Homeಕರ್ನಾಟಕಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ - ಸಿಪಿಐ(ಎಂ)

ಕೇಂದ್ರ, ರಾಜ್ಯ ಸರ್ಕಾರಗಳ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸಲು ತೀರ್ಮಾನ – ಸಿಪಿಐ(ಎಂ)

- Advertisement -
- Advertisement -

ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ ಕೇಂದ್ರ-ರಾಜ್ಯ ಸರ್ಕಾರಗಳ ನೀತಿಗಳ ವಿರುದ್ಧ ಹೋರಾಟಗಳನ್ನು ತೀವ್ರಗೊಳಿಸಲು ಮತ್ತು ಕರ್ನಾಟಕದಲ್ಲಿ ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಪಕ್ಷವು ತೀರ್ಮಾನಿಸಿದೆ ಎಂದು ಸಿಪಿಐ(ಎಂ)ನ ನೂತನ ರಾಜ್ಯ ಕಾರ್ಯದರ್ಶಿ ಡಾ. ಪ್ರಕಾಶ್ ಕೆ. ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ಪಕ್ಷದ ರಾಜ್ಯ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ”ಕೇಂದ್ರದ ಮೋದಿ ಸರ್ಕಾರವು ದೇಶದ ಬಹುಸಂಖ್ಯಾತ ಬಡವರನ್ನು ಬಲಿಕೊಟ್ಟು ಮತೀಯವಾದಿ ನೀತಿಗಳ ನೆರಳಲ್ಲಿ ಕಾರ್ಪೊರೇಟ್ ಬಂಡವಾಳದಾರರ ಹಿತಕ್ಕಾಗಿ ನವ-ಉದಾರವಾದಿ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ. ಇತ್ತ ರಾಜ್ಯದ ಕಾಂಗ್ರೆಸ್ ಸರ್ಕಾರವೂ ಮೋದಿ ಸರ್ಕಾರದ ರೀತಿಯ ನೀತಿಗಳನ್ನೇ ಅನುಸರಿಸುತ್ತಿದೆ ಎಂದು ಸಮ್ಮೇಳನದಲ್ಲಿ ಮಂಡಿಸಿದ ರಾಜಕೀಯ ವರದಿಯಲ್ಲಿ ವಿಶ್ಲೇಷಿಸಿದೆ” ಎಂದು ಅವರು ಹೇಳಿದ್ದಾರೆ.

“ಕೇಂದ್ರ ಮತ್ತು ರಾಜ್ಯದ ಸರ್ಕಾರದ ನೀತಿಯಿಂದಾಗಿ ಬಡವರು, ಕೂಲಿ ಕಾರ್ಮಿಕರು, ರೈತರು, ಕಾರ್ಮಿಕರು ಮತ್ತು ಇತರೆ ದುಡಿಯುವ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಉದ್ಯೋಗ ಅಭದ್ರತೆ, ರೈತರ ಬೆಳೆಗೆ ಸಿಗದ ಬೆಲೆ, ಬಲವಂತದ ಭೂಸ್ವಾಧೀನ, ಶಿಕ್ಷಣ, ಆರೋಗ್ಯ, ಮತ್ತು ಇತರೆ ನಾಗರೀಕ ಸೇವೆಗಳ ದುಬಾರಿ, ಇತ್ಯಾದಿ ಸಮಸ್ಯೆಗಳಿಂದಾಗಿ ಜರ್ಜರಿತಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರು ಹೆಚ್ಚಿನ ಸಮಸ್ಯೆಗಳನ್ನು ಅನುಭವಿಸುತ್ತಿರುವ ಕುರಿತು ಸಮ್ಮೇಳನ ಆತಂಕ ವ್ಯಕ್ತಪಡಿಸಿದೆ” ಎಂದಿದ್ದಾರೆ. ಕೇಂದ್ರ ರಾಜ್ಯ ಸರ್ಕಾರಗಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಆರೆಸ್ಸೆಸ್ ಮತ್ತು ಅದರ ಪರಿವಾರ ಸಂಘಟನೆಗಳು ಜನರ ಧಾರ್ಮಿಕ ನಂಬಿಕೆಗಳನ್ನು ದುರುಪಯೋಗಪಡಿಸಿಕೊಂಡು ಮತೀಯವಾದಿ ನೆಲೆಯಲ್ಲಿ ಜನರ ಐಕ್ಯತೆಯನ್ನು ಮುರಿಯಲು ನಡೆಸುತ್ತಿರುವ ಪ್ರಯತ್ನಗಳನ್ನು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರವು ವಿಫಲವಾಗಿದೆ ಎಂದು ಪಕ್ಷದ ಸಮ್ಮೇಳನವು ಅಭಿಪ್ರಾಯಪಟ್ಟಿದೆ. ಕೋಮು ವಿಭಜನೆ ತಡೆಗಟ್ಟುವ ವಿಚಾರದಲ್ಲಿ ಹಾಗೂ ಜನತೆಯ ಐಕ್ಯತೆಯನ್ನು ಕಾಪಾಡಲು ಸಿಪಿಐ(ಎಂ)ನ ಕಾರ್ಯಕರ್ತರು ಮುಂಚೂಣಿಯಲ್ಲಿರುವಂತೆ ಪಕ್ಷದ ಕಾರ್ಯಕರ್ತರಿಗೆ ಸಮ್ಮೇಳನವು ಕರೆ ನೀಡಿದೆ” ಎಂದು ಡಾ.ಪ್ರಕಾಶ್ ಹೇಳಿದ್ದಾರೆ.

