Homeಕರ್ನಾಟಕಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ - ಸಿಪಿಐ(ಎಂ)

ಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ – ಸಿಪಿಐ(ಎಂ)

- Advertisement -
- Advertisement -

ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ ಕೇಂದ್ರ-ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟಗಳನ್ನು ತೀವ್ರಗೊಳಿಸಲು ಮತ್ತು ಕರ್ನಾಟಕದಲ್ಲಿ ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಪಕ್ಷವು ತೀರ್ಮಾನಿಸಿದೆ ಎಂದು ಸಿಪಿಐ(ಎಂ)ನ ನೂತನ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಕೆ. ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ಪಕ್ಷದ ರಾಜ್ಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ”ಕೇಂದ್ರದ ಮೋದಿ ಸರ್ಕಾರವು ದೇಶದ ಬಹುಸಂಖ್ಯಾತ ಬಡವರನ್ನು ಬಲಿಕೊಟ್ಟು ಮತೀಯವಾದಿ ನೀತಿಗಳ ನೆರಳಲ್ಲಿ ಕಾರ್ಪೊರೇಟ್ ಬಂಡವಾಳದಾರರ ಹಿತಕ್ಕಾಗಿ ನವ-ಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಇತ್ತ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಮೋದಿ ಸರ್ಕಾರದ ರೀತಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂದು ಸಮ್ಮೇಳನದಲ್ಲಿ ಮಂಡಿಸಿದ ರಾಜಕೀಯ ವರದಿಯಲ್ಲಿ ವಿಶ್ಲೇಷಿಸಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಮತ್ತು ರಾಜ್ಯದ ಸರ್ಕಾರದ ನೀತಿಯಿಂದಾಗಿ ಬಡವರು, ಕೂಲಿ ಕಾರ್ಮಿಕರು, ರೈತರು, ಕಾರ್ಮಿಕರು ಮತ್ತು ಇತರೆ ದುಡಿಯುವ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಉದ್ಯೋಗ ಅಭದ್ರತೆ, ರೈತರ ಬೆಳೆಗೆ ಸಿಗದ ಬೆಲೆ, ಬಲವಂತದ ಭೂಸ್ವಾಧೀನ, ಶಿಕ್ಷಣ, ಆರೋಗ್ಯ, ಮತ್ತು ಇತರೆ ನಾಗರೀಕ ಸೇವೆಗಳ ದುಬಾರಿ, ಇತ್ಯಾದಿ ಸಮಸ್ಯೆಗಳಿಂದಾಗಿ ಜರ್ಜರಿತಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿರುವ ಕುರಿತು ಸಮ್ಮೇಳನ ಆತಂಕ ವ್ಯಕ್ತಪಡಿಸಿದೆ” ಎಂದಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆರೆಸ್ಸೆಸ್ ಮತ್ತು ಅದರ ಪರಿವಾರ ಸಂಘಟನೆಗಳು ಜನರ ಧಾರ್ಮಿಕ ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ಮತೀಯವಾದಿ ನೆಲೆಯಲ್ಲಿ ಜನರ ಐಕ್ಯತೆಯನ್ನು ಮುರಿಯಲು ನಡೆಸುತ್ತಿರುವ ಪ್ರಯತ್ನಗಳನ್ನು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಪಕ್ಷದ ಸಮ್ಮೇಳನವು ಅಭಿಪ್ರಾಯಪಟ್ಟಿದೆ. ಕೋಮು ವಿಭಜನೆ ತಡೆಗಟ್ಟುವ ವಿಚಾರದಲ್ಲಿ ಹಾಗೂ ಜನತೆಯ ಐಕ್ಯತೆಯನ್ನು ಕಾಪಾಡಲು ಸಿಪಿಐ(ಎಂ)ನ ಕಾರ್ಯಕರ್ತರು ಮುಂಚೂಣಿಯಲ್ಲಿರುವಂತೆ ಪಕ್ಷದ ಕಾರ್ಯಕರ್ತರಿಗೆ ಸಮ್ಮೇಳನವು ಕರೆ ನೀಡಿದೆ” ಎಂದು ಡಾ.ಪ್ರಕಾಶ್ ಹೇಳಿದ್ದಾರೆ.

ಭೂರಹಿತ ಕುಟುಂಬಗಳಿಗೆ ಮನೆ ನಿವೇಶನ, ಅರಣ್ಯ ಸಾಗುವಳಿದಾರರಿಗೆ ರಕ್ಷಣೆ, ಬಲವಂತದ ಭೂಸ್ವಾಧೀನ ಕೈಬಿಡಲು, ಕರಾಳ ಕೃಷಿ ಕಾಯ್ದೆಗಳ ರದ್ದತಿಗಾಗಿ, ಸಾರ್ವಜನಿಕ ಆಸ್ತಿಗಳ ಖಾಸಗೀಕರಣದ ವಿರುದ್ಧ, ಫೆಬ್ರವರಿ 10 ರಂದು ತಿಂಗಳಲ್ಲಿ ನಡೆಯುವ ಪಾದಯಾತ್ರೆಗೆ ಪಕ್ಷವು ಬೆಂಬಲ ನೀಡುವುದಾಗಿ ಪ್ರಕಾಶ್ ಅವರು ಹೇಳಿದ್ದಾರೆ.

