ಟಲು, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶ) ಕಾಯ್ದೆಯಿಂದ ಐಟಿ/ಐಟಿಇಎಸ್ ವಲಯಕ್ಕೆ ವಿನಾಯಿತಿ ನೀಡಿರುವುದನ್ನು ವಿರೋಧಿಸಿ, ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸುವಂತೆ ಒತ್ತಾಯಿಸುವ ನಿರ್ಣಯಗಳು ಸೇರಿದಂತೆ 33 ನಿರ್ಣಯಗಳನ್ನು ಪಕ್ಷದ ರಾಜ್ಯ ಸಮ್ಮೇಳನವು ಅಂಗೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಪಂಚಾಯಿತಿ, ಹಮಾಲಿ, ಸಾರಿಗೆ ಇತ್ಯಾದಿ ಶ್ರಮಜೀವಿ ವರ್ಗಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮ್ಮೇಳನ ನಿರ್ಣಯ ಕೈಗೊಂಡಿದೆ ಮತ್ತು ಈ ನಿಟ್ಟಿನಲ್ಲಿ ನಡೆಯುವ ಹೋರಾಟಗಳನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ನೀತಿಗಳಲ್ಲಿ ವ್ಯತ್ಯಾಸವಿಲ್ಲದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕಾರ್ಯನಿರ್ವಹಿಸುತ್ತಿರುವುದನ್ನು ಪಕ್ಷದ ರಾಜ್ಯ ಸಮ್ಮೇಳನವು ಗುರುತಿಸಿದೆ. ಜನರ ಸಂಕಷ್ಟಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದವನ್ನು ಬೆಳೆಸಲಾಗುತ್ತಿದೆ. ಜನತೆಗೆ ನೀತಿಗಳ ಪರ್ಯಾಯ ಮತ್ತು ರಾಜಕೀಯ ಪರ್ಯಾಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ಅಗತ್ಯವಾದ ಒಂದು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನವು ತೀರ್ಮಾನಿಸಿದ್ದು, ರಾಜ್ಯದ ಎಡ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು, ಸಂಘಟನೆಗಳು, ಶಕ್ತಿಗಳು ಮತ್ತು ವ್ಯಕ್ತಿಗಳನ್ನು ಒಗ್ಗೂಡಿಸಿ ಈ ರಂಗವನ್ನು ಕಟ್ಟಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೋರಾಟಗಳು ಮತ್ತು ಆಂದೋಲನಗಳಲ್ಲಿ ಸಿಪಿಐ(ಎಂ) ಮತ್ತು ಇತರೆ ಕಮ್ಯುನಿಸ್ಟ್ ಪಕ್ಷಗಳು ಮುಂಚೂಣಿಯಲ್ಲಿದ್ದರೂ ಚುನಾವಣೆಗಳಲ್ಲಿ ಕಮ್ಯುನಿಸ್ಟ್ ಪಕ್ಷಗಳ ಮತಗಳಿಕೆ ಪ್ರಮಾಣ ಕುಸಿಯುತ್ತಿರುವುದನ್ನು ಗಂಭೀರವಾಗಿ ಸಮ್ಮೇಳನವು ವಿಮರ್ಶಿಸಿದ್ದು, ಕೆಳಹಂತದ ಪಕ್ಷ ಸಂಘಟನೆಗೆ ಒತ್ತು ಮತ್ತು ಸಮೂಹಗಳ ರಾಜಕೀಯ ಪ್ರಜ್ಞೆಯನ್ನು ಎತ್ತರಿಸಬೇಕೆಂದು ಸಮ್ಮೇಳನವು ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...