ಭೂರಹಿತ ಕುಟುಂಬಗಳಿಗೆ ಮನೆ ನಿವೇಶನ, ಅರಣ್ಯ ಸಾಗುವಳಿದಾರರಿಗೆ ರಕ್ಷಣೆ, ಬಲವಂತದ ಭೂಸ್ವಾಧೀನ ಕೈಬಿಡಲು, ಕರಾಳ ಕೃಷಿ ಕಾಯ್ದೆಗಳ ರದ್ದತಿಗಾಗಿ, ಸಾರ್ವಜನಿಕ ಆಸ್ತಿಗಳ ಖಾಸಗೀಕರಣದ ವಿರುದ್ಧ, ಫೆಬ್ರವರಿ 10 ರಂದು ತಿಂಗಳಲ್ಲಿ ನಡೆಯುವ ಪಾದಯಾತ್ರೆಗೆ ಪಕ್ಷವು ಬೆಂಬಲ ನೀಡುವುದಾಗಿ ಪ್ರಕಾಶ್ ಅವರು ಹೇಳಿದ್ದಾರೆ.

ಐಸಿಡಿಎಸ್ ಯೋಜನೆ ದುರ್ಬಲಗೊಳಿಸುವುದರ ವಿರುದ್ಧ, ದಲಿತರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳಿಗೆ ಕಡಿವಾಣಕ್ಕೆ ಒತ್ತಾಯಿಸಿ, ಸಾರ್ವಜನಿಕ ಪಡಿತರ ವ್ಯವಸ್ಥೆ ಬಲಪಡಿಸಲು ಹಾಗೂ ಬಡವರ ಬಿಪಿಎಲ್ ಕಾರ್ಡ್ ರದ್ಧತಿ ವಿರೋಧಿಸಿ, ಸಾಗರ ಮಾಲ ಯೋಜನೆಯಿಂದ ಕರಾವಳಿ ಜನರ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ನಿವಾರಣೆಗೆ ಒತ್ತಾಯಿಸಿ, ಕೃತಕ ಬುದ್ಧಿಮತ್ತೆಯಿಂದ ಹೆಚ್ಚುತ್ತಿರುವ ಉದ್ಯೋಗ ನಷ್ಟವನ್ನು ತಡೆಗಟ್ಟಲು, ಕೈಗಾರಿಕಾ ಉದ್ಯೋಗ (ಸ್ಥಾಯಿ ಆದೇಶ) ಕಾಯ್ದೆಯಿಂದ ಐಟಿ/ಐಟಿಇಎಸ್ ವಲಯಕ್ಕೆ ವಿನಾಯಿತಿ ನೀಡಿರುವುದನ್ನು ವಿರೋಧಿಸಿ, ಬಿಬಿಎಂಪಿ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಶೀಘ್ರವೇ ನಡೆಸುವಂತೆ ಒತ್ತಾಯಿಸುವ ನಿರ್ಣಯಗಳು ಸೇರಿದಂತೆ 33 ನಿರ್ಣಯಗಳನ್ನು ಪಕ್ಷದ ರಾಜ್ಯ ಸಮ್ಮೇಳನವು ಅಂಗೀಕರಿಸಿದೆ ಎಂದು ಅವರು ಹೇಳಿದ್ದಾರೆ.