ಐಸಿಡಿಎಸ್ ಯೋಜನೆ ದುರ್ಬಲಗೊಳಿಸುವುದರ ವಿರುದ್ಧ, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಕಡಿವಾಣಕ್ಕೆ ಒತ್ತಾಯಿಸಿ, ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಪಡಿಸಲು ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ಧತಿ ವಿರೋಧಿಸಿ, ಸಾಗರ ಮಾಲ ಯೋಜನೆಯಿಂದ ಕರಾವಳಿ ಜನರ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ನಿವಾರಣೆಗೆ ಒತ್ತಾಯಿಸಿ, ಕೃತಕ ಬುದ್ಧಿಮತ್ತೆಯಿಂದ ಹೆಚ್ಚುತ್ತಿರುವ ಉದ್ಯೋಗ ನಷ್ಟವನ್ನು ತಡೆಗಟ್ಟಲು, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶ) ಕಾಯ್ದೆಯಿಂದ ಐಟಿ/ಐಟಿಇಎಸ್ ವಲಯಕ್ಕೆ ವಿನಾಯಿತಿ ನೀಡಿರುವುದನ್ನು ವಿರೋಧಿಸಿ, ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸುವಂತೆ ಒತ್ತಾಯಿಸುವ ನಿರ್ಣಯಗಳು ಸೇರಿದಂತೆ 33 ನಿರ್ಣಯಗಳನ್ನು ಪಕ್ಷದ ರಾಜ್ಯ ಸಮ್ಮೇಳನವು ಅಂಗೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಪಂಚಾಯಿತಿ, ಹಮಾಲಿ, ಸಾರಿಗೆ ಇತ್ಯಾದಿ ಶ್ರಮಜೀವಿ ವರ್ಗಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮ್ಮೇಳನ ನಿರ್ಣಯ ಕೈಗೊಂಡಿದೆ ಮತ್ತು ಈ ನಿಟ್ಟಿನಲ್ಲಿ ನಡೆಯುವ ಹೋರಾಟಗಳನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ನೀತಿಗಳಲ್ಲಿ ವ್ಯತ್ಯಾಸವಿಲ್ಲದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕಾರ್ಯನಿರ್ವಹಿಸುತ್ತಿರುವುದನ್ನು ಪಕ್ಷದ ರಾಜ್ಯ ಸಮ್ಮೇಳನವು ಗುರುತಿಸಿದೆ. ಜನರ ಸಂಕಷ್ಟಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದವನ್ನು ಬೆಳೆಸಲಾಗುತ್ತಿದೆ. ಜನತೆಗೆ ನೀತಿಗಳ ಪರ್ಯಾಯ ಮತ್ತು ರಾಜಕೀಯ ಪರ್ಯಾಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ಅಗತ್ಯವಾದ ಒಂದು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನವು ತೀರ್ಮಾನಿಸಿದ್ದು, ರಾಜ್ಯದ ಎಡ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು, ಸಂಘಟನೆಗಳು, ಶಕ್ತಿಗಳು ಮತ್ತು ವ್ಯಕ್ತಿಗಳನ್ನು ಒಗ್ಗೂಡಿಸಿ ಈ ರಂಗವನ್ನು ಕಟ್ಟಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೋರಾಟಗಳು ಮತ್ತು ಆಂದೋಲನಗಳಲ್ಲಿ ಸಿಪಿಐ(ಎಂ) ಮತ್ತು ಇತರೆ ಕಮ್ಯುನಿಸ್ಟ್ ಪಕ್ಷಗಳು ಮುಂಚೂಣಿಯಲ್ಲಿದ್ದರೂ ಚುನಾವಣೆಗಳಲ್ಲಿ ಕಮ್ಯುನಿಸ್ಟ್ ಪಕ್ಷಗಳ ಮತಗಳಿಕೆ ಪ್ರಮಾಣ ಕುಸಿಯುತ್ತಿರುವುದನ್ನು ಗಂಭೀರವಾಗಿ ಸಮ್ಮೇಳನವು ವಿಮರ್ಶಿಸಿದ್ದು, ಕೆಳಹಂತದ ಪಕ್ಷ ಸಂಘಟನೆಗೆ ಒತ್ತು ಮತ್ತು ಸಮೂಹಗಳ ರಾಜಕೀಯ ಪ್ರಜ್ಞೆಯನ್ನು ಎತ್ತರಿಸಬೇಕೆಂದು ಸಮ್ಮೇಳನವು ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...