ಅಸಂಘಟಿತ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತೆ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರು, ಅಂಗನವಾಡಿ, ಬಿಸಿಯೂಟ, ಪಂಚಾಯಿತಿ, ಹಮಾಲಿ, ಸಾರಿಗೆ ಇತ್ಯಾದಿ ಶ್ರಮಜೀವಿ ವರ್ಗಗಳ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಮ್ಮೇಳನ ನಿರ್ಣಯ ಕೈಗೊಂಡಿದೆ ಮತ್ತು ಈ ನಿಟ್ಟಿನಲ್ಲಿ ನಡೆಯುವ ಹೋರಾಟಗಳನ್ನು ಬೆಂಬಲಿಸಲು ತೀರ್ಮಾನಿಸಿದೆ ಎಂದು ಅವರು ಹೇಳಿದ್ದಾರೆ.

ಆರ್ಥಿಕ ಮತ್ತು ಸಾಮಾಜಿಕ ನೀತಿಗಳಲ್ಲಿ ವ್ಯತ್ಯಾಸವಿಲ್ಲದಂತೆ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಕಾರ್ಯನಿರ್ವಹಿಸುತ್ತಿರುವುದನ್ನು ಪಕ್ಷದ ರಾಜ್ಯ ಸಮ್ಮೇಳನವು ಗುರುತಿಸಿದೆ. ಜನರ ಸಂಕಷ್ಟಗಳನ್ನು ದುರುಪಯೋಗ ಪಡಿಸಿಕೊಂಡು ಕೋಮುವಾದವನ್ನು ಬೆಳೆಸಲಾಗುತ್ತಿದೆ. ಜನತೆಗೆ ನೀತಿಗಳ ಪರ್ಯಾಯ ಮತ್ತು ರಾಜಕೀಯ ಪರ್ಯಾಯ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಜನತೆಗೆ ಅಗತ್ಯವಾದ ಒಂದು ಎಡ-ಪ್ರಜಾಸತ್ತಾತ್ಮಕ ಶಕ್ತಿಗಳ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನವು ತೀರ್ಮಾನಿಸಿದ್ದು, ರಾಜ್ಯದ ಎಡ ಪಕ್ಷಗಳು ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳು, ಸಂಘಟನೆಗಳು, ಶಕ್ತಿಗಳು ಮತ್ತು ವ್ಯಕ್ತಿಗಳನ್ನು ಒಗ್ಗೂಡಿಸಿ ಈ ರಂಗವನ್ನು ಕಟ್ಟಲು ಉದ್ದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹೋರಾಟಗಳು ಮತ್ತು ಆಂದೋಲನಗಳಲ್ಲಿ ಸಿಪಿಐ(ಎಂ) ಮತ್ತು ಇತರೆ ಕಮ್ಯುನಿಸ್ಟ್ ಪಕ್ಷಗಳು ಮುಂಚೂಣಿಯಲ್ಲಿದ್ದರೂ ಚುನಾವಣೆಗಳಲ್ಲಿ ಕಮ್ಯುನಿಸ್ಟ್ ಪಕ್ಷಗಳ ಮತಗಳಿಕೆ ಪ್ರಮಾಣ ಕುಸಿಯುತ್ತಿರುವುದನ್ನು ಗಂಭೀರವಾಗಿ ಸಮ್ಮೇಳನವು ವಿಮರ್ಶಿಸಿದ್ದು, ಕೆಳಹಂತದ ಪಕ್ಷ ಸಂಘಟನೆಗೆ ಒತ್ತು ಮತ್ತು ಸಮೂಹಗಳ ರಾಜಕೀಯ ಪ್ರಜ್ಞೆಯನ್ನು ಎತ್ತರಿಸಬೇಕೆಂದು ಸಮ್ಮೇಳನವು ತೀರ್ಮಾನ ಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಜಾತಿ ದೌರ್ಜನ್ಯ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...